ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನು ಮಾತ್ರ ತೆರವುಗೊಳಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸರ್ಕಾರವೇ ಉಚಿತವಾಗಿ ಔಷಧಿಗಳನ್ನು ನೀಡುವಾಗ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಮಾರಾಟಕ್ಕೆ ಅವಕಾಶ ಕೊಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳ ಹೊರತಾಗಿ ರಾಜ್ಯದಲ್ಲಿ ಇನ್ನು 1220 ಜನೌಷಧಿ ಕೇಂದ್ರಗಳಿವೆ. ಅಲ್ಲದೇ ತಕ್ಷಣಕ್ಕೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಎಲ್ಲಾ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿ ಎಂದು ಹೇಳಿಲ್ಲ. ಹೊಸದಾಗಿ ಸಲ್ಲಿಕೆಯಾಗಿದ್ದ 31 ಪ್ರಸ್ತಾವನೆಗಳನ್ನು ತಿರಸ್ಕರಿಸಲಾಗಿದೆ ಎಂದರು.

ಹಾಲಿ ಆಸ್ಪತ್ರೆಗಳ ಆವರಣದಲ್ಲಿರುವ ಕೇಂದ್ರಗಳು ಇಲಾಖೆ ಮತ್ತು ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದಗಳನ್ನು ಪರಿಶೀಲಿಸಿ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಜನೌಷಧಿ ಕೇಂದ್ರ ಸರ್ಕಾರದ ಯೋಜನೆ ಎಂಬ ಕಾರಣಕ್ಕೆ ರಾಜಕೀಯ ಮಾಡುವ ಯಾವುದೇ ಉದ್ದೇಶವಿಲ್ಲ. ಆದರೆ, ಜನೌಷಧಿ ಕೇಂದ್ರಗಳ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿಯೇ ಔಷಧಿ ಸಿಗುವಾಗ ಆಸ್ಪತ್ರೆಗಳ ಆವರಣದಲ್ಲಿ ಔಷಧ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದು ಎಂಬ ಒಂದೇ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಸರ್ಕಾರಿ ಆಸ್ಪತ್ರೆಗಳ ಔಷಧಿ ಕೇಂದ್ರಗಳಲ್ಲಿ ಔಷಧಗಳ ಕೊರತೆಯಿಲ್ಲ. ಕೆಲವು ಕಡಿಮೆ ಬೇಡಿಕೆ ಇರುವ ಔಷಧಿಗಳು ಇಲ್ಲದಿದ್ದರೆ ಅವುಗಳನ್ನು BPPI ನಿಂದ ಖರೀದಿಸಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಉಚಿತವಾಗಿ ಔಷಧಗಳನ್ನು ಪಡೆಯಬೇಕು. ವೈದ್ಯರು ಚೀಟಿ ಕೊಟ್ಟು ಹೊರಗಡೆಯಿಂದ ಔಷಧಗಳನ್ನು ತರಿಸುವ ಪದ್ಧತಿ ನಿಲ್ಲಬೇಕು ಎಂದು ಹೇಳಿದ್ದಾರೆ.

ನಮ್ಮ ಉದ್ದೇಶ ಸ್ಪಷ್ಟವಾಗಿದೆ. ಸಾರ್ವಜನಿಕರಿಗೆ ಔಷಧಿಗಳು ಉಚಿತವಾಗಿ ಲಭ್ಯವಾಗಬೇಕು. ನಮ್ಮ ಸರ್ಕಾರೀ ಆಸ್ಪತ್ರೆಗಳಲ್ಲೇ ಜನರಿಗೆ ಉಚಿತವಾಗಿ ಔಷಧಿಗಳನ್ನು ವಿತರಿಸಲಾಗುತ್ತಿದೆ. ಹೀಗಿರುವಾಗ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಒಂದು ವೇಳೆ ಸರ್ಕಾರೀ ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಿಲ್ಲದೆ ಹೋದರೆ ಸರ್ಕಾರೀ ಆಸ್ಪತ್ರೆಗಳು ಭಾರತೀಯ ಔಷಧ ಬ್ಯೂರೋ (ಬಿಪಿಪಿಐ) ಮೂಲಕ ನೇರವಾಗಿ ಜೆನೆರಿಕ್ ಔಷಧಿಗಳನ್ನು ಖರೀದಿಸಲು ಸೂಚಿಸಲಾಗಿದೆ ಎಂದಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

58 minutes ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 hour ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

4 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

5 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

13 hours ago