ರಾಜ್ಯದ ಅಭಿವೃದ್ಧಿಗಾಗಿ ಪಾರ್ಲಿಮೆಂಟಿನ ಒಳಗೆ ಮತ್ತು ಹೊರಗೆ‌ ಪಕ್ಷಬೇಧ ಮರೆತು ಧ್ವನಿ ಎತ್ತಬೇಕು- ರಾಜ್ಯದ ಸಂಸದರಲ್ಲಿ‌ ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ

ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೊರಲಿನಿಂದ ಒಂದೇ ಧ್ವನಿಯಲ್ಲಿ ಪ್ರಯತ್ನಿಸುವ ಅಗತ್ಯವಿದೆ. ಇದಕ್ಕಾಗಿ ಸೌಹಾರ್ದಯುತ ಸಭೆ ಆಯೋಜಿಸಲಾಗಿದೆ. ಕರುನಾಡು ಮತ್ತು ಕನ್ನಡಿಗರ ಹಿತಕ್ಕಾಗಿ ತಮ್ಮೆಲ್ಲರ ಸಹಕಾರ ಇರಲಿ ಎಂದು ರಾಜ್ಯದಿಂದ ಆಯ್ಕೆಯಾದ ಸಂಸದರಲ್ಲಿ‌ ಸಿಎಂ ಸಿದ್ದರಾಮಯ್ಯ  ಮನವಿ ಮಾಡಿದರು.

ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಪಾಲ್ಗೊಂಡು, ಅವರು ಮಾತನಾಡಿದರು.

ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆ. ಭದ್ರಾ ಯೋಜನೆ ಬಗ್ಗೆಯೂ ಪ್ರಯತ್ನ ಮುಂದುವರೆಸಬೇಕಾಗಿದೆ. ಕೇಂದ್ರದ ಬಜೆಟ್ ನಲ್ಲೇ ಅನುದಾನ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ. ಆ ಹಣವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೊಡಿಸಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ ಎಂದರು.

ಕಲ್ಯಾಣ ಕರ್ನಾಟಕದ ರಾಯಚೂರಿಗೆ ಏಮ್ಸ್ ನೀಡಲು ಮನವಿ ಸಲ್ಲಿಸಿದ್ದೇವೆ. ಇದರ ಈಡೇರಿಕೆ ಅಗತ್ಯವಿದೆ.
ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದಿದೆ. ಏಮ್ಸ್ ಬಂದರೆ ಅಭಿವೃದ್ಧಿ ಸಾಧ್ಯ ಎಂದರು.

18,172 ಕೋಟಿ ರೂ. ಬರ ಪರಿಹಾರ ಕೇಳಿದ್ದೆವು. ಪೂರ್ತಿ ಬಂದಿಲ್ಲ, ಇದಕ್ಕಾಗಿ ನಿಮ್ಮೆಲ್ಲರ ಪ್ರಯತ್ನ ಅಗತ್ಯವಿದೆ.

ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳ ಅಭಿವೃದ್ಧಿಗಾಗಿ ಉಡಾನ್ ಯೋಜನೆಯಲ್ಲಿ ಸಲ್ಲಿಸಿರುವ ಪ್ರಸ್ತಾವನೆ ನಾಗರೀಕ ವಿಮಾನಯಾನ ಇಲಾಖೆಯಲ್ಲಿ ಬಾಕಿ ಇದೆ. ಇದರ ಈಡೇರಿಕೆಗೆ ತಾವು ಪ್ರಯತ್ನಿಸಬೇಕು ಎಂದು ತಿಳಿಸಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು Air cargo complex ಆಗಿ ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರಿಂದ ರಫ್ತು ಹೆಚ್ಚಾಗಿ ಆರ್ಥಿಕ ಚಟುವಟಿಕೆ ವೇಗಗೊಳ್ಳುತ್ತದೆ.
ಮೈಸೂರು ಅಥವಾ ಹಾಸನಕ್ಕೆ ಮತ್ತೊಂದು IIT ಬೇಕು ಎನ್ನುವ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದೇವೆ. ಇದು ಈಡೇರಿಸಬೇಕಾಗಿದೆ ಎಂದರು.

ಕಸ್ತೂರಿ ರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಲು ಮನವಿ ಮಾಡಿದ್ದೇವೆ. ಇದನ್ನು ಕೂಡಲೇ ಅಂಗೀಕರಿಸಿ ಪಶ್ಚಿಮ‌ಘಟ್ಟದ ಜನರಿಗೆ ನೆಮ್ಮದಿ ಒದಗಿಸಬೇಕು ಎಂದು ತಿಳಿಸಿದರು.

