Categories: ರಾಜ್ಯ

ರಾಜ್ಯದಲ್ಲಿ ಬಿಸಿಲಿನ ಝುಳ ಏರಿಕೆ: ಬಿಸಿಲಿನ ಬೇಗೆಗೆ ಬೆಂದ ಜನ: ಇಂದು ಒಂದೇ ದಿನ ತಾಪಮಾನ 31.8c ದಾಖಲು

ರಾಜ್ಯದಲ್ಲಿ ‌ಬಿಸಿಲಿನ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ತಾಪಮಾನ ಏರಿಕೆಯಿಂದ ತತ್ತರಿಸುತ್ತಿರುವ ಜನ. ಇಂದು ಒಂದೇ ದಿನ ತಾಪಮಾನ 31.8 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗಿದೆ. ಇದು ಇದುವರೆಗೆ ದಾಖಲಾದ 5ನೇ ಅತಿ ಹೆಚ್ಚು ಆಗಸ್ಟ್ ದಿನವಾಗಿದೆ. ಇಲ್ಲಿಯವರೆಗಿನ ತಿಂಗಳ ಒಟ್ಟು ಮಳೆ 4 ಮಿ.ಮೀ. 1885ರಲ್ಲಿ ದಾಖಲಾದ 20.6 ಮಿಮೀ ಒಣ ಆಗಸ್ಟ್‌ನ ಸಾರ್ವಕಾಲಿಕ ದಾಖಲೆಯಾಗಿ ಇತಿಹಾಸ ನಿರ್ಮಾಣ ಮಾಡಿದೆ ಎಂದು ಹವಾಮಾನ ಇಲಾಖೆ ಟ್ವೀಟ್ ಮಾಡಿದೆ.

ಮುಂಗಾರು ಮಳೆ ಸಾಕಷ್ಟು ಪ್ರಮಾಣದಲ್ಲಿ ಬೀಳದೇ ಇರುವುದು ಎಲ್ಲರನ್ನೂ ಗಾಬರಿಗೊಳಿಸಿದೆ, ಬಿಸಿಲಿನ ಝುಳ ಏರಿಕೆಯಾಗಿರುವುದರಿಂದ ಜನರು ತಳಮಳಿಸುತ್ತಿದ್ದಾರೆ. ಸೂಕ್ತ ಸಮಯಕ್ಕೆ ಮಳೆ ಬಾರದೇ ರೈತರು ಬೆಳೆದ ಬೆಳೆಗಳು ಬಾಡಿಹೋಗುತ್ತಿವೆ, ಪ್ರಾಣಿ ಪಕ್ಷಿಗಳಿಗೆ ನೀರು ಇಲ್ಲದೆ ಸೊರಗುತ್ತಿವೆ.

ಬಿರು ಬಿಸಿಲಿನಿಂದ ಹೀಟ್‌ ಸ್ಟ್ರೋಕ್‌ ಮತ್ತು ಚರ್ಮಕ್ಕೆ ಸಂಬಂಧಿಸಿದ ರೋಗಗಳು ಜನರಲ್ಲಿ ಉಲ್ಬಣಗೊಳ್ಳುವ ಸಾಧ್ಯತೆ ಇರುತ್ತದೆ. ಆದ್ದರಿಂದ ಹೆಚ್ಚು ಕಾಲ ಬಿಸಿಲಿಗೆ ಚರ್ಮವನ್ನ ಒಡ್ಡದೇ ಎಚ್ಚರಿಕೆ ವಹಿಸಬೇಕಾಗುತ್ತದೆ.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

2 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

7 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

8 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

10 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

13 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago