ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ವಿಳಂಬದಿಂದ ಹಾಗೂ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯದಲ್ಲಿ ಶೇ. 90 ರಷ್ಟು ಬಿತ್ತನೆ ಆಗಿದ್ದು, ಅದರಲ್ಲಿ 42 ಲಕ್ಷ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ರೈತರ ಜಮೀನಿನಲ್ಲಿ ಹಸಿರು ಕಾಣಿಸಿದರೂ ಬೆಳೆಯಿಲ್ಲದ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ ಎಂದು ಹೇಳಿದ್ದಾರೆ.
ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡದ ಸದಸ್ಯರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಸದ ಸಂದರ್ಭದಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಅರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡುವ ಮೂಲಕ ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸುವಂತಾಗಬೇಕು ಎಂದರು.
ಮುಂಗಾರು ವಿಳಂಬ ಹಾಗೂ ಆಗಸ್ಟ್ ತಿಂಗಳಲ್ಲಿ ಕಳೆದ 122 ವರ್ಷಗಳಲ್ಲೇ ಅತಿ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಅಣೆಕಟ್ಟುಗಳು ಬರಿದಾಗಿವೆ. ಸೆಪ್ಟೆಂಬರ್ ತಿಂಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಆದರೆ ಮುಂಗಾರು ಮುಗಿಯುತ್ತ ಬಂದಿದೆ. ಇದು ಕುಡಿಯುವ ನೀರಿನ ಕೊರತೆ, ವಿದ್ಯುತ್ ಕೊರತೆಯ ಆತಂಕವನ್ನೂ ಸೃಷ್ಟಿಸಿದೆ ಎಂದು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಕೆ.ಆರ್.ಎಸ್. ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕುಡಿಯುವ ನೀರಿಗಾಗಿಯೇ ರಾಜ್ಯಕ್ಕೆ 33 ಟಿಎಂಸಿ ನೀರಿನ ಅವಶ್ಯಕತೆಯಿದೆ. ಆದರೆ ಮಳೆಯ ಕೊರತೆಯಿಂದ ಆತಂಕದ ಸ್ಥಿತಿ ಎದುರಾಗಿದೆ ಎಂದರು.
ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ರೈತರ ಸಂಖ್ಯೆ ಹೆಚ್ಚಿದ್ದು, ಇವರ ದತ್ತಾಂಶವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಸಂಗ್ರಹಿಸಲಾಗಿದೆ. ಜೊತೆಗೆ ಬೆಳೆ ಸಮೀಕ್ಷೆಯನ್ನು ಸಹ ಡಿಜಿಟಲೈಸ್ ಮಾಡಿರುವುದರಿಂದ ನಿಖರ ಮಾಹಿತಿ ದೊರೆಯುವುದು. ರೈತರಿಗೆ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಲ್ಲಿ ನಿಗದಿ ಪಡಿಸಿರುವ ಬೆಳೆ ನಷ್ಟ ಪರಿಹಾರ ಅತ್ಯಂತ ಕಡಿಮೆಯಿದ್ದು, ಹೆಚ್ಚಿಸುವ ಅಗತ್ಯವಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ ಬೆಳೆ ನಷ್ಟ ಪರಿಹಾರ ನೀಡಲಾಗುತ್ತಿದೆ ಎಂದಿದ್ದಾರೆ.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…