Categories: ಮೈಸೂರು

ರಾಜ್ಯದಲ್ಲಿ ವಿದ್ಯುತ್ ಕೊರತೆಗೆ ಹಿಂದಿನ ಸರ್ಕಾರಗಳು ಕಾರಣ: ಈ ಬಾರಿ 16,000 ಮೆ.ವ್ಯಾಟ್ ಖರ್ಚಾಗುತ್ತಿದೆ: ಸುಮಾರು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ- ಸಿಎಂ‌ ಸಿದ್ದರಾಮಯ್ಯ

ರಾಜ್ಯದಲ್ಲಿ ವಿದ್ಯುತ್ ಕೊರತೆಗೆ ಹಿಂದಿನ ಸರ್ಕಾರಗಳು ಕಾರಣ. 2013 – 18ರ ನಮ್ಮ‌ ಅವಧಿಯಲ್ಲಿ ವಿದ್ಯುತ್ ಉತ್ಪಾದನೆ ದುಪ್ಪಟ್ಟಾದುದ್ದು ಹೊರತುಪಡಿಸಿದರೆ, ನಂತರದ ಬಿಜೆಪಿ ಅಥವಾ ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಒಂದೇ ಒಂದು ಮೆ.ವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಳ ಮಾಡಿಲ್ಲ. ಮಳೆ ಅಭಾವದಿಂದಾಗಿ ಪಂಪಸೆಟ್ ಗಳಿಗೆ ವಿದ್ಯುತ್ ವ್ಯತ್ಯಯವಾಗಿದೆ. ಸಾಧಾರಣವಾಗಿ, ಅಕ್ಟೋಬರ್ ಮಾಹೆಯವರೆಗೆ 10,000 ಮೆ.ವ್ಯಾ ವಿದ್ಯುತ್ ಖರ್ಚಾಗುತ್ತಿತ್ತು. ಆದರೆ ಈ ಬಾರಿ 16,000 ಮೆ.ವ್ಯಾಟ್ ಖರ್ಚಾಗುತ್ತಿದೆ. ಸುಮಾರು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಆದ್ದರಿಂದ ವಿದ್ಯುತ್ ಸಮಸ್ಯೆ ತಲೆದೋರಿರುವುದು ನಿಜ. ಈ ಬಗ್ಗೆ ಸಭೆ ನಡೆಸಿ, ರೈತರಿಗೆ ಮೂರು ಫೇಸ್ ಗಳಲ್ಲಿ 5 ಗಂಟೆಗಳ ಕಾಲ ಸತತ ವಿದ್ಯುತ್ ನೀಡಬೇಕು, ಹೊರಗಿನಿಂದ ವಿದ್ಯುತ್ ಖರೀದಿಸಲು ಸೂಚನೆ ನೀಡಲಾಗಿದೆ. ಕಬ್ಬು ಅರೆಯುವಿಕೆಯಿಂದ ವಿದ್ಯುತ್ ಕೋ ಜನರೇಷನ್ ನತ್ತಲೂ ಗಮನ ಹರಿಸಲು ಸೂಚಿಸಲಾಗಿದೆ. ಲೋಡ್ ಶೆಡ್ಡಿಂಗ್ ನಿಂದ ರೈತರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು‌ ಮುಖ್ಯಮಂತ್ರಿ‌ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಆದಾಯ ತೆರಿಗೆ ಇಲಾಖೆ ತನ್ನ ಕೆಲಸ ಮಾಡಿದೆ. ಯಾರೊ ಗುತ್ತಿಗೆದಾರನ ಮನೆಯಲ್ಲಿ ಹಣ ಪತ್ತೆಯಾಗಿದ್ದರೆ ಅದಕ್ಕೆ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ. ಲೋಕಸಭೆ ಚುನಾವಣೆ ಹಾಗೂ ರಾಜಕೀಯ ಉದ್ದೇಶದಿಂದ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾವ ತನಿಖೆಯನ್ನು ನಡೆಸುವ ಅವಶ್ಯಕತೆಯಿಲ್ಲ. ದಾಳಿ ಮಾಡಿದವರು ಆದಾಯ ತೆರಿಗೆ ಇಲಾಖೆಯವರು, ತನಿಖೆಯನ್ನೂ ಅವರೇ ಮಾಡುತ್ತಾರೆ. ಪಂಚರಾಜ್ಯಗಳ ಚುನಾವಣೆಯ ಇರುವುದರಿಂದ ಸೋಲಿನ ಭಯಕ್ಕಾಗಿ ನಮ್ಮ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಚುನಾವಣೆ ನಡೆಯುವುದಕ್ಕೂ ನಮ್ಮ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಮೇವಿನ ಕೊರತೆಯಿಲ್ಲ. ಆದರೂ ಮೇವು ಬೆಳೆಸಲು ಹಾಗೂ ಶೇಖರಣೆಗೆ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ. 236 ತಾಲ್ಲೂಕುಗಳ ಪೈಕಿ 216 ತಾಲ್ಲೂಕುಗಳು ಬರಪೀಡಿತವಾಗಿದೆ. ವಾಸ್ತವವಾಗಿ 42 ಸಾವಿರ ಹೆಕ್ಟೇರ್‌ನಲ್ಲಿ ಬೆಳೆಹಾನಿಯಾಗಿದ್ದು, 30 ಸಾವಿರ ಕೋಟಿಯಷ್ಟು ನಷ್ಟವಾಗಿದೆ, ಕೇಂದ್ರದ ಮಾರ್ಗಸೂಚಿಯಂತೆ 4,860 ಕೋಟಿ ರೂ. ಪರಿಹಾರ ಮೊತ್ತ ಕೋರಲಾಗಿದೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ, ಖಾಸಗಿ ಕೊಳವೆಬಾವಿಗಳನ್ನು ಬಳಸಬೇಕು, ಅಗತ್ಯವಿದ್ದಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯಲು ಸಹ ತಿಳಿಸಲಾಗಿದೆ. ಒಟ್ಟಾರೆ ಜನರ ಕೈಗೆ ಕೆಲಸ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಒದಗಿಸುವುದಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದರು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

6 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago