ರಾಜ್ಯದ ಈ ರಾಷ್ಟ್ರೀಯ ಹೆದ್ದಾರಿ ಉನ್ನತೀಕರಣಕ್ಕೆ ₹2,675.31 ಕೋಟಿ ಮಂಜೂರು, ಯಾವ್ಯಾವ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುತ್ತದೆ?
ರಾಜ್ಯದ ಬಹುತೇಕ ಭಾಗಗಳಲ್ಲಿ ಹೆಚ್ಚಾಗಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಹಾಗೆಯೇ ಇದೀಗ ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-748ಎ ಉನ್ನತಿಕರಿಸಲು ಹಣ ಬಿಡುಗಡೆ ಮಾಡಲಾಗಿದೆ. ಹಾಗಾದರೆ ಎಷ್ಟು ಕೋಟಿ ಹಣ ಮಂಜೂರು ಮಾಡಲಾಗಿದೆ ಹಾಗೂ ಈ ಹೆದ್ದಾರಿ ಯಾವೆಲ್ಲ ಜಿಲ್ಲೆಗಳಲ್ಲಿ ಹಾದುಹೋಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಳಗಾವಿ-ಹುನಗುಂದ-ರಾಯಚೂರು ವಿಭಾಗ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಉನ್ನತೀಕರಿಸಲು ಹೆದ್ದಾರಿ ಸಚಿವಾಲಯ 2,675.31 ಕೋಟಿ ರೂಪಾಯಿ ಮಂಜೂರು ಮಾಡಿದೆ. ಈ ಉಪಕ್ರಮವು ಒಟ್ಟು 92.40 ಕಿಲೋ ಮೀಟರ್ ಉದ್ದದ ಹೆದ್ದಾರಿಯನ್ನು ಒಳಗೊಂಡಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ.
ಇನ್ನು ಈ ಯೋಜನೆಯು ಪಣಜಿ-ಹೈದರಾಬಾದ್ EC10 ಕಾರಿಡಾರ್ನ ಅವಿಭಾಜ್ಯ ಅಂಗವಾಗಿದೆ ಎಂದು ಅವರು ಹೇಳಿದ್ದಾರೆ. EC10 ಮೀನುಗಾರಿಕೆ ಮತ್ತು ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿರುವ ಪಣಜಿ, ಆಹಾರ ಧಾನ್ಯಗಳು ಮತ್ತು ಹಾಲಿನ ಉತ್ಪನ್ನಗಳಿಗೆ ಹೆಸರುವಾಸಿಯಾಗಿರುವ ಬೆಳಗಾವಿ, ಅಕ್ಕಿ, ಹತ್ತಿ, ಶೇಂಗಾ, ಮತ್ತು ಬೇಳೆಕಾಳುಗಳಿಗೆ ಹೆಸರುವಾಸಿಯಾಗಿರುವ ರಾಯಚೂರು ಮತ್ತು ಐಟಿ, ಫಾರ್ಮ್ ಮತ್ತು ಹೆಲ್ತ್ಕೇರ್ಗೆ ವಿಶಿಷ್ಟ ಸ್ಥಾನ ಪಡೆದಿರುವ ಹೈದರಾಬಾದ್ ಸೇರಿದಂತೆ ಪ್ರಮುಖ ಕೈಗಾರಿಕಾ ಕೇಂದ್ರಗಳಿಗೆ ಸಂಪರ್ಕ ಕಲ್ಪಿಸುತ್ತದೆ.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…