ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ: 42 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ: ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಬೇಕು- ಸಿಎಂ ಸಿದ್ದರಾಮಯ್ಯ

ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ವಿಳಂಬದಿಂದ ಹಾಗೂ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯದಲ್ಲಿ ಶೇ. 90 ರಷ್ಟು ಬಿತ್ತನೆ ಆಗಿದ್ದು, ಅದರಲ್ಲಿ 42 ಲಕ್ಷ ಹೆಕ್ಟೇರ್‌ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ರೈತರ ಜಮೀನಿನಲ್ಲಿ ಹಸಿರು ಕಾಣಿಸಿದರೂ ಬೆಳೆಯಿಲ್ಲದ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ ಎಂದು ಹೇಳಿದ್ದಾರೆ.

ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡದ ಸದಸ್ಯರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಸದ ಸಂದರ್ಭದಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಅರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡುವ ಮೂಲಕ ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸುವಂತಾಗಬೇಕು ಎಂದರು.

ಮುಂಗಾರು ವಿಳಂಬ ಹಾಗೂ ಆಗಸ್ಟ್‌ ತಿಂಗಳಲ್ಲಿ ಕಳೆದ 122 ವರ್ಷಗಳಲ್ಲೇ ಅತಿ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಅಣೆಕಟ್ಟುಗಳು ಬರಿದಾಗಿವೆ. ಸೆಪ್ಟೆಂಬರ್‌ ತಿಂಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಆದರೆ ಮುಂಗಾರು ಮುಗಿಯುತ್ತ ಬಂದಿದೆ. ಇದು ಕುಡಿಯುವ ನೀರಿನ ಕೊರತೆ, ವಿದ್ಯುತ್‌ ಕೊರತೆಯ ಆತಂಕವನ್ನೂ ಸೃಷ್ಟಿಸಿದೆ ಎಂದು ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಕೆ.ಆರ್.ಎಸ್. ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕುಡಿಯುವ ನೀರಿಗಾಗಿಯೇ ರಾಜ್ಯಕ್ಕೆ 33 ಟಿಎಂಸಿ ನೀರಿನ ಅವಶ್ಯಕತೆಯಿದೆ. ಆದರೆ ಮಳೆಯ ಕೊರತೆಯಿಂದ ಆತಂಕದ ಸ್ಥಿತಿ ಎದುರಾಗಿದೆ ಎಂದರು.

ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ರೈತರ ಸಂಖ್ಯೆ ಹೆಚ್ಚಿದ್ದು, ಇವರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ಸಂಗ್ರಹಿಸಲಾಗಿದೆ. ಜೊತೆಗೆ ಬೆಳೆ ಸಮೀಕ್ಷೆಯನ್ನು ಸಹ ಡಿಜಿಟಲೈಸ್‌ ಮಾಡಿರುವುದರಿಂದ ನಿಖರ ಮಾಹಿತಿ ದೊರೆಯುವುದು. ರೈತರಿಗೆ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಲ್ಲಿ ನಿಗದಿ ಪಡಿಸಿರುವ ಬೆಳೆ ನಷ್ಟ ಪರಿಹಾರ ಅತ್ಯಂತ ಕಡಿಮೆಯಿದ್ದು, ಹೆಚ್ಚಿಸುವ ಅಗತ್ಯವಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ ಬೆಳೆ ನಷ್ಟ ಪರಿಹಾರ ನೀಡಲಾಗುತ್ತಿದೆ ಎಂದಿದ್ದಾರೆ.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

4 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

5 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

8 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

22 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago