ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ ಎಂದು ತಿಳಿಸಿದ್ದಾರೆ.
ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ ನಾನು ಮಂಗಳೂರಿಗೆ ಭೇಟಿನೀಡಿದ್ದ ವೇಳೆ ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಿ ಸ್ವಸ್ಥ ಪರಿಸರ ಕಟ್ಟಿಕೊಡುವ ವಾಗ್ದಾನವನ್ನು ಜಿಲ್ಲೆಯ ಜನರಿಗೆ ನೀಡಿದ್ದೆ. ನಮ್ಮ ಈ ಪ್ರಯತ್ನದ ಭಾಗವಾಗಿ ಈಗ ಬಹುದೊಡ್ಡ ಡ್ರಗ್ಸ್ ಜಾಲವೊಂದನ್ನು ಪತ್ತೆ ಮಾಡಲಾಗಿದೆ ಎಂದರು.
ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಹೇಳಿದ್ದಾರೆ.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…