ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಹಸ್ತಾಂತರ ಪ್ರಕ್ರಿಯೆಗೆ ಚಾಲನೆ ನೀಡಿದರು.
ಆಂಧ್ರಪ್ರದೇಶದ ಅರಣ್ಯ ಸಚಿವರಾದ ಪವನ್ ಕಲ್ಯಾಣ್ ಅವರು ಆಂಧ್ರ ಸರ್ಕಾರದ ಪರವಾಗಿ ಒಪ್ಪಂದಕ್ಕೆ ಸಹಿ ಹಾಕಿದರು.
ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3,695 ಆನೆಗಳು ನಮ್ಮಲ್ಲಿವೆ. ಮಾನವ – ಆನೆ ಸಂಘರ್ಷ ತಡೆಗಟ್ಟಲು ಅಕ್ಕಪಕ್ಕದ ರಾಜ್ಯಗಳ ಸಹಕಾರವೂ ಅಗತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತಿದೆ ಎಂದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಸಕ ರಿಜ್ವಾನ್ ಅರ್ಷದ್, ಅರಣ್ಯ ಸಚಿವ ಈಶ್ವರ ಖಂಡ್ರೆ, ಸಚಿವರುಗಳಾದ ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್, ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…