Categories: ರಾಜ್ಯ

ರಾಜ್ಯದಲ್ಲಿ 236‌ ತಾಲೂಕುಗಳ ಪೈಕಿ 189 ತೀವ್ರ ಬರಪೀಡಿತ: 27 ಸಾಧಾರಣ ಬರಪೀಡಿತ: ಒಟ್ಟು 216 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ

ಈ ಹಿಂದೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ 236 ತಾಲೂಕುಗಳ ಪೈಕಿ 161 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತವೆಂದು ಒಟ್ಟು 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿತ್ತು. ಈ ಫೈಕಿ 22 ಸಾಧಾರಣ ಬರಪೀಡಿತ ತಾಲೂಕುಗಳಲ್ಲಿ ಮತ್ತೊಮ್ಮೆ ಬೆಳೆ ಹಾನಿ ಸಮೀಕ್ಷೆ ನಡೆಸಿ ಜಿಲ್ಲಾಧಿಕಾರಿಗಳು ನೀಡಿರುವ ವರದಿಯನ್ವಯ 11 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕು ಹಾಗೂ 11 ಸಾಧಾರಣ ಬರಪೀಡಿತ ತಾಲೂಕುಗಳೆಂದು ನಿರ್ಧರಿಸಲಾಗಿದೆ.

ಒಟ್ಟಾರೆ ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ – 2020ರ ಮಾರ್ಗಸೂಚಿಯಂತೆ 189 ತೀವ್ರ ಬರಪೀಡಿತ ತಾಲೂಕು ಹಾಗೂ 27 ಸಾಧಾರಣ ಬರಪೀಡಿತ ತಾಲೂಕುಗಳು ಒಳಗೊಂಡಂತೆ ಒಟ್ಟು 216 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರ್ಕಾರ  ಘೋಷಿಸಿ, ಆದೇಶಿಸಲಾಗಿದೆ.

Ramesh Babu

Journalist

Recent Posts

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

32 minutes ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

3 hours ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

4 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

18 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

20 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

23 hours ago