ಕೋಲಾರ: ತಾಲೂಕಿನ ಸುಗಟೂರು ಗ್ರಾಮದಲ್ಲಿ 51 ನೆಯ ರಾವಣಮಹೋತ್ಸವದ ಜಾತ್ರೆಯ ಅಂಗವಾಗಿ ಅಂತಾರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ನೇತೃತ್ವದಲ್ಲಿ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಹಳ್ಳಿಯಲ್ಲಿ ಆರೋಗ್ಯ ದಂಪತಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಯಶಸ್ಸು ಕಂಡಿತು.
ಈ ಸಂದರ್ಭದಲ್ಲಿ ಗೋ.ನಾ.ಸ್ವಾಮಿ ಮಾತನಾಡಿ, ಗ್ರಾಮೀಣ ಪ್ರದೇಶದ ರೈತಾಪಿ ವರ್ಗದ ಜನರು ತಮ್ಮ ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು ಆರೋಗ್ಯವೇ ಮುಖ್ಯವಾದ ಕಾಲಘಟ್ಟದಲ್ಲಿ ಹೇಗೆ ನಿಭಾಯಿಸಬೇಕು ಎಂಬುದನ್ನು ಅರಿವು ಮೂಡಿಸುವುದೇ ಆರೋಗ್ಯ ದಂಪತಿ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಆರೋಗ್ಯದ ಗುಟ್ಟುನ್ನು ಪ್ರತಿಯೊಬ್ಬ ದಂಪತಿ ಮೂಲಕ ತಿಳಿಸಲು ಸೂಕ್ತವಾದ ವೇದಿಕೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಹಾಸ್ಯ ಕಲಾವಿದರಾದ ಮಿಮಿಕ್ರಿ ಗೋಪಿ, ಪ್ರಿಯಾ ಸವಡಿ, ಸುಗಟೂರು ಗ್ರಾಪಂ ಅಧ್ಯಕ್ಷ ಭೂಪತಿಗೌಡ, ಮಾಜಿ ಅಧ್ಯಕ್ಷರಾದ ನಾರಾಯಣಗೌಡ, ದ್ಯಾವಪ್ಪ, ಮುಖಂಡರಾದ ಕಿಟ್ಟೇಗೌಡ, ಮೂರಾಂಡಹಳ್ಳಿ ರಾಘವೇಂದ್ರ, ಯಾಜಮಾನಪ್ಪ, ತಿರುಮಲಪ್ಪ, ನಾರಾಯಣಮೂರ್ತಿ, ರವಿ ಕುಮಾರ್, ರಮೇಶ್, ಶಂಕರ್, ನಾರಾಯಣಸ್ವಾಮಿ, ಮಂಜುನಾಥ್, ಸುರೇಶ್, ಮೋಹನ್, ಅಮಾನುಲ್ಲಾ, ಸಾದರ್, ಸಂತೋಷ್, ಮುರಳಿಮೋಹನ್, ಬಸವರಾಜು, ಮುಂತಾದವರು ವೇದಿಕೆಯಲ್ಲಿ ಇದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…