ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ: 42 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ: ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಬೇಕು- ಸಿಎಂ ಸಿದ್ದರಾಮಯ್ಯ

ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ವಿಳಂಬದಿಂದ ಹಾಗೂ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯದಲ್ಲಿ ಶೇ. 90 ರಷ್ಟು ಬಿತ್ತನೆ ಆಗಿದ್ದು, ಅದರಲ್ಲಿ 42 ಲಕ್ಷ ಹೆಕ್ಟೇರ್‌ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ರೈತರ ಜಮೀನಿನಲ್ಲಿ ಹಸಿರು ಕಾಣಿಸಿದರೂ ಬೆಳೆಯಿಲ್ಲದ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ ಎಂದು ಹೇಳಿದ್ದಾರೆ.

ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡದ ಸದಸ್ಯರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಸದ ಸಂದರ್ಭದಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಅರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡುವ ಮೂಲಕ ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸುವಂತಾಗಬೇಕು ಎಂದರು.

ಮುಂಗಾರು ವಿಳಂಬ ಹಾಗೂ ಆಗಸ್ಟ್‌ ತಿಂಗಳಲ್ಲಿ ಕಳೆದ 122 ವರ್ಷಗಳಲ್ಲೇ ಅತಿ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಅಣೆಕಟ್ಟುಗಳು ಬರಿದಾಗಿವೆ. ಸೆಪ್ಟೆಂಬರ್‌ ತಿಂಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಆದರೆ ಮುಂಗಾರು ಮುಗಿಯುತ್ತ ಬಂದಿದೆ. ಇದು ಕುಡಿಯುವ ನೀರಿನ ಕೊರತೆ, ವಿದ್ಯುತ್‌ ಕೊರತೆಯ ಆತಂಕವನ್ನೂ ಸೃಷ್ಟಿಸಿದೆ ಎಂದು ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಕೆ.ಆರ್.ಎಸ್. ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕುಡಿಯುವ ನೀರಿಗಾಗಿಯೇ ರಾಜ್ಯಕ್ಕೆ 33 ಟಿಎಂಸಿ ನೀರಿನ ಅವಶ್ಯಕತೆಯಿದೆ. ಆದರೆ ಮಳೆಯ ಕೊರತೆಯಿಂದ ಆತಂಕದ ಸ್ಥಿತಿ ಎದುರಾಗಿದೆ ಎಂದರು.

ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ರೈತರ ಸಂಖ್ಯೆ ಹೆಚ್ಚಿದ್ದು, ಇವರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ಸಂಗ್ರಹಿಸಲಾಗಿದೆ. ಜೊತೆಗೆ ಬೆಳೆ ಸಮೀಕ್ಷೆಯನ್ನು ಸಹ ಡಿಜಿಟಲೈಸ್‌ ಮಾಡಿರುವುದರಿಂದ ನಿಖರ ಮಾಹಿತಿ ದೊರೆಯುವುದು. ರೈತರಿಗೆ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಲ್ಲಿ ನಿಗದಿ ಪಡಿಸಿರುವ ಬೆಳೆ ನಷ್ಟ ಪರಿಹಾರ ಅತ್ಯಂತ ಕಡಿಮೆಯಿದ್ದು, ಹೆಚ್ಚಿಸುವ ಅಗತ್ಯವಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ ಬೆಳೆ ನಷ್ಟ ಪರಿಹಾರ ನೀಡಲಾಗುತ್ತಿದೆ ಎಂದಿದ್ದಾರೆ.

Ramesh Babu

Journalist

Recent Posts

ಮುಗಿಯದ ಕೆ.ಎಚ್. ಮುನಿಯಪ್ಪ ಖಾತೆ ‘ಮುನಿಸು’: ಪ.ಜಾ ಎಡಗೈ ಸಮುದಾಯಕ್ಕೆ ಸಿಗುವುದೇ ಉನ್ನತ ಸ್ಥಾನ?: ಪ್ರಬಲ ಖಾತೆಗೆ ಹಿರಿಯ ನಾಯಕನ ಪಟ್ಟು

ಬೆಂಗಳೂರು ಗ್ರಾಮಾಂತರ: ರಾಜ್ಯ ಕಾಂಗ್ರೆಸ್ ನಲ್ಲಿ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದಿರುವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾದ…

8 minutes ago

ಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ- ದಸಂಸ ಜಿಲ್ಲಾ ಸಂಚಾಲಕ ರಾಮಮೂರ್ತಿ(ರಾಮು)

ಸಮಾಜದಲ್ಲಿ ದಲಿತ ಸಮುದಾಯಗಳು ಎದುರಿಸುತ್ತಿದ್ದ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಪ್ರೊ. ಬಿ ಕೃಷ್ಣಪ್ಪ ಅವರು ಎಲ್ಲರಿಗೂ ಮಾದರಿ. ಅವರ…

13 hours ago

ಜೆಡಿಎಸ್ ಬಣ ಗುದ್ದಾಟದಲ್ಲಿ ಕಾರ್ಯಕರ್ತರಿಗೆ ಸಿಕ್ಕ ‘ಸ್ಮೈಲ್ ಕ್ಯಾಪ್ಟನ್ ಆನಂದ್’

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 40 ವರ್ಷಗಳಿಂದ ರಾಜಕಾರಣ ಮಾಡುತ್ತಾ, ಮನೆ ಮಾತಾಗಿರುವ ಹುಸ್ಕೂರು ಟಿ. ಆನಂದ್ ಜೆಡಿಎಸ್ ಪಕ್ಷದಲ್ಲಿ ರಾಜ್ಯ ಪ್ರಧಾನ…

22 hours ago

ವೇಶ್ಯಾವಾಟಿಕೆ ಜಗತ್ತಿನ ಹಳೆಯದಾದ ಒಂದು ಕ್ರಿಯೆ…?

ವೇಶ್ಯಾವಾಟಿಕೆ...... ಒಂದು ವೃತ್ತಿಯೇ, ಜೀವನ ನಿರ್ವಹಣೆಯ ಒಂದು ಮಾರ್ಗವೇ, ಒಂದು ಉದ್ಯೋಗವೇ, ಸಹಜ ಪ್ರಾಕೃತಿಕ ವಿಧಾನವೇ, ಹೆಣ್ಣಿನ ಶೋಷಣೆಯೇ, ಗಂಡಿನ…

22 hours ago

ಮಳೆಗಾಲ ಆರಂಭ: ರಸ್ತೆಗುಂಡಿಗಳ ದರ್ಬಾರ್: ಟೋಲ್ ತಪ್ಪಿಸಲು ಹಳ್ಳಿ ರಸ್ತೆಗಳ ಬಳಕೆ: ಜನರ ಜೀವದ ಜೊತೆ ಚೆಲ್ಲಾಟ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ದೊಡ್ಡಬಳ್ಳಾಪುರ: ಮಳೆಗಾಲ ಆರಂಭವಾಗುತ್ತಿದ್ದಂತೆ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳ ರಸ್ತೆಗುಂಡಿಗಳ ಸಮಸ್ಯೆ ಮತ್ತೆ ತಲೆದೋರಿದ್ದು, ವಾಹನ ಸವಾರರು ಜೀವ…

23 hours ago

ಬೈಕ್ – ಕಾರಿನ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ…

1 day ago