ರಾಜ್ಯದಲ್ಲಿ ಸುಗಮ ಸಂಚಾರಕ್ಕಾಗಿ ವಿವಿಧ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡುವಂತೆ‌ ಮನವಿ

ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಸಿಎಂ ಸಿದ್ದರಾಮಯ್ಯ ನವರು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಬೆಳಗಾವಿ – ಹುನಗುಂದ – ರಾಯಚೂರು (NH748A), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ‌.

ರಾಜ್ಯದಲ್ಲಿ 5,225 ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.

ರಾಜ್ಯ ಸರ್ಕಾರದ ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿರುವ ಇತರ ಪ್ರಮುಖ ವಿಷಯಗಳು:

• ದಿನಕ್ಕೆ 10,000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳ ಉನ್ನತೀಕರಣ

• ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು

• ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ ನೀಡುವುದು

• ಮೈಸೂರು ರಿಂಗ್‌ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್‌ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ ನೀಡುವುದು.

• ಬೆಳಗಾವಿ ನಗರದಲ್ಲಿ ಹಳೆ NH4 ನಲ್ಲಿ ಮೇಲುಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡುವುದು

• ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ

• ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ

• ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ

• NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಧ ನಿರ್ಮಾಣ

• ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ

• ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು

• ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಹೆಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಣ

ಹೀಗೆ ರಾಜ್ಯದಲ್ಲಿ ಸುಗಮ ಸಂಚಾರಕ್ಕಾಗಿ ವಿವಿಧ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಮನವಿ ನೀಡಲಾಗಿದೆ.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

5 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

20 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago