ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ: 42 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ: ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಬೇಕು- ಸಿಎಂ ಸಿದ್ದರಾಮಯ್ಯ

ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ವಿಳಂಬದಿಂದ ಹಾಗೂ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯದಲ್ಲಿ ಶೇ. 90 ರಷ್ಟು ಬಿತ್ತನೆ ಆಗಿದ್ದು, ಅದರಲ್ಲಿ 42 ಲಕ್ಷ ಹೆಕ್ಟೇರ್‌ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ರೈತರ ಜಮೀನಿನಲ್ಲಿ ಹಸಿರು ಕಾಣಿಸಿದರೂ ಬೆಳೆಯಿಲ್ಲದ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ ಎಂದು ಹೇಳಿದ್ದಾರೆ.

ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡದ ಸದಸ್ಯರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಸದ ಸಂದರ್ಭದಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಅರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡುವ ಮೂಲಕ ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸುವಂತಾಗಬೇಕು ಎಂದರು.

ಮುಂಗಾರು ವಿಳಂಬ ಹಾಗೂ ಆಗಸ್ಟ್‌ ತಿಂಗಳಲ್ಲಿ ಕಳೆದ 122 ವರ್ಷಗಳಲ್ಲೇ ಅತಿ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಅಣೆಕಟ್ಟುಗಳು ಬರಿದಾಗಿವೆ. ಸೆಪ್ಟೆಂಬರ್‌ ತಿಂಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಆದರೆ ಮುಂಗಾರು ಮುಗಿಯುತ್ತ ಬಂದಿದೆ. ಇದು ಕುಡಿಯುವ ನೀರಿನ ಕೊರತೆ, ವಿದ್ಯುತ್‌ ಕೊರತೆಯ ಆತಂಕವನ್ನೂ ಸೃಷ್ಟಿಸಿದೆ ಎಂದು ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಕೆ.ಆರ್.ಎಸ್. ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕುಡಿಯುವ ನೀರಿಗಾಗಿಯೇ ರಾಜ್ಯಕ್ಕೆ 33 ಟಿಎಂಸಿ ನೀರಿನ ಅವಶ್ಯಕತೆಯಿದೆ. ಆದರೆ ಮಳೆಯ ಕೊರತೆಯಿಂದ ಆತಂಕದ ಸ್ಥಿತಿ ಎದುರಾಗಿದೆ ಎಂದರು.

ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ರೈತರ ಸಂಖ್ಯೆ ಹೆಚ್ಚಿದ್ದು, ಇವರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ಸಂಗ್ರಹಿಸಲಾಗಿದೆ. ಜೊತೆಗೆ ಬೆಳೆ ಸಮೀಕ್ಷೆಯನ್ನು ಸಹ ಡಿಜಿಟಲೈಸ್‌ ಮಾಡಿರುವುದರಿಂದ ನಿಖರ ಮಾಹಿತಿ ದೊರೆಯುವುದು. ರೈತರಿಗೆ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಲ್ಲಿ ನಿಗದಿ ಪಡಿಸಿರುವ ಬೆಳೆ ನಷ್ಟ ಪರಿಹಾರ ಅತ್ಯಂತ ಕಡಿಮೆಯಿದ್ದು, ಹೆಚ್ಚಿಸುವ ಅಗತ್ಯವಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ ಬೆಳೆ ನಷ್ಟ ಪರಿಹಾರ ನೀಡಲಾಗುತ್ತಿದೆ ಎಂದಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

25 minutes ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

13 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

17 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

17 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

20 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago