ರಾಜ್ಯದ ಅಭಿವೃದ್ಧಿಗಾಗಿ ಪಾರ್ಲಿಮೆಂಟಿನ ಒಳಗೆ ಮತ್ತು ಹೊರಗೆ‌ ಪಕ್ಷಬೇಧ ಮರೆತು ಧ್ವನಿ ಎತ್ತಬೇಕು- ರಾಜ್ಯದ ಸಂಸದರಲ್ಲಿ‌ ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ

ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೊರಲಿನಿಂದ ಒಂದೇ ಧ್ವನಿಯಲ್ಲಿ ಪ್ರಯತ್ನಿಸುವ ಅಗತ್ಯವಿದೆ. ಇದಕ್ಕಾಗಿ ಸೌಹಾರ್ದಯುತ ಸಭೆ ಆಯೋಜಿಸಲಾಗಿದೆ. ಕರುನಾಡು ಮತ್ತು ಕನ್ನಡಿಗರ ಹಿತಕ್ಕಾಗಿ ತಮ್ಮೆಲ್ಲರ ಸಹಕಾರ ಇರಲಿ ಎಂದು ರಾಜ್ಯದಿಂದ ಆಯ್ಕೆಯಾದ ಸಂಸದರಲ್ಲಿ‌ ಸಿಎಂ ಸಿದ್ದರಾಮಯ್ಯ  ಮನವಿ ಮಾಡಿದರು.

ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಪಾಲ್ಗೊಂಡು, ಅವರು ಮಾತನಾಡಿದರು.

ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆ. ಭದ್ರಾ ಯೋಜನೆ ಬಗ್ಗೆಯೂ ಪ್ರಯತ್ನ ಮುಂದುವರೆಸಬೇಕಾಗಿದೆ. ಕೇಂದ್ರದ ಬಜೆಟ್ ನಲ್ಲೇ ಅನುದಾನ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ. ಆ ಹಣವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೊಡಿಸಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ ಎಂದರು.

ಕಲ್ಯಾಣ ಕರ್ನಾಟಕದ ರಾಯಚೂರಿಗೆ ಏಮ್ಸ್ ನೀಡಲು ಮನವಿ ಸಲ್ಲಿಸಿದ್ದೇವೆ. ಇದರ ಈಡೇರಿಕೆ ಅಗತ್ಯವಿದೆ.
ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದಿದೆ. ಏಮ್ಸ್ ಬಂದರೆ ಅಭಿವೃದ್ಧಿ ಸಾಧ್ಯ ಎಂದರು.

18,172 ಕೋಟಿ ರೂ. ಬರ ಪರಿಹಾರ ಕೇಳಿದ್ದೆವು. ಪೂರ್ತಿ ಬಂದಿಲ್ಲ, ಇದಕ್ಕಾಗಿ ನಿಮ್ಮೆಲ್ಲರ ಪ್ರಯತ್ನ ಅಗತ್ಯವಿದೆ.

ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳ ಅಭಿವೃದ್ಧಿಗಾಗಿ ಉಡಾನ್ ಯೋಜನೆಯಲ್ಲಿ ಸಲ್ಲಿಸಿರುವ ಪ್ರಸ್ತಾವನೆ ನಾಗರೀಕ ವಿಮಾನಯಾನ ಇಲಾಖೆಯಲ್ಲಿ ಬಾಕಿ ಇದೆ. ಇದರ ಈಡೇರಿಕೆಗೆ ತಾವು ಪ್ರಯತ್ನಿಸಬೇಕು ಎಂದು ತಿಳಿಸಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು Air cargo complex ಆಗಿ ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರಿಂದ ರಫ್ತು ಹೆಚ್ಚಾಗಿ ಆರ್ಥಿಕ ಚಟುವಟಿಕೆ ವೇಗಗೊಳ್ಳುತ್ತದೆ.
ಮೈಸೂರು ಅಥವಾ ಹಾಸನಕ್ಕೆ ಮತ್ತೊಂದು IIT ಬೇಕು ಎನ್ನುವ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದೇವೆ. ಇದು ಈಡೇರಿಸಬೇಕಾಗಿದೆ ಎಂದರು.

ಕಸ್ತೂರಿ ರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಲು ಮನವಿ ಮಾಡಿದ್ದೇವೆ. ಇದನ್ನು ಕೂಡಲೇ ಅಂಗೀಕರಿಸಿ ಪಶ್ಚಿಮ‌ಘಟ್ಟದ ಜನರಿಗೆ ನೆಮ್ಮದಿ ಒದಗಿಸಬೇಕು ಎಂದು ತಿಳಿಸಿದರು.

