ರಾಜ್ಯದಲ್ಲಿ ವಿದ್ಯುತ್ ಕೊರತೆಗೆ ಹಿಂದಿನ ಸರ್ಕಾರಗಳು ಕಾರಣ. 2013 – 18ರ ನಮ್ಮ ಅವಧಿಯಲ್ಲಿ ವಿದ್ಯುತ್ ಉತ್ಪಾದನೆ ದುಪ್ಪಟ್ಟಾದುದ್ದು ಹೊರತುಪಡಿಸಿದರೆ, ನಂತರದ ಬಿಜೆಪಿ ಅಥವಾ ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಒಂದೇ ಒಂದು ಮೆ.ವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಳ ಮಾಡಿಲ್ಲ. ಮಳೆ ಅಭಾವದಿಂದಾಗಿ ಪಂಪಸೆಟ್ ಗಳಿಗೆ ವಿದ್ಯುತ್ ವ್ಯತ್ಯಯವಾಗಿದೆ. ಸಾಧಾರಣವಾಗಿ, ಅಕ್ಟೋಬರ್ ಮಾಹೆಯವರೆಗೆ 10,000 ಮೆ.ವ್ಯಾ ವಿದ್ಯುತ್ ಖರ್ಚಾಗುತ್ತಿತ್ತು. ಆದರೆ ಈ ಬಾರಿ 16,000 ಮೆ.ವ್ಯಾಟ್ ಖರ್ಚಾಗುತ್ತಿದೆ. ಸುಮಾರು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಆದ್ದರಿಂದ ವಿದ್ಯುತ್ ಸಮಸ್ಯೆ ತಲೆದೋರಿರುವುದು ನಿಜ. ಈ ಬಗ್ಗೆ ಸಭೆ ನಡೆಸಿ, ರೈತರಿಗೆ ಮೂರು ಫೇಸ್ ಗಳಲ್ಲಿ 5 ಗಂಟೆಗಳ ಕಾಲ ಸತತ ವಿದ್ಯುತ್ ನೀಡಬೇಕು, ಹೊರಗಿನಿಂದ ವಿದ್ಯುತ್ ಖರೀದಿಸಲು ಸೂಚನೆ ನೀಡಲಾಗಿದೆ. ಕಬ್ಬು ಅರೆಯುವಿಕೆಯಿಂದ ವಿದ್ಯುತ್ ಕೋ ಜನರೇಷನ್ ನತ್ತಲೂ ಗಮನ ಹರಿಸಲು ಸೂಚಿಸಲಾಗಿದೆ. ಲೋಡ್ ಶೆಡ್ಡಿಂಗ್ ನಿಂದ ರೈತರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಆದಾಯ ತೆರಿಗೆ ಇಲಾಖೆ ತನ್ನ ಕೆಲಸ ಮಾಡಿದೆ. ಯಾರೊ ಗುತ್ತಿಗೆದಾರನ ಮನೆಯಲ್ಲಿ ಹಣ ಪತ್ತೆಯಾಗಿದ್ದರೆ ಅದಕ್ಕೆ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ. ಲೋಕಸಭೆ ಚುನಾವಣೆ ಹಾಗೂ ರಾಜಕೀಯ ಉದ್ದೇಶದಿಂದ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಹೇಳಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾವ ತನಿಖೆಯನ್ನು ನಡೆಸುವ ಅವಶ್ಯಕತೆಯಿಲ್ಲ. ದಾಳಿ ಮಾಡಿದವರು ಆದಾಯ ತೆರಿಗೆ ಇಲಾಖೆಯವರು, ತನಿಖೆಯನ್ನೂ ಅವರೇ ಮಾಡುತ್ತಾರೆ. ಪಂಚರಾಜ್ಯಗಳ ಚುನಾವಣೆಯ ಇರುವುದರಿಂದ ಸೋಲಿನ ಭಯಕ್ಕಾಗಿ ನಮ್ಮ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಚುನಾವಣೆ ನಡೆಯುವುದಕ್ಕೂ ನಮ್ಮ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಮೇವಿನ ಕೊರತೆಯಿಲ್ಲ. ಆದರೂ ಮೇವು ಬೆಳೆಸಲು ಹಾಗೂ ಶೇಖರಣೆಗೆ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ. 236 ತಾಲ್ಲೂಕುಗಳ ಪೈಕಿ 216 ತಾಲ್ಲೂಕುಗಳು ಬರಪೀಡಿತವಾಗಿದೆ. ವಾಸ್ತವವಾಗಿ 42 ಸಾವಿರ ಹೆಕ್ಟೇರ್ನಲ್ಲಿ ಬೆಳೆಹಾನಿಯಾಗಿದ್ದು, 30 ಸಾವಿರ ಕೋಟಿಯಷ್ಟು ನಷ್ಟವಾಗಿದೆ, ಕೇಂದ್ರದ ಮಾರ್ಗಸೂಚಿಯಂತೆ 4,860 ಕೋಟಿ ರೂ. ಪರಿಹಾರ ಮೊತ್ತ ಕೋರಲಾಗಿದೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ, ಖಾಸಗಿ ಕೊಳವೆಬಾವಿಗಳನ್ನು ಬಳಸಬೇಕು, ಅಗತ್ಯವಿದ್ದಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯಲು ಸಹ ತಿಳಿಸಲಾಗಿದೆ. ಒಟ್ಟಾರೆ ಜನರ ಕೈಗೆ ಕೆಲಸ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಒದಗಿಸುವುದಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದರು.
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…