ಗ್ಯಾರಂಟಿ ಯೋಜನೆಗಳು ಜಾರಿಯಾಗಲ್ಲ, ಸರ್ಕಾರದಲ್ಲಿ ಹಣ ಇಲ್ಲ ಎಂದು ಸುಳ್ಳೋತ್ಪಾದಿಕರಿಗೆ ಈ ಕಾರ್ಯಕ್ರಮವೇ ಒಂದು ಉತ್ತರ. ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಈ ಯೋಜನೆಗಳ ಫಲಾನುಭವಿಗಳು ಸುಳ್ಳೋತ್ಪಾದಕರ ಮುಖಕ್ಕೆ ಸರಿಯಾಗಿ ಉತ್ತರ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ತುಮಕೂರು ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ ಸವಲತ್ತು ಮತ್ತು ಸಲಕರಣೆಗಳನ್ನು ವಿತರಿಸಿ, 697 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನೂ ನೀಡಿಲ್ಲ. ಆದರೆ ರಾಜ್ಯ ಸರ್ಕಾರ 29,28,910 ರೈತರ ಖಾತೆಗೆ ಬರ ಪರಿಹಾರದ ಮೊದಲ ಕಂತನ್ನು ಜಮೆ ಮಾಡಿದೆ ಎಂದರು.
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ. ಹೊಸ ಅಭಿವೃದ್ಧಿ ಕಾರ್ಯಗಳನ್ನೂ ಕೈಗೆತ್ತಿಕೊಂಡಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ನಾಡಿನ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿರುವುದರಿಂದ ಕೇಂದ್ರದ ಬೆಲೆ ಏರಿಕೆಯಿಂದಾಗಿ ಸೃಷ್ಟಿಯಾಗಿದ್ದ ಸಂಕಷ್ಟವನ್ನು ನಾವು ಕಡಿಮೆ ಮಾಡಿದ್ದೇವೆ. ಆದರೂ ಬಿಜೆಪಿ ಪರಿವಾರದವರು ಸುಳ್ಳಿನ ಉತ್ಪಾದನೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು.
2013-18ರ ವರೆಗೆ ನಾವು ಕೊಟ್ಟ ಎಲ್ಲಾ ಭರವಸೆಗಳನ್ನೂ ಈಡೇರಿಸಿದ್ದೇವೆ. ಈ ಬಾರಿ ಚುನಾವಣೆ ವೇಳೆಯಲ್ಲಿ ಕೊಟ್ಟಿದ್ದ ಐದು ಗ್ಯಾರಂಟಿಗಳನ್ನು 8 ತಿಂಗಳ ಒಳಗೆ ಜಾರಿಗೆ ಮಾಡಿದ್ದೇವೆ. ಉಳಿದ ಭರವಸೆಗಳನ್ನೂ ಈಡೇರಿಸುತ್ತಲೇ ಇದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿಯವರೂ ಇದ್ದಾರೆ. ಆದರೂ ಬಿಜೆಪಿಯವರು ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳುಗಳ ಉತ್ಪಾದನೆಯಲ್ಲಿ ತೊಡಗಿದ್ದಾರೆ ಎಂದರು.
142 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ಒಂದು ಕೋಟಿ 50 ಲಕ್ಷ ಮಹಿಳೆಯರಿಗೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಅನುಕೂಲಗಳು ತಲುಪುತ್ತಿವೆ. ಒಂದು ಕೋಟಿ 18 ಲಕ್ಷ ಮಂದಿಗೆ ಗೃಹಜ್ಯೋತಿಯ ಅನುಕೂಲಗಳು ಸಿಕ್ಕುತ್ತಿವೆ. ಯುವನಿಧಿಗಾಗಿ ಲಕ್ಷಾಂತರ ಯುವಕ ಯುವತಿಯರು ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವರಾದ ಜಿ.ಪರಮೇಶ್ವರ್, ಸಚಿವರಾದ ಕೆ.ಎನ್.ರಾಜಣ್ಣ, ಕೃಷ್ಣಾ ಭೈರೇಗೌಡ, ಲಕ್ಷ್ಮೀ ಹೆಬ್ಬಾಳಕರ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಬೈರತಿ ಸುರೇಶ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ, ಮಾಜಿ ಸಚಿವ ಟಿ.ಬಿ.ಜಯಚಂದ್ರ ಹಾಗೂ ಜಿಲ್ಲೆಯ ಶಾಸಕರುಗಳು ಮತ್ತು ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…