ರಾಜ್ಯ ರೈಲ್ವೇ ಸಂಪರ್ಕದಲ್ಲಿ ಹಿಂದುಳಿದಿದೆ. ಆದ್ದರಿಂದ ಆದ್ಯತೆ ಮೇಲೆ ರಾಜ್ಯಕ್ಕೆ ಹೆಚ್ಚು ಅನುದಾನ ಒದಗಿಸಿ ರೈಲ್ವೇ ಸಂಪರ್ಕ ಹೆಚ್ಚಿಸಲು ಆದ್ಯತೆ ಮೇಲೆ ಹೆಚ್ಚಿನ ಅನುದಾನ ನೀಡಬೇಕು ಎಂದು ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಲ್ಲಿ ಮನವಿ ಮಾಡುತ್ತೇನೆ.

ಗ್ರಾಮ ಸಡಕ್ ಯೋಜನೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಿಂದುಳಿದಿದೆ. ಇದನ್ನು ಸರಿದೂಗಿಸಬೇಕಾಗಿದೆ ಎಂದು ಹೇಳಿದರು.

15ನೇ ಹಣಕಾಸು ಆಯೋಗದಲ್ಲಿ ನಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು 16ನೇ ಆಯೋಗದ ಮುಂದೆ ಪ್ರಬಲವಾಗಿ ವಾದ ಮಂಡಿಸಬೇಕಾಗಿದೆ.
ಕಳಸಾ ಬಂಡೂರಿ ಯೋಜನೆಗೆ ಪರಿಸರ ಒಪ್ಪಿಗೆ ಅಗತ್ಯವಿದೆ. ಇದು ಬಾಕಿ ಇರುವುದರಿಂದ ಕೆಲಸ ಶುರು ಮಾಡಲು ಸಾಧ್ಯವಾಗಿಲ್ಲ ಎಂದರು.

1971 ಸೆನ್ಸಸ್ ಪರಿಗಣಿಸಿದ್ದರೆ ನಮಗೆ, ನಮ್ಮ ರಾಜ್ಯಕ್ಕೆ ಅನ್ಯಾಯ ಆಗಲು ಸಾಧ್ಯವಾಗುತ್ತಿರಲಿಲ್ಲ. 15ನೇ ಹಣಕಾಸು ಆಯೋಗದಲ್ಲಿ ಶಿಫಾರಸ್ಸು ಮಾಡಿರುವ ಮತ್ತು ಬಜೆಟ್ ನಲ್ಲಿ ಕೇಂದ್ರ ಸರ್ಕಾರವೇ ರಾಜ್ಯಕ್ಕೆ ಘೋಷಿಸಿರುವ ಮೊತ್ತವನ್ನು ಒದಗಿಸಿಕೊಡಬೇಕು ಎಂದು ಮನವಿ ಮಾಡುತ್ತೇನೆ.
ಇನ್‌ಪುಟ್ ಸಬ್ಸಿಡಿ ಸಮರ್ಪವಾಗಿ ಒದಗಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ಈ ಎಲ್ಲಾ ಬೇಡಿಕೆ, ಯೋಜನೆ, ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ ಮಾಡುತ್ತೇನೆ. ಈ ಮನವಿಗಾಗಿ ಈ ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದರಲ್ಲಿ ರಾಜಕೀಯ, ಟೀಕೆ, ಭಾವನಾತ್ಮಕ ಆರೋಪಗಳ ಅಗತ್ಯವಿಲ್ಲ. ರಾಜ್ಯದ ಅಭಿವೃದ್ಧಿಗೆ ಸೌಹಾರ್ದಯುತವಾಗಿ ಪ್ರಯತ್ನಿಸೋಣ ಎನ್ನುವುದಷ್ಟೆ ನನ್ನ ಮನವಿ ಎಂದರು.

ಪಾರ್ಲಿಮೆಂಟಿನ ಒಳಗೆ ಮತ್ತು ಹೊರಗೆ ಈ ಬಗ್ಗೆ ತಾವೆಲ್ಲರೂ ಪಕ್ಷಬೇಧ ಮರೆತು ಧ್ವನಿ ಎತ್ತಬೇಕಾಗಿ ಮನವಿ ಮಾಡುತ್ತೇನೆ ಎಂದು ಹೇಳಿದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

38 minutes ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

12 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

13 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

14 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

16 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago