ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ ಎಂದು ತಿಳಿಸಿದ್ದಾರೆ.
ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ ನಾನು ಮಂಗಳೂರಿಗೆ ಭೇಟಿನೀಡಿದ್ದ ವೇಳೆ ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಿ ಸ್ವಸ್ಥ ಪರಿಸರ ಕಟ್ಟಿಕೊಡುವ ವಾಗ್ದಾನವನ್ನು ಜಿಲ್ಲೆಯ ಜನರಿಗೆ ನೀಡಿದ್ದೆ. ನಮ್ಮ ಈ ಪ್ರಯತ್ನದ ಭಾಗವಾಗಿ ಈಗ ಬಹುದೊಡ್ಡ ಡ್ರಗ್ಸ್ ಜಾಲವೊಂದನ್ನು ಪತ್ತೆ ಮಾಡಲಾಗಿದೆ ಎಂದರು.
ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಹೇಳಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…