Categories: ತುಮಕೂರು

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ- ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳು ಜಾರಿಯಾಗಲ್ಲ, ಸರ್ಕಾರದಲ್ಲಿ ಹಣ ಇಲ್ಲ ಎಂದು ಸುಳ್ಳೋತ್ಪಾದಿಕರಿಗೆ ಈ ಕಾರ್ಯಕ್ರಮವೇ ಒಂದು ಉತ್ತರ. ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಈ ಯೋಜನೆಗಳ ಫಲಾನುಭವಿಗಳು ಸುಳ್ಳೋತ್ಪಾದಕರ ಮುಖಕ್ಕೆ ಸರಿಯಾಗಿ ಉತ್ತರ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ತುಮಕೂರು ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ ಸವಲತ್ತು ಮತ್ತು ಸಲಕರಣೆಗಳನ್ನು ವಿತರಿಸಿ, 697 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನೂ ನೀಡಿಲ್ಲ. ಆದರೆ ರಾಜ್ಯ ಸರ್ಕಾರ 29,28,910 ರೈತರ ಖಾತೆಗೆ ಬರ ಪರಿಹಾರದ ಮೊದಲ ಕಂತನ್ನು ಜಮೆ ಮಾಡಿದೆ ಎಂದರು.

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ. ಹೊಸ ಅಭಿವೃದ್ಧಿ ಕಾರ್ಯಗಳನ್ನೂ ಕೈಗೆತ್ತಿಕೊಂಡಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ನಾಡಿನ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿರುವುದರಿಂದ ಕೇಂದ್ರದ ಬೆಲೆ ಏರಿಕೆಯಿಂದಾಗಿ ಸೃಷ್ಟಿಯಾಗಿದ್ದ ಸಂಕಷ್ಟವನ್ನು ನಾವು ಕಡಿಮೆ ಮಾಡಿದ್ದೇವೆ. ಆದರೂ ಬಿಜೆಪಿ ಪರಿವಾರದವರು ಸುಳ್ಳಿನ ಉತ್ಪಾದನೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು.

2013-18ರ ವರೆಗೆ ನಾವು ಕೊಟ್ಟ ಎಲ್ಲಾ ಭರವಸೆಗಳನ್ನೂ ಈಡೇರಿಸಿದ್ದೇವೆ. ಈ ಬಾರಿ ಚುನಾವಣೆ ವೇಳೆಯಲ್ಲಿ ಕೊಟ್ಟಿದ್ದ ಐದು ಗ್ಯಾರಂಟಿಗಳನ್ನು 8 ತಿಂಗಳ ಒಳಗೆ ಜಾರಿಗೆ ಮಾಡಿದ್ದೇವೆ. ಉಳಿದ ಭರವಸೆಗಳನ್ನೂ ಈಡೇರಿಸುತ್ತಲೇ ಇದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿಯವರೂ ಇದ್ದಾರೆ. ಆದರೂ ಬಿಜೆಪಿಯವರು ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳುಗಳ ಉತ್ಪಾದನೆಯಲ್ಲಿ ತೊಡಗಿದ್ದಾರೆ ಎಂದರು.

142 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ಒಂದು ಕೋಟಿ 50 ಲಕ್ಷ ಮಹಿಳೆಯರಿಗೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಅನುಕೂಲಗಳು ತಲುಪುತ್ತಿವೆ. ಒಂದು ಕೋಟಿ 18 ಲಕ್ಷ ಮಂದಿಗೆ ಗೃಹಜ್ಯೋತಿಯ ಅನುಕೂಲಗಳು ಸಿಕ್ಕುತ್ತಿವೆ. ಯುವನಿಧಿಗಾಗಿ ಲಕ್ಷಾಂತರ ಯುವಕ ಯುವತಿಯರು ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವರಾದ ಜಿ.ಪರಮೇಶ್ವರ್, ಸಚಿವರಾದ ಕೆ.ಎನ್.ರಾಜಣ್ಣ, ಕೃಷ್ಣಾ ಭೈರೇಗೌಡ, ಲಕ್ಷ್ಮೀ ಹೆಬ್ಬಾಳಕರ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಬೈರತಿ ಸುರೇಶ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ, ಮಾಜಿ ಸಚಿವ ಟಿ.ಬಿ.ಜಯಚಂದ್ರ ಹಾಗೂ ಜಿಲ್ಲೆಯ ಶಾಸಕರುಗಳು ಮತ್ತು ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

6 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

9 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

1 day ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago