Categories: Home

ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆ: ರೈತರಿಂದ ಲೀ. ಗೆ 32 ರೂ.ಗಳಿಗೆ ಹಾಲು ಖರೀದಿ-ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನ- ಸಿಎಂ ಸಿದ್ದರಾಮಯ್ಯ

ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟಗಳು ಸೇರಿಕೊಂಡು ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿವೆ. ದೆಹಲಿಯ ನಿವಾಸಿಗಳಿಂದ ನಂದಿನಿ ಉತ್ಪನ್ನಗಳಿಗೆ ಅತ್ಯುತ್ತಮ ಸ್ಪಂದನೆ ದೊರೆಯಲಿದೆ ಎಂಬ ವಿಶ್ವಾಸ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಡೀ ದೇಶದಲ್ಲಿ ರೈತರ ಉಪಕಸುಬು ಪಶುಸಂಗೋಪನೆ. ಗುಜರಾತ್ ನಲ್ಲಿ ಕುರಿಯನ್ ಅವರು ಹಾಲು ಉತ್ಪಾದಕರ ಸಂಘವನ್ನು ಪ್ರಾರಂಭ ಮಾಡಿದರು. ಹಿಂದೆ ನಾನೂ ಕೂಡ ಪಶುಸಂಗೋಪನಾ ಸಚಿವನಾಗಿದ್ದೆ, ಒಂದು ವರ್ಷ ಕಾಲ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷನೂ ಆಗಿದ್ದೆ. ಪಶುಸಂಗೋಪನಾ ಸಚಿವನಾಗಿದ್ದಾಗಲೇ ಹಾಲು ಉತ್ಪಾದಕರಿಗೆ ಶೋಷಣೆಯಾಗುತ್ತಿದ್ದುದ್ದನ್ನು ಮನಗಂಡು ಶಾಶ್ವತ ಮಾರುಕಟ್ಟೆ ಕಲ್ಪಿಸಲು ಹಾಲು ಉತ್ಪಾದಕರ ಸಂಘಗಳನ್ನು ರಚಿಸಿದ್ದೆ ತಿಳಿಸಿದರು.

ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀ. ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು, ರಾಜ್ಯ ಸರ್ಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ 2 ರೂ. ಇದ್ದ ಪ್ರೋತ್ಸಾಹಧನ, ನಂತರ 3 ರೂ. ಆಯಿತು. ನಾನು ಮುಖ್ಯಮಂತ್ರಿಯಾದ ನಂತರ ಇದನ್ನು 5 ರೂ.ಗಳಿಗೆ ಹೆಚ್ಚಿಸಿದ್ದೆ. ಪ್ರೋತ್ಸಾಹಧನಕ್ಕಾಗಿ ಪ್ರತಿ ದಿನ 5 ಕೋಟಿ ರೂ.ಗಳನ್ನು ಸರ್ಕಾರ ವೆಚ್ಚ ಮಾಡುತ್ತಿದೆ ಎಂದರು.

ರಾಜ್ಯದಲ್ಲಿ ಒಟ್ಟು 16 ಮಿಲ್ಕ್ ಯೂನಿಯನ್‌ಗಳಿವೆ. ರಾಜ್ಯದಲ್ಲಿ ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಆಂಧ್ರಪ್ರದೇಶ, ಮಹಾರಾಷ್ಟ್ರಕ್ಕೆ ನಿತ್ಯ ತಲಾ 2.5 ಲಕ್ಷ ಲೀ.ಟರ್ ಹಾಲು ಪೂರೈಕೆಯಾಗುತ್ತಿದೆ. ಇದೀಗ ಆರಂಭಿಕ ಹಂತದಲ್ಲಿ 2.5 ಲಕ್ಷ ಲೀಟರ್ ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಇನ್ನು ಆರು ತಿಂಗಳೊಳಗೆ 5 ಲಕ್ಷ ಲೀಟರ್ ಗೆ ಏರಿಸುವ ಗುರಿ ನಮ್ಮದಾಗಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

7 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

8 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

21 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

21 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

21 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

22 hours ago