ರಾಜ್ಯದಲ್ಲಿ ಸುಗಮ ಸಂಚಾರಕ್ಕಾಗಿ ವಿವಿಧ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡುವಂತೆ‌ ಮನವಿ

ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಸಿಎಂ ಸಿದ್ದರಾಮಯ್ಯ ನವರು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಬೆಳಗಾವಿ – ಹುನಗುಂದ – ರಾಯಚೂರು (NH748A), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ‌.

ರಾಜ್ಯದಲ್ಲಿ 5,225 ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.

ರಾಜ್ಯ ಸರ್ಕಾರದ ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿರುವ ಇತರ ಪ್ರಮುಖ ವಿಷಯಗಳು:

• ದಿನಕ್ಕೆ 10,000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳ ಉನ್ನತೀಕರಣ

• ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು

• ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ ನೀಡುವುದು

• ಮೈಸೂರು ರಿಂಗ್‌ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್‌ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ ನೀಡುವುದು.

• ಬೆಳಗಾವಿ ನಗರದಲ್ಲಿ ಹಳೆ NH4 ನಲ್ಲಿ ಮೇಲುಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡುವುದು

• ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ

• ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ

• ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ

• NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಧ ನಿರ್ಮಾಣ

• ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ

• ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು

• ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಹೆಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಣ

ಹೀಗೆ ರಾಜ್ಯದಲ್ಲಿ ಸುಗಮ ಸಂಚಾರಕ್ಕಾಗಿ ವಿವಿಧ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಮನವಿ ನೀಡಲಾಗಿದೆ.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

3 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

8 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

10 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

12 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

15 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago