ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ: 42 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ: ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಬೇಕು- ಸಿಎಂ ಸಿದ್ದರಾಮಯ್ಯ

ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ವಿಳಂಬದಿಂದ ಹಾಗೂ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯದಲ್ಲಿ ಶೇ. 90 ರಷ್ಟು ಬಿತ್ತನೆ ಆಗಿದ್ದು, ಅದರಲ್ಲಿ 42 ಲಕ್ಷ ಹೆಕ್ಟೇರ್‌ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ರೈತರ ಜಮೀನಿನಲ್ಲಿ ಹಸಿರು ಕಾಣಿಸಿದರೂ ಬೆಳೆಯಿಲ್ಲದ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ ಎಂದು ಹೇಳಿದ್ದಾರೆ.

ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡದ ಸದಸ್ಯರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಸದ ಸಂದರ್ಭದಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಅರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡುವ ಮೂಲಕ ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸುವಂತಾಗಬೇಕು ಎಂದರು.

ಮುಂಗಾರು ವಿಳಂಬ ಹಾಗೂ ಆಗಸ್ಟ್‌ ತಿಂಗಳಲ್ಲಿ ಕಳೆದ 122 ವರ್ಷಗಳಲ್ಲೇ ಅತಿ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಅಣೆಕಟ್ಟುಗಳು ಬರಿದಾಗಿವೆ. ಸೆಪ್ಟೆಂಬರ್‌ ತಿಂಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಆದರೆ ಮುಂಗಾರು ಮುಗಿಯುತ್ತ ಬಂದಿದೆ. ಇದು ಕುಡಿಯುವ ನೀರಿನ ಕೊರತೆ, ವಿದ್ಯುತ್‌ ಕೊರತೆಯ ಆತಂಕವನ್ನೂ ಸೃಷ್ಟಿಸಿದೆ ಎಂದು ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಕೆ.ಆರ್.ಎಸ್. ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕುಡಿಯುವ ನೀರಿಗಾಗಿಯೇ ರಾಜ್ಯಕ್ಕೆ 33 ಟಿಎಂಸಿ ನೀರಿನ ಅವಶ್ಯಕತೆಯಿದೆ. ಆದರೆ ಮಳೆಯ ಕೊರತೆಯಿಂದ ಆತಂಕದ ಸ್ಥಿತಿ ಎದುರಾಗಿದೆ ಎಂದರು.

ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ರೈತರ ಸಂಖ್ಯೆ ಹೆಚ್ಚಿದ್ದು, ಇವರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ಸಂಗ್ರಹಿಸಲಾಗಿದೆ. ಜೊತೆಗೆ ಬೆಳೆ ಸಮೀಕ್ಷೆಯನ್ನು ಸಹ ಡಿಜಿಟಲೈಸ್‌ ಮಾಡಿರುವುದರಿಂದ ನಿಖರ ಮಾಹಿತಿ ದೊರೆಯುವುದು. ರೈತರಿಗೆ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಲ್ಲಿ ನಿಗದಿ ಪಡಿಸಿರುವ ಬೆಳೆ ನಷ್ಟ ಪರಿಹಾರ ಅತ್ಯಂತ ಕಡಿಮೆಯಿದ್ದು, ಹೆಚ್ಚಿಸುವ ಅಗತ್ಯವಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ ಬೆಳೆ ನಷ್ಟ ಪರಿಹಾರ ನೀಡಲಾಗುತ್ತಿದೆ ಎಂದಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

7 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

18 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

19 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

19 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

22 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago