ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಗಳನ್ನು ಖಾಸಗಿ ಹಿಡಿತದಿಂದ ಮುಕ್ತಿ- ಸರ್ಕಾರದ ಬೊಕ್ಕಸಕ್ಕೆ 250 ಕೋಟಿ ಉಳಿತಾಯ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಗಳನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ, ಆರೋಗ್ಯ ಇಲಾಖೆಯಿಂದ ನಿರ್ವಹಣೆ ಮಾಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದಿಸಿದೆ. ಈ ಕ್ರಮದಿಂದಾಗಿ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ವಿಶ್ವಾಸವಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿಯಷ್ಟು ಉಳಿತಾಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

108 ಅಧೀನದಲ್ಲಿರುವ ಒಟ್ಟು 715 ಅಂಬ್ಯುಲೆನ್ಸ್ ನಿರ್ವಹಣೆಗಾಗಿ ರಾಜ್ಯ ಮಟ್ಟದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ತೆರೆಯಲಾಗುವುದು. ಇದಕ್ಕಾಗಿ 112 NG -ERSS ತಂತ್ರಾಂಶ ಬಳಿಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಪ್ರತಿ ಜಿಲ್ಲೆಗಳಲ್ಲಿಯೂ 108 ಕಂಟ್ರೋಲ್ ಸೆಂಟರ್ ಗಳು ಕಾರ್ಯನಿರ್ವಹಿಸಲಿದ್ದು, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ನಿರ್ವಹಣೆಯ ಜವಾಬ್ದಾರಿ ವಹಿಸಲಾಗಿದೆ ಎಂದರು.

ಅಂಬ್ಯುಲೆನ್ಸ್ ಗಳಿಗೆ ಚಾಲಕರು ಹಾಗೂ ನರ್ಸ್ ಸಿಬ್ಬಂದಿಯನ್ನು ಜಿಲ್ಲಾ ಮಟ್ಟದಲ್ಲಿಯೇ ಹೊರಗುತ್ತಿಗೆಯಲ್ಲಿ ನೇಮಕಾತಿ  ಮಾಡಿಕೊಳ್ಳಲಾಗುವುದು. ಆರಂಭದಲ್ಲಿ ಚಾಮರಾಜ ನಗರ ಜಿಲ್ಲೆಯಲ್ಲಿ ನಿರ್ವಹಣೆ ಪ್ರಾರಂಭಿಸಲಾಗುತ್ತಿದೆ. ನಂತರದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿರ್ವಹಣೆ ಕಾರ್ಯ ಆರಂಭವಾಗಲಿದೆ. ಅಲ್ಲದೇ 108 ಹೊರತಾಗಿ ರಾಜ್ಯದಲ್ಲಿರುವ 1000 ಕ್ಕೂ ಹೆಚ್ಚು ಸ್ಟೇಟ್ ಅಂಬ್ಯುಲೆನ್ಸ್ ಗಳನ್ನು ಕೂಡಾ 108 ಕಮಾಂಡ್ ಸೆಂಟರ್ ಅಧೀನಕ್ಕೆ ತರಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ‘ಗೃಹ ಆರೋಗ್ಯ’ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಔಷಧಿ, ಉಪಕರಣಗಳಿಗಾಗಿ 185 ಕೋಟಿ ಅನುದಾನ ಬಳಕೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಕೋಲಾರ ಜಿಲ್ಲೆಯಲ್ಲಿ ಯೋಜನೆ ಯಶಸ್ವಿಯಾದ ಬೆನ್ನಲ್ಲೇ, ರಾಜ್ಯಾದ್ಯಂತ ಯೋಜನೆ ಜಾರಿಯಾಗುತ್ತಿದ್ದು, ಈ ತಿಂಗಳ ಅಂತ್ಯದೊಳಗೆ ಜಿಲ್ಲೆಗಳಲ್ಲಿ ತಪಾಸಣಾ ಕಾರ್ಯ ಆರಂಭವಾಗಲಿದೆ ಎಂದರು.

ಆಶಾ ಕಾರ್ಯಕರ್ತೆಯರು ಮನೆ, ಮನೆಗೆ ತೆರಳಿ ಅಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ 30 ವರ್ಷ ಮೇಲ್ಪಟ್ಟವರು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ತಪಾಸಣೆಗೆ ಒಳಪಡಲು ನೆರವಾಗಲಿದ್ದಾರೆ. ರಕ್ತದೊತ್ತಡ, ಡಯಾಬಿಟಿಸ್, ಕ್ಯಾನ್ಸರ್ ಸೇರಿದಂತೆ  14 ಅಸಾಂಕ್ರಾಮಿಕ ರೋಗಗಳ ತಪಾಸಣೆಯನ್ನು ಸಮುದಾಯ ಆರೋಗ್ಯ ಅಧಿಕಾರಿಗಳು ನಡೆಸಲಿದ್ದಾರೆ ಎಂದರು.

ರೋಗಗಳಿಗೆ ತುತ್ತಾದವರಿಗೆ, ಅವರ ಬಳಿಗೆ ಉಚಿತವಾಗಿ ಔಷಧಗಳನ್ನು ಒದಗಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆಯಲ್ಲಿ ಒಂದು ದೂರದೃಷ್ಟಿಯ ಯೋಜನೆಯಾಗಿರುವ ‘ಗೃಹ ಆರೋಗ್ಯ’ , ಮುಂಬರುವ ವರ್ಷಗಳಲ್ಲಿ ಹಲವರ ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

7 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

17 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

18 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago