ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ: 42 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ: ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಬೇಕು- ಸಿಎಂ ಸಿದ್ದರಾಮಯ್ಯ

ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ವಿಳಂಬದಿಂದ ಹಾಗೂ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯದಲ್ಲಿ ಶೇ. 90 ರಷ್ಟು ಬಿತ್ತನೆ ಆಗಿದ್ದು, ಅದರಲ್ಲಿ 42 ಲಕ್ಷ ಹೆಕ್ಟೇರ್‌ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ರೈತರ ಜಮೀನಿನಲ್ಲಿ ಹಸಿರು ಕಾಣಿಸಿದರೂ ಬೆಳೆಯಿಲ್ಲದ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ ಎಂದು ಹೇಳಿದ್ದಾರೆ.

ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡದ ಸದಸ್ಯರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಸದ ಸಂದರ್ಭದಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಅರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡುವ ಮೂಲಕ ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸುವಂತಾಗಬೇಕು ಎಂದರು.

ಮುಂಗಾರು ವಿಳಂಬ ಹಾಗೂ ಆಗಸ್ಟ್‌ ತಿಂಗಳಲ್ಲಿ ಕಳೆದ 122 ವರ್ಷಗಳಲ್ಲೇ ಅತಿ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಅಣೆಕಟ್ಟುಗಳು ಬರಿದಾಗಿವೆ. ಸೆಪ್ಟೆಂಬರ್‌ ತಿಂಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಆದರೆ ಮುಂಗಾರು ಮುಗಿಯುತ್ತ ಬಂದಿದೆ. ಇದು ಕುಡಿಯುವ ನೀರಿನ ಕೊರತೆ, ವಿದ್ಯುತ್‌ ಕೊರತೆಯ ಆತಂಕವನ್ನೂ ಸೃಷ್ಟಿಸಿದೆ ಎಂದು ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಕೆ.ಆರ್.ಎಸ್. ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕುಡಿಯುವ ನೀರಿಗಾಗಿಯೇ ರಾಜ್ಯಕ್ಕೆ 33 ಟಿಎಂಸಿ ನೀರಿನ ಅವಶ್ಯಕತೆಯಿದೆ. ಆದರೆ ಮಳೆಯ ಕೊರತೆಯಿಂದ ಆತಂಕದ ಸ್ಥಿತಿ ಎದುರಾಗಿದೆ ಎಂದರು.

ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ರೈತರ ಸಂಖ್ಯೆ ಹೆಚ್ಚಿದ್ದು, ಇವರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ಸಂಗ್ರಹಿಸಲಾಗಿದೆ. ಜೊತೆಗೆ ಬೆಳೆ ಸಮೀಕ್ಷೆಯನ್ನು ಸಹ ಡಿಜಿಟಲೈಸ್‌ ಮಾಡಿರುವುದರಿಂದ ನಿಖರ ಮಾಹಿತಿ ದೊರೆಯುವುದು. ರೈತರಿಗೆ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಲ್ಲಿ ನಿಗದಿ ಪಡಿಸಿರುವ ಬೆಳೆ ನಷ್ಟ ಪರಿಹಾರ ಅತ್ಯಂತ ಕಡಿಮೆಯಿದ್ದು, ಹೆಚ್ಚಿಸುವ ಅಗತ್ಯವಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ ಬೆಳೆ ನಷ್ಟ ಪರಿಹಾರ ನೀಡಲಾಗುತ್ತಿದೆ ಎಂದಿದ್ದಾರೆ.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

11 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

11 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

12 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

13 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

16 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

16 hours ago