ರಾಜ್ಯ ರೈಲ್ವೇ ಸಂಪರ್ಕದಲ್ಲಿ ಹಿಂದುಳಿದಿದೆ. ಆದ್ದರಿಂದ ಆದ್ಯತೆ ಮೇಲೆ ರಾಜ್ಯಕ್ಕೆ ಹೆಚ್ಚು ಅನುದಾನ ಒದಗಿಸಿ ರೈಲ್ವೇ ಸಂಪರ್ಕ ಹೆಚ್ಚಿಸಲು ಆದ್ಯತೆ ಮೇಲೆ ಹೆಚ್ಚಿನ ಅನುದಾನ ನೀಡಬೇಕು ಎಂದು ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಲ್ಲಿ ಮನವಿ ಮಾಡುತ್ತೇನೆ.

ಗ್ರಾಮ ಸಡಕ್ ಯೋಜನೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಿಂದುಳಿದಿದೆ. ಇದನ್ನು ಸರಿದೂಗಿಸಬೇಕಾಗಿದೆ ಎಂದು ಹೇಳಿದರು.

15ನೇ ಹಣಕಾಸು ಆಯೋಗದಲ್ಲಿ ನಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು 16ನೇ ಆಯೋಗದ ಮುಂದೆ ಪ್ರಬಲವಾಗಿ ವಾದ ಮಂಡಿಸಬೇಕಾಗಿದೆ.
ಕಳಸಾ ಬಂಡೂರಿ ಯೋಜನೆಗೆ ಪರಿಸರ ಒಪ್ಪಿಗೆ ಅಗತ್ಯವಿದೆ. ಇದು ಬಾಕಿ ಇರುವುದರಿಂದ ಕೆಲಸ ಶುರು ಮಾಡಲು ಸಾಧ್ಯವಾಗಿಲ್ಲ ಎಂದರು.

1971 ಸೆನ್ಸಸ್ ಪರಿಗಣಿಸಿದ್ದರೆ ನಮಗೆ, ನಮ್ಮ ರಾಜ್ಯಕ್ಕೆ ಅನ್ಯಾಯ ಆಗಲು ಸಾಧ್ಯವಾಗುತ್ತಿರಲಿಲ್ಲ. 15ನೇ ಹಣಕಾಸು ಆಯೋಗದಲ್ಲಿ ಶಿಫಾರಸ್ಸು ಮಾಡಿರುವ ಮತ್ತು ಬಜೆಟ್ ನಲ್ಲಿ ಕೇಂದ್ರ ಸರ್ಕಾರವೇ ರಾಜ್ಯಕ್ಕೆ ಘೋಷಿಸಿರುವ ಮೊತ್ತವನ್ನು ಒದಗಿಸಿಕೊಡಬೇಕು ಎಂದು ಮನವಿ ಮಾಡುತ್ತೇನೆ.
ಇನ್‌ಪುಟ್ ಸಬ್ಸಿಡಿ ಸಮರ್ಪವಾಗಿ ಒದಗಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ಈ ಎಲ್ಲಾ ಬೇಡಿಕೆ, ಯೋಜನೆ, ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ ಮಾಡುತ್ತೇನೆ. ಈ ಮನವಿಗಾಗಿ ಈ ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದರಲ್ಲಿ ರಾಜಕೀಯ, ಟೀಕೆ, ಭಾವನಾತ್ಮಕ ಆರೋಪಗಳ ಅಗತ್ಯವಿಲ್ಲ. ರಾಜ್ಯದ ಅಭಿವೃದ್ಧಿಗೆ ಸೌಹಾರ್ದಯುತವಾಗಿ ಪ್ರಯತ್ನಿಸೋಣ ಎನ್ನುವುದಷ್ಟೆ ನನ್ನ ಮನವಿ ಎಂದರು.

ಪಾರ್ಲಿಮೆಂಟಿನ ಒಳಗೆ ಮತ್ತು ಹೊರಗೆ ಈ ಬಗ್ಗೆ ತಾವೆಲ್ಲರೂ ಪಕ್ಷಬೇಧ ಮರೆತು ಧ್ವನಿ ಎತ್ತಬೇಕಾಗಿ ಮನವಿ ಮಾಡುತ್ತೇನೆ ಎಂದು ಹೇಳಿದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

5 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

20 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago