ರಾಜ್ಯದಲ್ಲಿ ಫಾಕ್ಸ್ ಕಾನ್ ಕಂಪೆನಿಯಿಂದ ಬೃಹತ್‌ ಹೂಡಿಕೆ: 1 ಲಕ್ಷ ಉದ್ಯೋಗ ಸೃಷ್ಟಿಯ ನಿರೀಕ್ಷೆ; ದೊಡ್ಡಬಳ್ಳಾಪುರದಲ್ಲಿ ಉದ್ಯಮ ಸ್ಥಾಪನೆಗೆ ಜಾಗ ಗುರುತು

ವಿಶ್ವದ ಮುಂಚೂಣಿಯ ಎಲೆಕ್ಟ್ರಾನಿಕ್ ತಯಾರಿಕಾ ಕಂಪನಿ ಹಾನ್ ಹಾಯ್ ಟೆಕ್ನಾಲಜಿ ಗ್ರೂಪ್ (ಫಾಕ್ಸ್ ಕಾನ್) ಕಂಪೆನಿಯು ರಾಜ್ಯದಲ್ಲಿ ಗಣನೀಯ ಗಾತ್ರದ ಹೂಡಿಕೆ ಮಾಡಲು ಮುಂದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಇದರಿಂದ ರಾಜ್ಯದಲ್ಲಿ 1 ಲಕ್ಷ ಉದ್ಯೋಗ ಸೃಜನೆಯಾಗುವ ನಿರೀಕ್ಷೆ ಇದ್ದು, ಉದ್ಯಮ ಸ್ಥಾಪನೆಗಾಗಿ ಬೆಂಗಳೂರು ವಿಮಾನ ನಿಲ್ದಾಣದ ಸಮೀಪ ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲ್ಲೂಕುಗಳಲ್ಲಿ 300 ಎಕರೆ ಭೂಮಿ ಗುರುತಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವು ಫಾಕ್ಸ್ ಕಾನ್ ಗೆ ಎಲ್ಲ ರೀತಿಯ ಸಹಕಾರ, ಬೆಂಬಲ ನೀಡುವುದಾಗಿ ತಿಳಿಸಿದರು. ಅತ್ಯಾಧುನಿಕ ತಂತ್ರಜ್ಞಾನಗಳ ಪರಿಣತಿಗೆ ಹೆಸರಾದ ಕಂಪೆನಿ ಫಾಕ್ಸ್‌ ಕಾನ್‌ ರಾಜ್ಯದಲ್ಲಿ ಹೂಡಿಕೆ ಮಾಡುತ್ತಿರುವುದು ಸಂತಸ ತಂದಿದೆ.

ಕರ್ನಾಟಕದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿವೆ. ಐಟಿಐಗಳನ್ನು ಇತ್ತೀಚೆಗಷ್ಟೇ ಉನ್ನತೀಕರಿಸಿದ್ದು, ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ತಂತ್ರಜ್ಞಾನಗಳ ಕುರಿತು ತರಬೇತಿ ನೀಡಲಾಗುತ್ತಿದೆ. ಅಂತೆಯೇ ಜಿ.ಟಿ.ಟಿ.ಸಿ, ಪಾಲಿಟೆಕ್ನಿಕ್‌ ಗಳು ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳು ಅತ್ಯುತ್ತಮ ತಾಂತ್ರಿಕ ಶಿಕ್ಷಣವನ್ನು ನೀಡುವ ಮೂಲಕ ಕೌಶಲ್ಯಯುತ ಮಾನವ ಸಂಪನ್ಮೂಲ ಸೃಜಿಸಲಾಗುತ್ತಿದೆ ಎಂದು ವಿವರಿಸಿದರು.

ಬೆಂಗಳೂರಿನಲ್ಲಿ ಸುಮಾರು 400 ಸರ್ಕಾರಿ ಹಾಗೂ ಖಾಸಗಿ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳಿದ್ದು, ಜಗತ್ತಿನಲ್ಲಿಯೇ ಅತಿ ಹೆಚ್ಚು. ಅಂತೆಯೇ ರಾಜ್ಯವು ಅತ್ಯುತ್ತಮ ಸೆಮಿ-ಕಂಡಕ್ಟರ್‌ ನೀತಿಯನ್ನು ಹೊಂದಿದ್ದು, ಈ ವಲಯದಲ್ಲಿಯೂ ಹೂಡಿಕೆ ಮಾಡುವ ಕುರಿತು ಪರಿಶೀಲಿಸುವಂತೆ ಸಲಹೆ ನೀಡಿದರು.

ಇದಲ್ಲದೆ ತಾಂತ್ರಿಕ ತರಬೇತಿ ನೀಡುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಕೈಜೋಡಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಫಾಕ್ಸ್‌ ಕಾನ್‌ ಅಧ್ಯಕ್ಷ ಯಂಗ್‌ ಲಿಯು ರಾಜ್ಯದಲ್ಲಿ ಹೂಡಿಕೆ ಮಾಡುವ ಕುರಿತಾಗಿ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದರು. ಸೆಮಿಕಂಡಕ್ಟರ್‌ ವಲಯದಲ್ಲಿ ಹೂಡಿಕೆಯ ಕುರಿತು ಪರಿಶೀಲಿಸುವುದಾಗಿ ಅವರು ತಿಳಿಸಿದರು.

ಫಾಕ್ಸ್‌ ಕಾನ್‌ ಕಂಪೆನಿಯು ವಿಶ್ವದ ಅತಿ ದೊಡ್ಡ ಎಲೆಕ್ಟ್ರಾನಿಕ್‌ ತಯಾರಿಕಾ ಕಂಪೆನಿಯಾಗಿದ್ದು, 2022 ರಲ್ಲಿ NT$ 6 trillion ಗೂ ಹೆಚ್ಚು ವಹಿವಾಟು ನಡೆಸಿದೆ. ಜಗತ್ತಿನ ಫಾರ್ಚೂನ್‌ 500 ಕಂಪೆನಿಗಳಲ್ಲಿ 20ನೇ ಸ್ಥಾನದಲ್ಲಿದೆ. ವಿಶ್ವದ 24 ದೇಶಗಳಲ್ಲಿ 173 ಕ್ಯಾಂಪಸ್‌ ಗಳನ್ನು ಹೊಂದಿರುವ ಕಂಪೆನಿಯು ಮುಖ್ಯವಾಗಿ ಸ್ಮಾರ್ಟ್‌ ಫೋನ್‌, ಟಿವಿ ಗಳು, ಗೇಮ್‌ ಕನ್ಸೋಲ್ಸ್‌, ಕ್ಲೌಡ್‌ ಮತ್ತು ನೆಟ್‌ ವರ್ಕಿಂಗ್‌ ಉತ್ಪನ್ನಗಳು, ಕಂಪ್ಯೂಟಿಂಗ್‌ ಉತ್ಪನ್ನಗಳು ಮತ್ತು ಇತರ ಬಿಡಿ ಭಾಗಗಳ ಉತ್ಪಾದನೆಯಲ್ಲಿ ತೊಡಗಿದೆ.

ಸಭೆಯಲ್ಲಿ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಾ.ಇ.ವಿ. ರಮಣರೆಡ್ಡಿ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್ನ್.ಎನ್. ಪ್ರಸಾದ್‌, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್‌ ಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

2 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

4 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

6 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

9 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

20 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

20 hours ago