ರಾಜ್ಯದಲ್ಲಿ 18 ಸಾವಿರ ಮೆಗಾವ್ಯಾಟ್ ದಾಟಿದ ವಿದ್ಯುತ್ ಬೇಡಿಕೆ: ರಾಜ್ಯದ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಹೆಚ್ಚಾದ ವಿದ್ಯುತ್ ಬೇಡಿಕೆ

ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಗರಿಷ್ಠ ಬೇಡಿಕೆ ಅವಧಿ (ಪೀಕ್ ಅವರ್ ಡಿಮಾಂಡ್) ಯಲ್ಲಿ 18 ಸಾವಿರ ಮೆಗಾವ್ಯಾಟ್ ದಾಟಿದೆ. ಏಪ್ರಿಲ್ ತಿಂಗಳಲ್ಲಿ 18,500 ಮೆಗಾವ್ಯಾಟ್ ತಲುಪುವ ಸಾಧ್ಯತೆ ಇದೆ.

ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಮತ್ತು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, “ಕಳೆದ ಫೆಬ್ರವರಿಯಲ್ಲಿ ವಿದ್ಯುತ್ ಬೇಡಿಕೆ ಗರಿಷ್ಠ ಬೇಡಿಕೆ ಅವಧಿಯಲ್ಲಿ 18,350 ಮೆಗಾ ವ್ಯಾಟ್ ತಲುಪಿದ್ದರೆ, ಮಾರ್ಚ್ ತಿಂಗಳಲ್ಲಿ 18,395 ಮೆಗಾ ವ್ಯಾಟ್ ಗೆ ಏರಿಕೆಯಾಗಿದೆ. ಮಾ. 7ರಂದು ಗರಿಷ್ಠ ವಿದ್ಯುತ್ ಬೇಡಿಕೆ 18,395 ಮೆಗಾ ವ್ಯಾಟ್ ತಲುಪಿತ್ತು” ಎಂದು ಹೇಳಿದರು.

“ಕೋವಿಡ್ ಬಳಿಕ ವಿದ್ಯುತ್ ಬೇಡಿಕೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಗರಿಷ್ಠ ವಿದ್ಯುತ್ ಬೇಡಿಕೆ 2020-21ನೇ ಸಾಲಿನಲ್ಲಿ 14,367 ಮೆಗಾವ್ಯಾಟ್ ಇದ್ದರೆ, 2021-22ರಲ್ಲಿ 14,818 ಮೆ.ವ್ಯಾ., 2022-23ರಲ್ಲಿ 15,828 ಮೆ.ವ್ಯಾ. ಇದ್ದರೆ, 2023-24ರಲ್ಲಿ 17,220 ಮೆ.ವ್ಯಾ. ಇತ್ತು. ಈ ಬಾರಿ 18,385 ಮೆ.ವ್ಯಾ.ಗೆ ಏರಿಕೆಯಾಗಿದೆ. ಅದೇ ರೀತಿ ಪ್ರಸ್ತುತ ಗರಿಷ್ಠ ವಿದ್ಯುತ್ ಬಳಕೆ 357 ಮಿಲಿಯನ್ ಯೂನಿಟ್ ಇದೆ”ಎಂದು ಮಾಹಿತಿ ನೀಡಿದರು.

“ಗರಿಷ್ಠ ಬೇಡಿಕೆ ಅವಧಿಯಲ್ಲಿ 2024ರ ಏಪ್ರಿಲ್ ತಿಂಗಳಲ್ಲಿ 16,985 ಮೆ.ವ್ಯಾ. ಬೇಡಿಕೆ ಬಂದಿದ್ದು, ಈ ವರ್ಷ 18,294 ಮೆ.ವ್ಯಾ. ತಲುಪುವ ಅಂದಾಜಿದೆ. ಅಂದರೆ ವಿದ್ಯುತ್ ಬೇಡಿಕೆಯಲ್ಲಿ ಶೇ. 8.1ರಷ್ಟು ಹೆಚ್ಚಳವಾಗಲಿದೆ. ಅದೇ ರೀತಿ 2024ರ ಮೇ ತಿಂಗಳಲ್ಲಿ 16,826 ಮೆ.ವ್ಯಾ. ಬೇಡಿಕೆ ಬಂದಿದ್ದು, ಈ ಬಾರಿ 17,122 ಮೆ.ವ್ಯಾ.ಗೆ ಏರಿಕೆಯಾಗುವ (ಶೇ. 1.8ರಷ್ಟು ಹೆಚ್ಚಳ) ಅದಾಜು ಮಾಡಲಾಗಿದೆ. ಅಲ್ಲದೆ, ವಿದ್ಯುತ್ ಬಳಕೆ ಪ್ರಮಾಣ ಏಪ್ರಿಲ್ ತಿಂಗಳಲ್ಲಿ 352 ಮಿಲಿಯನ್ ಯೂನಿಟ್ ಮತ್ತು ಮೇ ತಿಂಗಳಲ್ಲಿ 331 ಮಿಲಿಯನ್ ಯೂನಿಟ್ ತಲುಪುವ ನಿರೀಕ್ಷೆಯಿದೆ”ಎಂದು ವಿವರಿಸಿದರು.

*ಬೇಡಿಕೆ ಪೂರೈಸಲು ಸಿದ್ಧತೆ*

“ರಾಜ್ಯದಲ್ಲಿ ಏರಿಕೆಯಾಗಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. 2024ರ ಡಿಸೆಂಬರ್‌ನಿಂದ ಮೇ ತಿಂಗಳವರೆಗೆ ಬೇಡಿಕೆಗೆ ಅನುಗುಣವಾಗಿ ಉತ್ತರ ಪ್ರದೇಶದಿಂದ 100ರಿಂದ 1,400 (ಗರಿಷ್ಠ ಬೇಡಿಕೆ ಅವಧಿಯಲ್ಲಿ) ಮೆಗಾವ್ಯಾಟ್ ವಿನಿಮಯ ಆಧಾರದ ಮೇಲೆ ವಿದ್ಯುತ್ ಪಡೆಯಲಾಗುತ್ತಿದೆ. ಅದೇ ರೀತಿ ಜನವರಿಯಿಂದ ಏಪ್ರಿಲ್ ಅಂತ್ಯದವರೆಗೆ ಪಂಜಾಬ್ ನಿಂದ 200ರಿಂದ 531 ಮೆಗವ್ಯಾಟ್ ವಿದ್ಯುತ್ತನ್ನು ವಿನಿಮಯ ಆಧಾರದ ಮೇಲೆ ಪಡೆಯಲು ಒಪ್ಪಂದ ಮಾಡಿಕೊಳ್ಳಲಾಗಿದೆ” ಎಂದರು.

“ಇದಲ್ಲದೆ, ಮಾ. 1ರಿಂದ 15ರವರೆಗೆ ಕೂಡಗಿಯಲ್ಲಿರುವ ಎನ್ ಟಿಪಿಸಿಯಿಂದ 310 ಮೆಗಾವ್ಯಾಟ್ ಹೆಚ್ಚುವರಿ ವಿದ್ಯುತ್ ಪಡೆಯಲಾಗುತ್ತಿತ್ತು. ಮಾ. 15ರಿಂದ ಇನ್ನೂ ಹೆಚ್ಚುವರಿಯಾಗಿ 100 ಮೆ. ವ್ಯಾ.(ಒಟ್ಟು 410 ಮ.ವ್ಯಾ.) ವಿದ್ಯುತ್ ಪಡೆಯಲಾಗಿದೆ. ಜತೆಗೆ ಮಾರ್ಚ್ ತಿಂಗಳಿನಿಂದ ಮೇ ಅಂತ್ಯದವರೆಗೆ ಇಂಧನ ಸುರಕ್ಷತೆ ನೀತಿಯಡಿ ಇತರೆ ರಾಜ್ಯಗಳಿಂದ ಮಾಸಿಕ 1000 ಮೆ.ವಯಾ. ವಿದ್ಯುತ್ ಪಡೆಯಲು ಪಿಸಿಕೆಎಲ್ ಒಪ್ಪಂದ ಮಾಡಿಕೊಂಡಿದೆ”,ಲ ಎಂದು ತಿಳಿಸಿದರು.

“ರೈತರಿಗೆ ದಿನದ 7 ಗಂಟೆ ತ್ರಿ ಫೇಸ್ ವಿದ್ಯುತ್ ಪೂರೈಸಲು ಕ್ರಮ ವಹಿಸಲಾಗಿದೆ. ಅನೇಕ ಕಡೆಗಳಲ್ಲಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸೋಲಾರ್ ವಿದ್ಯುತ್ ಒದಗಿಸಲಾಗುತ್ತಿದೆ. ಕೆಲವೆಡೆ 7 ಗಂಟೆ ತ್ರಿ ಫೇಸ್ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಬೆಳಗ್ಗೆ ಮತ್ತು ಸಂಜೆ ವೇಳೆ ವಿದ್ಯುತ್ ಪೂರೈಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ (ತೋಟದ ಮನೆಗಳು ಸೇರಿ) ನೋಡಿಕೊಳ್ಳಲು ಸಂಜೆ 6ರಿಂದ ಬೆಳಗ್ಗೆ 6 ಗಂಟೆಯವರೆಗೆ ಸಿಂಗಲ್ ಫೇಸ್ ವಿದ್ಯುತ್ ಒದಗಿಸಲಾಗುತ್ತಿದೆ”ಎಂದು ಹೇಳಿದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 days ago