ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಗಳನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ, ಆರೋಗ್ಯ ಇಲಾಖೆಯಿಂದ ನಿರ್ವಹಣೆ ಮಾಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದಿಸಿದೆ. ಈ ಕ್ರಮದಿಂದಾಗಿ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ವಿಶ್ವಾಸವಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿಯಷ್ಟು ಉಳಿತಾಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
108 ಅಧೀನದಲ್ಲಿರುವ ಒಟ್ಟು 715 ಅಂಬ್ಯುಲೆನ್ಸ್ ನಿರ್ವಹಣೆಗಾಗಿ ರಾಜ್ಯ ಮಟ್ಟದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ತೆರೆಯಲಾಗುವುದು. ಇದಕ್ಕಾಗಿ 112 NG -ERSS ತಂತ್ರಾಂಶ ಬಳಿಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಪ್ರತಿ ಜಿಲ್ಲೆಗಳಲ್ಲಿಯೂ 108 ಕಂಟ್ರೋಲ್ ಸೆಂಟರ್ ಗಳು ಕಾರ್ಯನಿರ್ವಹಿಸಲಿದ್ದು, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ನಿರ್ವಹಣೆಯ ಜವಾಬ್ದಾರಿ ವಹಿಸಲಾಗಿದೆ ಎಂದರು.
ಅಂಬ್ಯುಲೆನ್ಸ್ ಗಳಿಗೆ ಚಾಲಕರು ಹಾಗೂ ನರ್ಸ್ ಸಿಬ್ಬಂದಿಯನ್ನು ಜಿಲ್ಲಾ ಮಟ್ಟದಲ್ಲಿಯೇ ಹೊರಗುತ್ತಿಗೆಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಆರಂಭದಲ್ಲಿ ಚಾಮರಾಜ ನಗರ ಜಿಲ್ಲೆಯಲ್ಲಿ ನಿರ್ವಹಣೆ ಪ್ರಾರಂಭಿಸಲಾಗುತ್ತಿದೆ. ನಂತರದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿರ್ವಹಣೆ ಕಾರ್ಯ ಆರಂಭವಾಗಲಿದೆ. ಅಲ್ಲದೇ 108 ಹೊರತಾಗಿ ರಾಜ್ಯದಲ್ಲಿರುವ 1000 ಕ್ಕೂ ಹೆಚ್ಚು ಸ್ಟೇಟ್ ಅಂಬ್ಯುಲೆನ್ಸ್ ಗಳನ್ನು ಕೂಡಾ 108 ಕಮಾಂಡ್ ಸೆಂಟರ್ ಅಧೀನಕ್ಕೆ ತರಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ‘ಗೃಹ ಆರೋಗ್ಯ’ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಔಷಧಿ, ಉಪಕರಣಗಳಿಗಾಗಿ 185 ಕೋಟಿ ಅನುದಾನ ಬಳಕೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಕೋಲಾರ ಜಿಲ್ಲೆಯಲ್ಲಿ ಯೋಜನೆ ಯಶಸ್ವಿಯಾದ ಬೆನ್ನಲ್ಲೇ, ರಾಜ್ಯಾದ್ಯಂತ ಯೋಜನೆ ಜಾರಿಯಾಗುತ್ತಿದ್ದು, ಈ ತಿಂಗಳ ಅಂತ್ಯದೊಳಗೆ ಜಿಲ್ಲೆಗಳಲ್ಲಿ ತಪಾಸಣಾ ಕಾರ್ಯ ಆರಂಭವಾಗಲಿದೆ ಎಂದರು.
ಆಶಾ ಕಾರ್ಯಕರ್ತೆಯರು ಮನೆ, ಮನೆಗೆ ತೆರಳಿ ಅಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ 30 ವರ್ಷ ಮೇಲ್ಪಟ್ಟವರು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ತಪಾಸಣೆಗೆ ಒಳಪಡಲು ನೆರವಾಗಲಿದ್ದಾರೆ. ರಕ್ತದೊತ್ತಡ, ಡಯಾಬಿಟಿಸ್, ಕ್ಯಾನ್ಸರ್ ಸೇರಿದಂತೆ 14 ಅಸಾಂಕ್ರಾಮಿಕ ರೋಗಗಳ ತಪಾಸಣೆಯನ್ನು ಸಮುದಾಯ ಆರೋಗ್ಯ ಅಧಿಕಾರಿಗಳು ನಡೆಸಲಿದ್ದಾರೆ ಎಂದರು.
ರೋಗಗಳಿಗೆ ತುತ್ತಾದವರಿಗೆ, ಅವರ ಬಳಿಗೆ ಉಚಿತವಾಗಿ ಔಷಧಗಳನ್ನು ಒದಗಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆಯಲ್ಲಿ ಒಂದು ದೂರದೃಷ್ಟಿಯ ಯೋಜನೆಯಾಗಿರುವ ‘ಗೃಹ ಆರೋಗ್ಯ’ , ಮುಂಬರುವ ವರ್ಷಗಳಲ್ಲಿ ಹಲವರ ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ತಿಳಿಸಿದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…