ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಗಳನ್ನು ಖಾಸಗಿ ಹಿಡಿತದಿಂದ ಮುಕ್ತಿ- ಸರ್ಕಾರದ ಬೊಕ್ಕಸಕ್ಕೆ 250 ಕೋಟಿ ಉಳಿತಾಯ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಗಳನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ, ಆರೋಗ್ಯ ಇಲಾಖೆಯಿಂದ ನಿರ್ವಹಣೆ ಮಾಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದಿಸಿದೆ. ಈ ಕ್ರಮದಿಂದಾಗಿ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ವಿಶ್ವಾಸವಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿಯಷ್ಟು ಉಳಿತಾಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

108 ಅಧೀನದಲ್ಲಿರುವ ಒಟ್ಟು 715 ಅಂಬ್ಯುಲೆನ್ಸ್ ನಿರ್ವಹಣೆಗಾಗಿ ರಾಜ್ಯ ಮಟ್ಟದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ತೆರೆಯಲಾಗುವುದು. ಇದಕ್ಕಾಗಿ 112 NG -ERSS ತಂತ್ರಾಂಶ ಬಳಿಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಪ್ರತಿ ಜಿಲ್ಲೆಗಳಲ್ಲಿಯೂ 108 ಕಂಟ್ರೋಲ್ ಸೆಂಟರ್ ಗಳು ಕಾರ್ಯನಿರ್ವಹಿಸಲಿದ್ದು, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ನಿರ್ವಹಣೆಯ ಜವಾಬ್ದಾರಿ ವಹಿಸಲಾಗಿದೆ ಎಂದರು.

ಅಂಬ್ಯುಲೆನ್ಸ್ ಗಳಿಗೆ ಚಾಲಕರು ಹಾಗೂ ನರ್ಸ್ ಸಿಬ್ಬಂದಿಯನ್ನು ಜಿಲ್ಲಾ ಮಟ್ಟದಲ್ಲಿಯೇ ಹೊರಗುತ್ತಿಗೆಯಲ್ಲಿ ನೇಮಕಾತಿ  ಮಾಡಿಕೊಳ್ಳಲಾಗುವುದು. ಆರಂಭದಲ್ಲಿ ಚಾಮರಾಜ ನಗರ ಜಿಲ್ಲೆಯಲ್ಲಿ ನಿರ್ವಹಣೆ ಪ್ರಾರಂಭಿಸಲಾಗುತ್ತಿದೆ. ನಂತರದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿರ್ವಹಣೆ ಕಾರ್ಯ ಆರಂಭವಾಗಲಿದೆ. ಅಲ್ಲದೇ 108 ಹೊರತಾಗಿ ರಾಜ್ಯದಲ್ಲಿರುವ 1000 ಕ್ಕೂ ಹೆಚ್ಚು ಸ್ಟೇಟ್ ಅಂಬ್ಯುಲೆನ್ಸ್ ಗಳನ್ನು ಕೂಡಾ 108 ಕಮಾಂಡ್ ಸೆಂಟರ್ ಅಧೀನಕ್ಕೆ ತರಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ‘ಗೃಹ ಆರೋಗ್ಯ’ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಔಷಧಿ, ಉಪಕರಣಗಳಿಗಾಗಿ 185 ಕೋಟಿ ಅನುದಾನ ಬಳಕೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಕೋಲಾರ ಜಿಲ್ಲೆಯಲ್ಲಿ ಯೋಜನೆ ಯಶಸ್ವಿಯಾದ ಬೆನ್ನಲ್ಲೇ, ರಾಜ್ಯಾದ್ಯಂತ ಯೋಜನೆ ಜಾರಿಯಾಗುತ್ತಿದ್ದು, ಈ ತಿಂಗಳ ಅಂತ್ಯದೊಳಗೆ ಜಿಲ್ಲೆಗಳಲ್ಲಿ ತಪಾಸಣಾ ಕಾರ್ಯ ಆರಂಭವಾಗಲಿದೆ ಎಂದರು.

ಆಶಾ ಕಾರ್ಯಕರ್ತೆಯರು ಮನೆ, ಮನೆಗೆ ತೆರಳಿ ಅಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ 30 ವರ್ಷ ಮೇಲ್ಪಟ್ಟವರು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ತಪಾಸಣೆಗೆ ಒಳಪಡಲು ನೆರವಾಗಲಿದ್ದಾರೆ. ರಕ್ತದೊತ್ತಡ, ಡಯಾಬಿಟಿಸ್, ಕ್ಯಾನ್ಸರ್ ಸೇರಿದಂತೆ  14 ಅಸಾಂಕ್ರಾಮಿಕ ರೋಗಗಳ ತಪಾಸಣೆಯನ್ನು ಸಮುದಾಯ ಆರೋಗ್ಯ ಅಧಿಕಾರಿಗಳು ನಡೆಸಲಿದ್ದಾರೆ ಎಂದರು.

ರೋಗಗಳಿಗೆ ತುತ್ತಾದವರಿಗೆ, ಅವರ ಬಳಿಗೆ ಉಚಿತವಾಗಿ ಔಷಧಗಳನ್ನು ಒದಗಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆಯಲ್ಲಿ ಒಂದು ದೂರದೃಷ್ಟಿಯ ಯೋಜನೆಯಾಗಿರುವ ‘ಗೃಹ ಆರೋಗ್ಯ’ , ಮುಂಬರುವ ವರ್ಷಗಳಲ್ಲಿ ಹಲವರ ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

7 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

8 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago