ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಗಳನ್ನು ಖಾಸಗಿ ಹಿಡಿತದಿಂದ ಮುಕ್ತಿ- ಸರ್ಕಾರದ ಬೊಕ್ಕಸಕ್ಕೆ 250 ಕೋಟಿ ಉಳಿತಾಯ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಗಳನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ, ಆರೋಗ್ಯ ಇಲಾಖೆಯಿಂದ ನಿರ್ವಹಣೆ ಮಾಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದಿಸಿದೆ. ಈ ಕ್ರಮದಿಂದಾಗಿ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ವಿಶ್ವಾಸವಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿಯಷ್ಟು ಉಳಿತಾಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

108 ಅಧೀನದಲ್ಲಿರುವ ಒಟ್ಟು 715 ಅಂಬ್ಯುಲೆನ್ಸ್ ನಿರ್ವಹಣೆಗಾಗಿ ರಾಜ್ಯ ಮಟ್ಟದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ತೆರೆಯಲಾಗುವುದು. ಇದಕ್ಕಾಗಿ 112 NG -ERSS ತಂತ್ರಾಂಶ ಬಳಿಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಪ್ರತಿ ಜಿಲ್ಲೆಗಳಲ್ಲಿಯೂ 108 ಕಂಟ್ರೋಲ್ ಸೆಂಟರ್ ಗಳು ಕಾರ್ಯನಿರ್ವಹಿಸಲಿದ್ದು, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ನಿರ್ವಹಣೆಯ ಜವಾಬ್ದಾರಿ ವಹಿಸಲಾಗಿದೆ ಎಂದರು.

ಅಂಬ್ಯುಲೆನ್ಸ್ ಗಳಿಗೆ ಚಾಲಕರು ಹಾಗೂ ನರ್ಸ್ ಸಿಬ್ಬಂದಿಯನ್ನು ಜಿಲ್ಲಾ ಮಟ್ಟದಲ್ಲಿಯೇ ಹೊರಗುತ್ತಿಗೆಯಲ್ಲಿ ನೇಮಕಾತಿ  ಮಾಡಿಕೊಳ್ಳಲಾಗುವುದು. ಆರಂಭದಲ್ಲಿ ಚಾಮರಾಜ ನಗರ ಜಿಲ್ಲೆಯಲ್ಲಿ ನಿರ್ವಹಣೆ ಪ್ರಾರಂಭಿಸಲಾಗುತ್ತಿದೆ. ನಂತರದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿರ್ವಹಣೆ ಕಾರ್ಯ ಆರಂಭವಾಗಲಿದೆ. ಅಲ್ಲದೇ 108 ಹೊರತಾಗಿ ರಾಜ್ಯದಲ್ಲಿರುವ 1000 ಕ್ಕೂ ಹೆಚ್ಚು ಸ್ಟೇಟ್ ಅಂಬ್ಯುಲೆನ್ಸ್ ಗಳನ್ನು ಕೂಡಾ 108 ಕಮಾಂಡ್ ಸೆಂಟರ್ ಅಧೀನಕ್ಕೆ ತರಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ‘ಗೃಹ ಆರೋಗ್ಯ’ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಔಷಧಿ, ಉಪಕರಣಗಳಿಗಾಗಿ 185 ಕೋಟಿ ಅನುದಾನ ಬಳಕೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಕೋಲಾರ ಜಿಲ್ಲೆಯಲ್ಲಿ ಯೋಜನೆ ಯಶಸ್ವಿಯಾದ ಬೆನ್ನಲ್ಲೇ, ರಾಜ್ಯಾದ್ಯಂತ ಯೋಜನೆ ಜಾರಿಯಾಗುತ್ತಿದ್ದು, ಈ ತಿಂಗಳ ಅಂತ್ಯದೊಳಗೆ ಜಿಲ್ಲೆಗಳಲ್ಲಿ ತಪಾಸಣಾ ಕಾರ್ಯ ಆರಂಭವಾಗಲಿದೆ ಎಂದರು.

ಆಶಾ ಕಾರ್ಯಕರ್ತೆಯರು ಮನೆ, ಮನೆಗೆ ತೆರಳಿ ಅಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ 30 ವರ್ಷ ಮೇಲ್ಪಟ್ಟವರು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ತಪಾಸಣೆಗೆ ಒಳಪಡಲು ನೆರವಾಗಲಿದ್ದಾರೆ. ರಕ್ತದೊತ್ತಡ, ಡಯಾಬಿಟಿಸ್, ಕ್ಯಾನ್ಸರ್ ಸೇರಿದಂತೆ  14 ಅಸಾಂಕ್ರಾಮಿಕ ರೋಗಗಳ ತಪಾಸಣೆಯನ್ನು ಸಮುದಾಯ ಆರೋಗ್ಯ ಅಧಿಕಾರಿಗಳು ನಡೆಸಲಿದ್ದಾರೆ ಎಂದರು.

ರೋಗಗಳಿಗೆ ತುತ್ತಾದವರಿಗೆ, ಅವರ ಬಳಿಗೆ ಉಚಿತವಾಗಿ ಔಷಧಗಳನ್ನು ಒದಗಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆಯಲ್ಲಿ ಒಂದು ದೂರದೃಷ್ಟಿಯ ಯೋಜನೆಯಾಗಿರುವ ‘ಗೃಹ ಆರೋಗ್ಯ’ , ಮುಂಬರುವ ವರ್ಷಗಳಲ್ಲಿ ಹಲವರ ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

53 minutes ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

4 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

4 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

15 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

16 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

16 hours ago