Categories: ಮೈಸೂರು

ರಾಜ್ಯದಲ್ಲಿ ವಿದ್ಯುತ್ ಕೊರತೆಗೆ ಹಿಂದಿನ ಸರ್ಕಾರಗಳು ಕಾರಣ: ಈ ಬಾರಿ 16,000 ಮೆ.ವ್ಯಾಟ್ ಖರ್ಚಾಗುತ್ತಿದೆ: ಸುಮಾರು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ- ಸಿಎಂ‌ ಸಿದ್ದರಾಮಯ್ಯ

ರಾಜ್ಯದಲ್ಲಿ ವಿದ್ಯುತ್ ಕೊರತೆಗೆ ಹಿಂದಿನ ಸರ್ಕಾರಗಳು ಕಾರಣ. 2013 – 18ರ ನಮ್ಮ‌ ಅವಧಿಯಲ್ಲಿ ವಿದ್ಯುತ್ ಉತ್ಪಾದನೆ ದುಪ್ಪಟ್ಟಾದುದ್ದು ಹೊರತುಪಡಿಸಿದರೆ, ನಂತರದ ಬಿಜೆಪಿ ಅಥವಾ ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಒಂದೇ ಒಂದು ಮೆ.ವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಳ ಮಾಡಿಲ್ಲ. ಮಳೆ ಅಭಾವದಿಂದಾಗಿ ಪಂಪಸೆಟ್ ಗಳಿಗೆ ವಿದ್ಯುತ್ ವ್ಯತ್ಯಯವಾಗಿದೆ. ಸಾಧಾರಣವಾಗಿ, ಅಕ್ಟೋಬರ್ ಮಾಹೆಯವರೆಗೆ 10,000 ಮೆ.ವ್ಯಾ ವಿದ್ಯುತ್ ಖರ್ಚಾಗುತ್ತಿತ್ತು. ಆದರೆ ಈ ಬಾರಿ 16,000 ಮೆ.ವ್ಯಾಟ್ ಖರ್ಚಾಗುತ್ತಿದೆ. ಸುಮಾರು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಆದ್ದರಿಂದ ವಿದ್ಯುತ್ ಸಮಸ್ಯೆ ತಲೆದೋರಿರುವುದು ನಿಜ. ಈ ಬಗ್ಗೆ ಸಭೆ ನಡೆಸಿ, ರೈತರಿಗೆ ಮೂರು ಫೇಸ್ ಗಳಲ್ಲಿ 5 ಗಂಟೆಗಳ ಕಾಲ ಸತತ ವಿದ್ಯುತ್ ನೀಡಬೇಕು, ಹೊರಗಿನಿಂದ ವಿದ್ಯುತ್ ಖರೀದಿಸಲು ಸೂಚನೆ ನೀಡಲಾಗಿದೆ. ಕಬ್ಬು ಅರೆಯುವಿಕೆಯಿಂದ ವಿದ್ಯುತ್ ಕೋ ಜನರೇಷನ್ ನತ್ತಲೂ ಗಮನ ಹರಿಸಲು ಸೂಚಿಸಲಾಗಿದೆ. ಲೋಡ್ ಶೆಡ್ಡಿಂಗ್ ನಿಂದ ರೈತರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು‌ ಮುಖ್ಯಮಂತ್ರಿ‌ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಆದಾಯ ತೆರಿಗೆ ಇಲಾಖೆ ತನ್ನ ಕೆಲಸ ಮಾಡಿದೆ. ಯಾರೊ ಗುತ್ತಿಗೆದಾರನ ಮನೆಯಲ್ಲಿ ಹಣ ಪತ್ತೆಯಾಗಿದ್ದರೆ ಅದಕ್ಕೆ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ. ಲೋಕಸಭೆ ಚುನಾವಣೆ ಹಾಗೂ ರಾಜಕೀಯ ಉದ್ದೇಶದಿಂದ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾವ ತನಿಖೆಯನ್ನು ನಡೆಸುವ ಅವಶ್ಯಕತೆಯಿಲ್ಲ. ದಾಳಿ ಮಾಡಿದವರು ಆದಾಯ ತೆರಿಗೆ ಇಲಾಖೆಯವರು, ತನಿಖೆಯನ್ನೂ ಅವರೇ ಮಾಡುತ್ತಾರೆ. ಪಂಚರಾಜ್ಯಗಳ ಚುನಾವಣೆಯ ಇರುವುದರಿಂದ ಸೋಲಿನ ಭಯಕ್ಕಾಗಿ ನಮ್ಮ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಚುನಾವಣೆ ನಡೆಯುವುದಕ್ಕೂ ನಮ್ಮ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಮೇವಿನ ಕೊರತೆಯಿಲ್ಲ. ಆದರೂ ಮೇವು ಬೆಳೆಸಲು ಹಾಗೂ ಶೇಖರಣೆಗೆ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ. 236 ತಾಲ್ಲೂಕುಗಳ ಪೈಕಿ 216 ತಾಲ್ಲೂಕುಗಳು ಬರಪೀಡಿತವಾಗಿದೆ. ವಾಸ್ತವವಾಗಿ 42 ಸಾವಿರ ಹೆಕ್ಟೇರ್‌ನಲ್ಲಿ ಬೆಳೆಹಾನಿಯಾಗಿದ್ದು, 30 ಸಾವಿರ ಕೋಟಿಯಷ್ಟು ನಷ್ಟವಾಗಿದೆ, ಕೇಂದ್ರದ ಮಾರ್ಗಸೂಚಿಯಂತೆ 4,860 ಕೋಟಿ ರೂ. ಪರಿಹಾರ ಮೊತ್ತ ಕೋರಲಾಗಿದೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ, ಖಾಸಗಿ ಕೊಳವೆಬಾವಿಗಳನ್ನು ಬಳಸಬೇಕು, ಅಗತ್ಯವಿದ್ದಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯಲು ಸಹ ತಿಳಿಸಲಾಗಿದೆ. ಒಟ್ಟಾರೆ ಜನರ ಕೈಗೆ ಕೆಲಸ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಒದಗಿಸುವುದಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದರು.

Ramesh Babu

Journalist

Recent Posts

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

35 minutes ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

12 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

16 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

18 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

20 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

23 hours ago