ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯ ಪತ್ತೆ-ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ- ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ಸರ್ಕಾರದ ಗುರಿ- ಸಿಎಂ ಸಿದ್ದರಾಮಯ್ಯ

ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ ಎಂದು ತಿಳಿಸಿದ್ದಾರೆ.

ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ ನಾನು ಮಂಗಳೂರಿಗೆ ಭೇಟಿನೀಡಿದ್ದ ವೇಳೆ ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಿ ಸ್ವಸ್ಥ ಪರಿಸರ ಕಟ್ಟಿಕೊಡುವ ವಾಗ್ದಾನವನ್ನು ಜಿಲ್ಲೆಯ ಜನರಿಗೆ ನೀಡಿದ್ದೆ. ನಮ್ಮ ಈ ಪ್ರಯತ್ನದ ಭಾಗವಾಗಿ ಈಗ ಬಹುದೊಡ್ಡ ಡ್ರಗ್ಸ್ ಜಾಲವೊಂದನ್ನು ಪತ್ತೆ ಮಾಡಲಾಗಿದೆ ಎಂದರು.

ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

10 minutes ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

11 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

12 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago