ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೊರಲಿನಿಂದ ಒಂದೇ ಧ್ವನಿಯಲ್ಲಿ ಪ್ರಯತ್ನಿಸುವ ಅಗತ್ಯವಿದೆ. ಇದಕ್ಕಾಗಿ ಸೌಹಾರ್ದಯುತ ಸಭೆ ಆಯೋಜಿಸಲಾಗಿದೆ. ಕರುನಾಡು ಮತ್ತು ಕನ್ನಡಿಗರ ಹಿತಕ್ಕಾಗಿ ತಮ್ಮೆಲ್ಲರ ಸಹಕಾರ ಇರಲಿ ಎಂದು ರಾಜ್ಯದಿಂದ ಆಯ್ಕೆಯಾದ ಸಂಸದರಲ್ಲಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.
ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಪಾಲ್ಗೊಂಡು, ಅವರು ಮಾತನಾಡಿದರು.
ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆ. ಭದ್ರಾ ಯೋಜನೆ ಬಗ್ಗೆಯೂ ಪ್ರಯತ್ನ ಮುಂದುವರೆಸಬೇಕಾಗಿದೆ. ಕೇಂದ್ರದ ಬಜೆಟ್ ನಲ್ಲೇ ಅನುದಾನ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ. ಆ ಹಣವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೊಡಿಸಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ ಎಂದರು.
ಕಲ್ಯಾಣ ಕರ್ನಾಟಕದ ರಾಯಚೂರಿಗೆ ಏಮ್ಸ್ ನೀಡಲು ಮನವಿ ಸಲ್ಲಿಸಿದ್ದೇವೆ. ಇದರ ಈಡೇರಿಕೆ ಅಗತ್ಯವಿದೆ.
ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದಿದೆ. ಏಮ್ಸ್ ಬಂದರೆ ಅಭಿವೃದ್ಧಿ ಸಾಧ್ಯ ಎಂದರು.
ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳ ಅಭಿವೃದ್ಧಿಗಾಗಿ ಉಡಾನ್ ಯೋಜನೆಯಲ್ಲಿ ಸಲ್ಲಿಸಿರುವ ಪ್ರಸ್ತಾವನೆ ನಾಗರೀಕ ವಿಮಾನಯಾನ ಇಲಾಖೆಯಲ್ಲಿ ಬಾಕಿ ಇದೆ. ಇದರ ಈಡೇರಿಕೆಗೆ ತಾವು ಪ್ರಯತ್ನಿಸಬೇಕು ಎಂದು ತಿಳಿಸಿದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು Air cargo complex ಆಗಿ ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರಿಂದ ರಫ್ತು ಹೆಚ್ಚಾಗಿ ಆರ್ಥಿಕ ಚಟುವಟಿಕೆ ವೇಗಗೊಳ್ಳುತ್ತದೆ.
ಮೈಸೂರು ಅಥವಾ ಹಾಸನಕ್ಕೆ ಮತ್ತೊಂದು IIT ಬೇಕು ಎನ್ನುವ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದೇವೆ. ಇದು ಈಡೇರಿಸಬೇಕಾಗಿದೆ ಎಂದರು.
ಕಸ್ತೂರಿ ರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಲು ಮನವಿ ಮಾಡಿದ್ದೇವೆ. ಇದನ್ನು ಕೂಡಲೇ ಅಂಗೀಕರಿಸಿ ಪಶ್ಚಿಮಘಟ್ಟದ ಜನರಿಗೆ ನೆಮ್ಮದಿ ಒದಗಿಸಬೇಕು ಎಂದು ತಿಳಿಸಿದರು.
ಗ್ರಾಮ ಸಡಕ್ ಯೋಜನೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಿಂದುಳಿದಿದೆ. ಇದನ್ನು ಸರಿದೂಗಿಸಬೇಕಾಗಿದೆ ಎಂದು ಹೇಳಿದರು.
15ನೇ ಹಣಕಾಸು ಆಯೋಗದಲ್ಲಿ ನಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು 16ನೇ ಆಯೋಗದ ಮುಂದೆ ಪ್ರಬಲವಾಗಿ ವಾದ ಮಂಡಿಸಬೇಕಾಗಿದೆ.
ಕಳಸಾ ಬಂಡೂರಿ ಯೋಜನೆಗೆ ಪರಿಸರ ಒಪ್ಪಿಗೆ ಅಗತ್ಯವಿದೆ. ಇದು ಬಾಕಿ ಇರುವುದರಿಂದ ಕೆಲಸ ಶುರು ಮಾಡಲು ಸಾಧ್ಯವಾಗಿಲ್ಲ ಎಂದರು.
1971 ಸೆನ್ಸಸ್ ಪರಿಗಣಿಸಿದ್ದರೆ ನಮಗೆ, ನಮ್ಮ ರಾಜ್ಯಕ್ಕೆ ಅನ್ಯಾಯ ಆಗಲು ಸಾಧ್ಯವಾಗುತ್ತಿರಲಿಲ್ಲ. 15ನೇ ಹಣಕಾಸು ಆಯೋಗದಲ್ಲಿ ಶಿಫಾರಸ್ಸು ಮಾಡಿರುವ ಮತ್ತು ಬಜೆಟ್ ನಲ್ಲಿ ಕೇಂದ್ರ ಸರ್ಕಾರವೇ ರಾಜ್ಯಕ್ಕೆ ಘೋಷಿಸಿರುವ ಮೊತ್ತವನ್ನು ಒದಗಿಸಿಕೊಡಬೇಕು ಎಂದು ಮನವಿ ಮಾಡುತ್ತೇನೆ.
ಇನ್ಪುಟ್ ಸಬ್ಸಿಡಿ ಸಮರ್ಪವಾಗಿ ಒದಗಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.
ಈ ಎಲ್ಲಾ ಬೇಡಿಕೆ, ಯೋಜನೆ, ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ ಮಾಡುತ್ತೇನೆ. ಈ ಮನವಿಗಾಗಿ ಈ ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದರಲ್ಲಿ ರಾಜಕೀಯ, ಟೀಕೆ, ಭಾವನಾತ್ಮಕ ಆರೋಪಗಳ ಅಗತ್ಯವಿಲ್ಲ. ರಾಜ್ಯದ ಅಭಿವೃದ್ಧಿಗೆ ಸೌಹಾರ್ದಯುತವಾಗಿ ಪ್ರಯತ್ನಿಸೋಣ ಎನ್ನುವುದಷ್ಟೆ ನನ್ನ ಮನವಿ ಎಂದರು.
ಪಾರ್ಲಿಮೆಂಟಿನ ಒಳಗೆ ಮತ್ತು ಹೊರಗೆ ಈ ಬಗ್ಗೆ ತಾವೆಲ್ಲರೂ ಪಕ್ಷಬೇಧ ಮರೆತು ಧ್ವನಿ ಎತ್ತಬೇಕಾಗಿ ಮನವಿ ಮಾಡುತ್ತೇನೆ ಎಂದು ಹೇಳಿದರು.
ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…