ರಾಜ್ಯದಲ್ಲಿ ವಿದ್ಯುತ್ ಕೊರತೆಗೆ ಹಿಂದಿನ ಸರ್ಕಾರಗಳು ಕಾರಣ. 2013 – 18ರ ನಮ್ಮ ಅವಧಿಯಲ್ಲಿ ವಿದ್ಯುತ್ ಉತ್ಪಾದನೆ ದುಪ್ಪಟ್ಟಾದುದ್ದು ಹೊರತುಪಡಿಸಿದರೆ, ನಂತರದ ಬಿಜೆಪಿ ಅಥವಾ ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಒಂದೇ ಒಂದು ಮೆ.ವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಳ ಮಾಡಿಲ್ಲ. ಮಳೆ ಅಭಾವದಿಂದಾಗಿ ಪಂಪಸೆಟ್ ಗಳಿಗೆ ವಿದ್ಯುತ್ ವ್ಯತ್ಯಯವಾಗಿದೆ. ಸಾಧಾರಣವಾಗಿ, ಅಕ್ಟೋಬರ್ ಮಾಹೆಯವರೆಗೆ 10,000 ಮೆ.ವ್ಯಾ ವಿದ್ಯುತ್ ಖರ್ಚಾಗುತ್ತಿತ್ತು. ಆದರೆ ಈ ಬಾರಿ 16,000 ಮೆ.ವ್ಯಾಟ್ ಖರ್ಚಾಗುತ್ತಿದೆ. ಸುಮಾರು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಆದ್ದರಿಂದ ವಿದ್ಯುತ್ ಸಮಸ್ಯೆ ತಲೆದೋರಿರುವುದು ನಿಜ. ಈ ಬಗ್ಗೆ ಸಭೆ ನಡೆಸಿ, ರೈತರಿಗೆ ಮೂರು ಫೇಸ್ ಗಳಲ್ಲಿ 5 ಗಂಟೆಗಳ ಕಾಲ ಸತತ ವಿದ್ಯುತ್ ನೀಡಬೇಕು, ಹೊರಗಿನಿಂದ ವಿದ್ಯುತ್ ಖರೀದಿಸಲು ಸೂಚನೆ ನೀಡಲಾಗಿದೆ. ಕಬ್ಬು ಅರೆಯುವಿಕೆಯಿಂದ ವಿದ್ಯುತ್ ಕೋ ಜನರೇಷನ್ ನತ್ತಲೂ ಗಮನ ಹರಿಸಲು ಸೂಚಿಸಲಾಗಿದೆ. ಲೋಡ್ ಶೆಡ್ಡಿಂಗ್ ನಿಂದ ರೈತರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಆದಾಯ ತೆರಿಗೆ ಇಲಾಖೆ ತನ್ನ ಕೆಲಸ ಮಾಡಿದೆ. ಯಾರೊ ಗುತ್ತಿಗೆದಾರನ ಮನೆಯಲ್ಲಿ ಹಣ ಪತ್ತೆಯಾಗಿದ್ದರೆ ಅದಕ್ಕೆ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ. ಲೋಕಸಭೆ ಚುನಾವಣೆ ಹಾಗೂ ರಾಜಕೀಯ ಉದ್ದೇಶದಿಂದ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಹೇಳಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾವ ತನಿಖೆಯನ್ನು ನಡೆಸುವ ಅವಶ್ಯಕತೆಯಿಲ್ಲ. ದಾಳಿ ಮಾಡಿದವರು ಆದಾಯ ತೆರಿಗೆ ಇಲಾಖೆಯವರು, ತನಿಖೆಯನ್ನೂ ಅವರೇ ಮಾಡುತ್ತಾರೆ. ಪಂಚರಾಜ್ಯಗಳ ಚುನಾವಣೆಯ ಇರುವುದರಿಂದ ಸೋಲಿನ ಭಯಕ್ಕಾಗಿ ನಮ್ಮ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಚುನಾವಣೆ ನಡೆಯುವುದಕ್ಕೂ ನಮ್ಮ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಮೇವಿನ ಕೊರತೆಯಿಲ್ಲ. ಆದರೂ ಮೇವು ಬೆಳೆಸಲು ಹಾಗೂ ಶೇಖರಣೆಗೆ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ. 236 ತಾಲ್ಲೂಕುಗಳ ಪೈಕಿ 216 ತಾಲ್ಲೂಕುಗಳು ಬರಪೀಡಿತವಾಗಿದೆ. ವಾಸ್ತವವಾಗಿ 42 ಸಾವಿರ ಹೆಕ್ಟೇರ್ನಲ್ಲಿ ಬೆಳೆಹಾನಿಯಾಗಿದ್ದು, 30 ಸಾವಿರ ಕೋಟಿಯಷ್ಟು ನಷ್ಟವಾಗಿದೆ, ಕೇಂದ್ರದ ಮಾರ್ಗಸೂಚಿಯಂತೆ 4,860 ಕೋಟಿ ರೂ. ಪರಿಹಾರ ಮೊತ್ತ ಕೋರಲಾಗಿದೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ, ಖಾಸಗಿ ಕೊಳವೆಬಾವಿಗಳನ್ನು ಬಳಸಬೇಕು, ಅಗತ್ಯವಿದ್ದಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯಲು ಸಹ ತಿಳಿಸಲಾಗಿದೆ. ಒಟ್ಟಾರೆ ಜನರ ಕೈಗೆ ಕೆಲಸ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಒದಗಿಸುವುದಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದರು.
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…