ರಾಜ್ಯದಲ್ಲಿ ‘ಶಕ್ತಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್

ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಸರ್ಕಾರಿ ಸ್ವಾಮ್ಯದ ಬಿಎಂಟಿಸಿ, ಕೆಎಸ್ ಆರ್ ಟಿಸಿ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ರಾಜ್ಯ ಸರ್ಕಾರ ಜೂನ್.11ರ ಭಾನುವಾರ ಚಾಲನೆ ನೀಡಲಾಗಿತ್ತು.

ಗ್ಯಾರಂಟಿ ಯೋಜನೆ ಜಾರಿಯಾದ ದಿನದ ಭಾನುವಾರದಂದು ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 12ರವರೆಗೆ ಒಟ್ಟು 5.71 ಲಕ್ಷ ಮಹಿಳೆಯರು ಪ್ರಯಾಣಿಸಿದ್ದರು. ಎರಡನೇ ದಿನವಾದ ಸೋಮವಾರಕ್ಕೆ ಸರಾಸರಿ 41. 34 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.

ಮೂರು ದಿನದಲ್ಲಿ ಒಟ್ಟು 98,58,518 ಮಹಿಳೆಯರ ಸಂಚಾರ ಮಾಡಿದ್ದಾರೆ. ಮೂರು ದಿನಗಳ ಟಿಕೆಟ್ ಮೌಲ್ಯ 21,05,78,503 ರೂಪಾಯಿ ಆಗಿದೆ.

ಶಕ್ತಿ ಯೋಜನೆ ಚಾಲನೆಯಾದ ಜೂ. 11ರ ಮಧ್ಯಾಹ್ನ 1 ರಿಂದ ಮಧ್ಯರಾತ್ರಿ 12 ರವರೆಗೂ 5,71,023 ಮಹಿಳೆಯರ ಸಂಚಾರ – ಟಿಕೆಟ್ ಮೌಲ್ಯ 1,40,22,878 ರೂಪಾಯಿ.

ಜೂ.12ರಂದು ಒಟ್ಟು ಪ್ರಯಾಣಿಕರ ಸಂಖ್ಯೆ- 1,03,67,039 , ಮಹಿಳಾ ಪ್ರಯಾಣಿಕರ ಸಂಖ್ಯೆ – 41,34,726 , ಟಿಕೆಟ್ ಮೌಲ್ಯ – 8,83,53,434 ರೂಪಾಯಿ

ಜೂ.13ರಂದು ರಾಜ್ಯಾದ್ಯಂತ ಒಟ್ಟು ಪ್ರಯಾಣಿಕರ ಸಂಖ್ಯೆ – 1,16,66,621 , ಮಹಿಳೆಯರ ಸಂಖ್ಯೆ – 51,52,769 , ಟಿಕೆಟ್ ಮೌಲ್ಯ – 10,82,02,191 ಆಗಿದೆ.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

3 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

15 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

23 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago