ರಾಜ್ಯದಲ್ಲಿ ಫಾಕ್ಸ್ ಕಾನ್ ಕಂಪೆನಿಯಿಂದ ಬೃಹತ್‌ ಹೂಡಿಕೆ: 1 ಲಕ್ಷ ಉದ್ಯೋಗ ಸೃಷ್ಟಿಯ ನಿರೀಕ್ಷೆ; ದೊಡ್ಡಬಳ್ಳಾಪುರದಲ್ಲಿ ಉದ್ಯಮ ಸ್ಥಾಪನೆಗೆ ಜಾಗ ಗುರುತು

ವಿಶ್ವದ ಮುಂಚೂಣಿಯ ಎಲೆಕ್ಟ್ರಾನಿಕ್ ತಯಾರಿಕಾ ಕಂಪನಿ ಹಾನ್ ಹಾಯ್ ಟೆಕ್ನಾಲಜಿ ಗ್ರೂಪ್ (ಫಾಕ್ಸ್ ಕಾನ್) ಕಂಪೆನಿಯು ರಾಜ್ಯದಲ್ಲಿ ಗಣನೀಯ ಗಾತ್ರದ ಹೂಡಿಕೆ ಮಾಡಲು ಮುಂದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಇದರಿಂದ ರಾಜ್ಯದಲ್ಲಿ 1 ಲಕ್ಷ ಉದ್ಯೋಗ ಸೃಜನೆಯಾಗುವ ನಿರೀಕ್ಷೆ ಇದ್ದು, ಉದ್ಯಮ ಸ್ಥಾಪನೆಗಾಗಿ ಬೆಂಗಳೂರು ವಿಮಾನ ನಿಲ್ದಾಣದ ಸಮೀಪ ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲ್ಲೂಕುಗಳಲ್ಲಿ 300 ಎಕರೆ ಭೂಮಿ ಗುರುತಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವು ಫಾಕ್ಸ್ ಕಾನ್ ಗೆ ಎಲ್ಲ ರೀತಿಯ ಸಹಕಾರ, ಬೆಂಬಲ ನೀಡುವುದಾಗಿ ತಿಳಿಸಿದರು. ಅತ್ಯಾಧುನಿಕ ತಂತ್ರಜ್ಞಾನಗಳ ಪರಿಣತಿಗೆ ಹೆಸರಾದ ಕಂಪೆನಿ ಫಾಕ್ಸ್‌ ಕಾನ್‌ ರಾಜ್ಯದಲ್ಲಿ ಹೂಡಿಕೆ ಮಾಡುತ್ತಿರುವುದು ಸಂತಸ ತಂದಿದೆ.

ಕರ್ನಾಟಕದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿವೆ. ಐಟಿಐಗಳನ್ನು ಇತ್ತೀಚೆಗಷ್ಟೇ ಉನ್ನತೀಕರಿಸಿದ್ದು, ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ತಂತ್ರಜ್ಞಾನಗಳ ಕುರಿತು ತರಬೇತಿ ನೀಡಲಾಗುತ್ತಿದೆ. ಅಂತೆಯೇ ಜಿ.ಟಿ.ಟಿ.ಸಿ, ಪಾಲಿಟೆಕ್ನಿಕ್‌ ಗಳು ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳು ಅತ್ಯುತ್ತಮ ತಾಂತ್ರಿಕ ಶಿಕ್ಷಣವನ್ನು ನೀಡುವ ಮೂಲಕ ಕೌಶಲ್ಯಯುತ ಮಾನವ ಸಂಪನ್ಮೂಲ ಸೃಜಿಸಲಾಗುತ್ತಿದೆ ಎಂದು ವಿವರಿಸಿದರು.

ಬೆಂಗಳೂರಿನಲ್ಲಿ ಸುಮಾರು 400 ಸರ್ಕಾರಿ ಹಾಗೂ ಖಾಸಗಿ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳಿದ್ದು, ಜಗತ್ತಿನಲ್ಲಿಯೇ ಅತಿ ಹೆಚ್ಚು. ಅಂತೆಯೇ ರಾಜ್ಯವು ಅತ್ಯುತ್ತಮ ಸೆಮಿ-ಕಂಡಕ್ಟರ್‌ ನೀತಿಯನ್ನು ಹೊಂದಿದ್ದು, ಈ ವಲಯದಲ್ಲಿಯೂ ಹೂಡಿಕೆ ಮಾಡುವ ಕುರಿತು ಪರಿಶೀಲಿಸುವಂತೆ ಸಲಹೆ ನೀಡಿದರು.

ಇದಲ್ಲದೆ ತಾಂತ್ರಿಕ ತರಬೇತಿ ನೀಡುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಕೈಜೋಡಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಫಾಕ್ಸ್‌ ಕಾನ್‌ ಅಧ್ಯಕ್ಷ ಯಂಗ್‌ ಲಿಯು ರಾಜ್ಯದಲ್ಲಿ ಹೂಡಿಕೆ ಮಾಡುವ ಕುರಿತಾಗಿ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದರು. ಸೆಮಿಕಂಡಕ್ಟರ್‌ ವಲಯದಲ್ಲಿ ಹೂಡಿಕೆಯ ಕುರಿತು ಪರಿಶೀಲಿಸುವುದಾಗಿ ಅವರು ತಿಳಿಸಿದರು.

ಫಾಕ್ಸ್‌ ಕಾನ್‌ ಕಂಪೆನಿಯು ವಿಶ್ವದ ಅತಿ ದೊಡ್ಡ ಎಲೆಕ್ಟ್ರಾನಿಕ್‌ ತಯಾರಿಕಾ ಕಂಪೆನಿಯಾಗಿದ್ದು, 2022 ರಲ್ಲಿ NT$ 6 trillion ಗೂ ಹೆಚ್ಚು ವಹಿವಾಟು ನಡೆಸಿದೆ. ಜಗತ್ತಿನ ಫಾರ್ಚೂನ್‌ 500 ಕಂಪೆನಿಗಳಲ್ಲಿ 20ನೇ ಸ್ಥಾನದಲ್ಲಿದೆ. ವಿಶ್ವದ 24 ದೇಶಗಳಲ್ಲಿ 173 ಕ್ಯಾಂಪಸ್‌ ಗಳನ್ನು ಹೊಂದಿರುವ ಕಂಪೆನಿಯು ಮುಖ್ಯವಾಗಿ ಸ್ಮಾರ್ಟ್‌ ಫೋನ್‌, ಟಿವಿ ಗಳು, ಗೇಮ್‌ ಕನ್ಸೋಲ್ಸ್‌, ಕ್ಲೌಡ್‌ ಮತ್ತು ನೆಟ್‌ ವರ್ಕಿಂಗ್‌ ಉತ್ಪನ್ನಗಳು, ಕಂಪ್ಯೂಟಿಂಗ್‌ ಉತ್ಪನ್ನಗಳು ಮತ್ತು ಇತರ ಬಿಡಿ ಭಾಗಗಳ ಉತ್ಪಾದನೆಯಲ್ಲಿ ತೊಡಗಿದೆ.

ಸಭೆಯಲ್ಲಿ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಾ.ಇ.ವಿ. ರಮಣರೆಡ್ಡಿ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್ನ್.ಎನ್. ಪ್ರಸಾದ್‌, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್‌ ಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

7 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

15 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

15 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago