ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಪರಿಷತ್ ಸದಸ್ಯ ಕೆ. ಎ. ತಿಪ್ಪೇಸ್ವಾಮಿಯವರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರ ಹೀಗಿದೆ..
ಪ್ರಸಕ್ತ ಸಾಲಿನ ಬಜೆಟ್ ನಲ್ಲಿ 3 ಲಕ್ಷದ 71 ಸಾವಿರ ಕೋಟಿ ರೂ.ಗಳನ್ನು ಕಲ್ಯಾಣ ಕಾರ್ಯಗಳಿಗಾಗಿ ವಿನಿಯೋಗಿಸಲಾಗುತ್ತಿದ್ದು, ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ. 1 ಲಕ್ಷದ 4 ಸಾವಿರ ಕೋಟಿ ರೂ. ಸಾಲ ಮಾಡಿದರೂ ಕೂಡ ಮಾನದಂಡ ಮೀರಿಲ್ಲ. ಶೇ.25 ರ ಒಳಗಡೆಯೇ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಯಾವುದೇ ಸರ್ಕಾರ ತನ್ನ ಖರ್ಚುಗಳನ್ನು ಮಾಡಬೇಕಾದರೆ ಸಾಲವನ್ನು ಮಾಡಬೇಕಾಗುತ್ತದೆ. ನಮ್ಮ ಇತಿಮಿತಿಗಳನ್ನು ಪರಿಶೀಲಿಸಿ ಸಾಲ ಮಾಡಲಾಗುತ್ತದೆ. ಒಟ್ಟು ಸಾಲ ಶೇ.25ರ ವರೆಗೂ ಮೀರಬಾರದು ಎಂಬ ಮಾನದಂಡಗಳಿದ್ದು, ನಮ್ಮ ಸರ್ಕಾರದ ಸಾಲ ಮಿತಿಯ ಒಳಗಡೆ ಇದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ, ನಮ್ಮ ರಾಜ್ಯದ ಸಾಲ ಕಡಿಮೆ ಇದೆ ಎಂದರು.
ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿ ರೂ.ಗಳನ್ನು ನೀಡಲಾಗಿದೆ. ಉಳಿದ ಹಣವನ್ನು ಅಭಿವೃದ್ಧಿಗೆ ನೀಡಲಾಗುತ್ತಿದೆ. ವಿರೋಧ ಪಕ್ಷದವರು ಆರೋಪ ಮಾಡುತ್ತಿರುವುದು ಸತ್ಯಕ್ಕೆ ದೂರವಾದದ್ದು, ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದರು.
2017-18 ನೇ ಸಾಲಿನಲ್ಲಿ ಎಸ್ಸಿಎಸ್ಪಿ/ಟಿಎಸ್ಪಿಗೆ ₹36 ಸಾವಿರ ಕೋಟಿ ಹಣವನ್ನು ವ್ಯಯಿಸಲಾಗಿದೆ. ಈ ವರ್ಷ ₹39,272 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಮಾತ್ರ ಎಸ್ಸಿಎಸ್ಪಿ/ಟಿಎಸ್ಪಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದರು.
ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯಗಳಲ್ಲೂ ಈ ಕಾಯ್ದೆಯನ್ನು ಏಕೆ ಜಾರಿ ಮಾಡಿಲ್ಲ? ಕೇಂದ್ರ ಸರ್ಕಾರ ಏಕೆ ಈ ಕಾಯ್ದೆಯನ್ನು ಮಾಡಿಲ್ಲ? ಎಂದು ಪ್ರಶ್ನೆ ಮಾಡಿದರು.
ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ರಾಯಚೂರಿನ ಸಿಂಧನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಕರ್ನಾಟಕ ಲೋಕಸೇವಾ ಆಯೋಗವು 3 ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿಲ್ಲ. 2023-24ನೇ ಸಾಲಿನಲ್ಲಿ ಅಭಿವೃದ್ಧಿ ಕೆಲಸಗಳಿಗೆಂದೇ 1 ಲಕ್ಷದ 20 ಸಾವಿರ ಕೋಟಿ ರೂ.ಗಳನ್ನು ವ್ಯಯಿಸಲಾಗಿದೆ ಎಂದು ಹೇಳಿದರು.
ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಪ್ರಸಕ್ತ ಸಾಲಿನಲ್ಲಿ 52,009 ಕೋಟಿ ರೂ.ಗಳನ್ನು ಒದಗಿಸಿದೆ ಎಂದರು.
ರಾಜ್ಯ ಸರ್ಕಾರವು 2023-24 ರಲ್ಲಿ 90,280 ಕೋಟಿ ರೂ.ಗಳನ್ನು ಸಾಲ ಪಡೆದಿದ್ದು, ರಾಜ್ಯದ ವಿತ್ತೀಯ ಕೊರತೆ 2.6% ಇದ್ದು, ರಾಜ್ಯ ಸರ್ಕಾರವು ಪಡೆದ ಒಟ್ಟು ಸಾಲ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡ ಮತ್ತು ಕೇಂದ್ರ ಸರ್ಕಾರ ನಿಗದಿಪಡಿಸಿರುವ ಸಾಲಮಿತಿಗೆ ಒಳಪಟ್ಟಿದೆ ಎಂದು ಹೇಳಿದರು.
ರಾಜ್ಯ ಸರ್ಕಾರವು ರಾಜಸ್ವ ಹಾಗೂ ಬಂಡವಾಳ ಸ್ವೀಕೃತಿಗಳಿಂದ ಮತ್ತು ಕೇಂದ್ರ ಸರ್ಕಾರ ನಿಗದಿಪಡಿಸುವ ಮಿತಿಯೊಳಗೆ ಸಾಲವನ್ನು ಪಡೆಯುವ ಮೂಲಕ ಆಯವ್ಯಯದಲ್ಲಿ ಅಂದಾಜಿಸಿರುವ ವೆಚ್ಚವನ್ನು ಭರಿಸುತ್ತದೆ. ಈ ಸ್ವೀಕೃತಿಗಳನ್ನು ಮೀರಿ ಈವರೆಗೂ ಯಾವುದೇ ವೆಚ್ಚದ ಹೊರೆ ರಾಜ್ಯ ಸರ್ಕಾರಕ್ಕೆ ಉಂಟಾಗಿರುವುದಿಲ್ಲ ಎಂದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿ ಕುಂಠಿತವಾಗಿದೆ ಎಂಬ ವಿರೋಧ ಪಕ್ಷಗಳ ಆರೋಪ ಸುಳ್ಳು ಹಾಗೂ ಸತ್ಯಕ್ಕೆ ದೂರವಾಗಿದ್ದು. ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ತಿಳಿಸಿದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…