Categories: ಮೈಸೂರು

ರಾಜ್ಯದಲ್ಲಿ ವಿದ್ಯುತ್ ಕೊರತೆಗೆ ಹಿಂದಿನ ಸರ್ಕಾರಗಳು ಕಾರಣ: ಈ ಬಾರಿ 16,000 ಮೆ.ವ್ಯಾಟ್ ಖರ್ಚಾಗುತ್ತಿದೆ: ಸುಮಾರು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ- ಸಿಎಂ‌ ಸಿದ್ದರಾಮಯ್ಯ

ರಾಜ್ಯದಲ್ಲಿ ವಿದ್ಯುತ್ ಕೊರತೆಗೆ ಹಿಂದಿನ ಸರ್ಕಾರಗಳು ಕಾರಣ. 2013 – 18ರ ನಮ್ಮ‌ ಅವಧಿಯಲ್ಲಿ ವಿದ್ಯುತ್ ಉತ್ಪಾದನೆ ದುಪ್ಪಟ್ಟಾದುದ್ದು ಹೊರತುಪಡಿಸಿದರೆ, ನಂತರದ ಬಿಜೆಪಿ ಅಥವಾ ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಒಂದೇ ಒಂದು ಮೆ.ವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಳ ಮಾಡಿಲ್ಲ. ಮಳೆ ಅಭಾವದಿಂದಾಗಿ ಪಂಪಸೆಟ್ ಗಳಿಗೆ ವಿದ್ಯುತ್ ವ್ಯತ್ಯಯವಾಗಿದೆ. ಸಾಧಾರಣವಾಗಿ, ಅಕ್ಟೋಬರ್ ಮಾಹೆಯವರೆಗೆ 10,000 ಮೆ.ವ್ಯಾ ವಿದ್ಯುತ್ ಖರ್ಚಾಗುತ್ತಿತ್ತು. ಆದರೆ ಈ ಬಾರಿ 16,000 ಮೆ.ವ್ಯಾಟ್ ಖರ್ಚಾಗುತ್ತಿದೆ. ಸುಮಾರು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಆದ್ದರಿಂದ ವಿದ್ಯುತ್ ಸಮಸ್ಯೆ ತಲೆದೋರಿರುವುದು ನಿಜ. ಈ ಬಗ್ಗೆ ಸಭೆ ನಡೆಸಿ, ರೈತರಿಗೆ ಮೂರು ಫೇಸ್ ಗಳಲ್ಲಿ 5 ಗಂಟೆಗಳ ಕಾಲ ಸತತ ವಿದ್ಯುತ್ ನೀಡಬೇಕು, ಹೊರಗಿನಿಂದ ವಿದ್ಯುತ್ ಖರೀದಿಸಲು ಸೂಚನೆ ನೀಡಲಾಗಿದೆ. ಕಬ್ಬು ಅರೆಯುವಿಕೆಯಿಂದ ವಿದ್ಯುತ್ ಕೋ ಜನರೇಷನ್ ನತ್ತಲೂ ಗಮನ ಹರಿಸಲು ಸೂಚಿಸಲಾಗಿದೆ. ಲೋಡ್ ಶೆಡ್ಡಿಂಗ್ ನಿಂದ ರೈತರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು‌ ಮುಖ್ಯಮಂತ್ರಿ‌ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಆದಾಯ ತೆರಿಗೆ ಇಲಾಖೆ ತನ್ನ ಕೆಲಸ ಮಾಡಿದೆ. ಯಾರೊ ಗುತ್ತಿಗೆದಾರನ ಮನೆಯಲ್ಲಿ ಹಣ ಪತ್ತೆಯಾಗಿದ್ದರೆ ಅದಕ್ಕೆ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ. ಲೋಕಸಭೆ ಚುನಾವಣೆ ಹಾಗೂ ರಾಜಕೀಯ ಉದ್ದೇಶದಿಂದ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾವ ತನಿಖೆಯನ್ನು ನಡೆಸುವ ಅವಶ್ಯಕತೆಯಿಲ್ಲ. ದಾಳಿ ಮಾಡಿದವರು ಆದಾಯ ತೆರಿಗೆ ಇಲಾಖೆಯವರು, ತನಿಖೆಯನ್ನೂ ಅವರೇ ಮಾಡುತ್ತಾರೆ. ಪಂಚರಾಜ್ಯಗಳ ಚುನಾವಣೆಯ ಇರುವುದರಿಂದ ಸೋಲಿನ ಭಯಕ್ಕಾಗಿ ನಮ್ಮ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಚುನಾವಣೆ ನಡೆಯುವುದಕ್ಕೂ ನಮ್ಮ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಮೇವಿನ ಕೊರತೆಯಿಲ್ಲ. ಆದರೂ ಮೇವು ಬೆಳೆಸಲು ಹಾಗೂ ಶೇಖರಣೆಗೆ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ. 236 ತಾಲ್ಲೂಕುಗಳ ಪೈಕಿ 216 ತಾಲ್ಲೂಕುಗಳು ಬರಪೀಡಿತವಾಗಿದೆ. ವಾಸ್ತವವಾಗಿ 42 ಸಾವಿರ ಹೆಕ್ಟೇರ್‌ನಲ್ಲಿ ಬೆಳೆಹಾನಿಯಾಗಿದ್ದು, 30 ಸಾವಿರ ಕೋಟಿಯಷ್ಟು ನಷ್ಟವಾಗಿದೆ, ಕೇಂದ್ರದ ಮಾರ್ಗಸೂಚಿಯಂತೆ 4,860 ಕೋಟಿ ರೂ. ಪರಿಹಾರ ಮೊತ್ತ ಕೋರಲಾಗಿದೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ, ಖಾಸಗಿ ಕೊಳವೆಬಾವಿಗಳನ್ನು ಬಳಸಬೇಕು, ಅಗತ್ಯವಿದ್ದಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯಲು ಸಹ ತಿಳಿಸಲಾಗಿದೆ. ಒಟ್ಟಾರೆ ಜನರ ಕೈಗೆ ಕೆಲಸ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಒದಗಿಸುವುದಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದರು.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

4 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

4 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

12 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

23 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago