ರಾಜ್ಯದಲ್ಲಿ ಬಿಸಿಲಿನ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ತಾಪಮಾನ ಏರಿಕೆಯಿಂದ ತತ್ತರಿಸುತ್ತಿರುವ ಜನ. ಇಂದು ಒಂದೇ ದಿನ ತಾಪಮಾನ 31.8 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗಿದೆ. ಇದು ಇದುವರೆಗೆ ದಾಖಲಾದ 5ನೇ ಅತಿ ಹೆಚ್ಚು ಆಗಸ್ಟ್ ದಿನವಾಗಿದೆ. ಇಲ್ಲಿಯವರೆಗಿನ ತಿಂಗಳ ಒಟ್ಟು ಮಳೆ 4 ಮಿ.ಮೀ. 1885ರಲ್ಲಿ ದಾಖಲಾದ 20.6 ಮಿಮೀ ಒಣ ಆಗಸ್ಟ್ನ ಸಾರ್ವಕಾಲಿಕ ದಾಖಲೆಯಾಗಿ ಇತಿಹಾಸ ನಿರ್ಮಾಣ ಮಾಡಿದೆ ಎಂದು ಹವಾಮಾನ ಇಲಾಖೆ ಟ್ವೀಟ್ ಮಾಡಿದೆ.
ಮುಂಗಾರು ಮಳೆ ಸಾಕಷ್ಟು ಪ್ರಮಾಣದಲ್ಲಿ ಬೀಳದೇ ಇರುವುದು ಎಲ್ಲರನ್ನೂ ಗಾಬರಿಗೊಳಿಸಿದೆ, ಬಿಸಿಲಿನ ಝುಳ ಏರಿಕೆಯಾಗಿರುವುದರಿಂದ ಜನರು ತಳಮಳಿಸುತ್ತಿದ್ದಾರೆ. ಸೂಕ್ತ ಸಮಯಕ್ಕೆ ಮಳೆ ಬಾರದೇ ರೈತರು ಬೆಳೆದ ಬೆಳೆಗಳು ಬಾಡಿಹೋಗುತ್ತಿವೆ, ಪ್ರಾಣಿ ಪಕ್ಷಿಗಳಿಗೆ ನೀರು ಇಲ್ಲದೆ ಸೊರಗುತ್ತಿವೆ.
ಬಿರು ಬಿಸಿಲಿನಿಂದ ಹೀಟ್ ಸ್ಟ್ರೋಕ್ ಮತ್ತು ಚರ್ಮಕ್ಕೆ ಸಂಬಂಧಿಸಿದ ರೋಗಗಳು ಜನರಲ್ಲಿ ಉಲ್ಬಣಗೊಳ್ಳುವ ಸಾಧ್ಯತೆ ಇರುತ್ತದೆ. ಆದ್ದರಿಂದ ಹೆಚ್ಚು ಕಾಲ ಬಿಸಿಲಿಗೆ ಚರ್ಮವನ್ನ ಒಡ್ಡದೇ ಎಚ್ಚರಿಕೆ ವಹಿಸಬೇಕಾಗುತ್ತದೆ.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…