ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ವಿಳಂಬದಿಂದ ಹಾಗೂ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯದಲ್ಲಿ ಶೇ. 90 ರಷ್ಟು ಬಿತ್ತನೆ ಆಗಿದ್ದು, ಅದರಲ್ಲಿ 42 ಲಕ್ಷ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ರೈತರ ಜಮೀನಿನಲ್ಲಿ ಹಸಿರು ಕಾಣಿಸಿದರೂ ಬೆಳೆಯಿಲ್ಲದ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ ಎಂದು ಹೇಳಿದ್ದಾರೆ.
ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡದ ಸದಸ್ಯರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಸದ ಸಂದರ್ಭದಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಅರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡುವ ಮೂಲಕ ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸುವಂತಾಗಬೇಕು ಎಂದರು.
ಮುಂಗಾರು ವಿಳಂಬ ಹಾಗೂ ಆಗಸ್ಟ್ ತಿಂಗಳಲ್ಲಿ ಕಳೆದ 122 ವರ್ಷಗಳಲ್ಲೇ ಅತಿ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಅಣೆಕಟ್ಟುಗಳು ಬರಿದಾಗಿವೆ. ಸೆಪ್ಟೆಂಬರ್ ತಿಂಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಆದರೆ ಮುಂಗಾರು ಮುಗಿಯುತ್ತ ಬಂದಿದೆ. ಇದು ಕುಡಿಯುವ ನೀರಿನ ಕೊರತೆ, ವಿದ್ಯುತ್ ಕೊರತೆಯ ಆತಂಕವನ್ನೂ ಸೃಷ್ಟಿಸಿದೆ ಎಂದು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಕೆ.ಆರ್.ಎಸ್. ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕುಡಿಯುವ ನೀರಿಗಾಗಿಯೇ ರಾಜ್ಯಕ್ಕೆ 33 ಟಿಎಂಸಿ ನೀರಿನ ಅವಶ್ಯಕತೆಯಿದೆ. ಆದರೆ ಮಳೆಯ ಕೊರತೆಯಿಂದ ಆತಂಕದ ಸ್ಥಿತಿ ಎದುರಾಗಿದೆ ಎಂದರು.
ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ರೈತರ ಸಂಖ್ಯೆ ಹೆಚ್ಚಿದ್ದು, ಇವರ ದತ್ತಾಂಶವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಸಂಗ್ರಹಿಸಲಾಗಿದೆ. ಜೊತೆಗೆ ಬೆಳೆ ಸಮೀಕ್ಷೆಯನ್ನು ಸಹ ಡಿಜಿಟಲೈಸ್ ಮಾಡಿರುವುದರಿಂದ ನಿಖರ ಮಾಹಿತಿ ದೊರೆಯುವುದು. ರೈತರಿಗೆ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಲ್ಲಿ ನಿಗದಿ ಪಡಿಸಿರುವ ಬೆಳೆ ನಷ್ಟ ಪರಿಹಾರ ಅತ್ಯಂತ ಕಡಿಮೆಯಿದ್ದು, ಹೆಚ್ಚಿಸುವ ಅಗತ್ಯವಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ ಬೆಳೆ ನಷ್ಟ ಪರಿಹಾರ ನೀಡಲಾಗುತ್ತಿದೆ ಎಂದಿದ್ದಾರೆ.
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…