ರಾಜ್ಯದ ಈ ರಾಷ್ಟ್ರೀಯ ಹೆದ್ದಾರಿ ಉನ್ನತೀಕರಣಕ್ಕೆ ₹2,675.31 ಕೋಟಿ ಮಂಜೂರು, ಯಾವ್ಯಾವ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುತ್ತದೆ?
ರಾಜ್ಯದ ಬಹುತೇಕ ಭಾಗಗಳಲ್ಲಿ ಹೆಚ್ಚಾಗಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಹಾಗೆಯೇ ಇದೀಗ ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-748ಎ ಉನ್ನತಿಕರಿಸಲು ಹಣ ಬಿಡುಗಡೆ ಮಾಡಲಾಗಿದೆ. ಹಾಗಾದರೆ ಎಷ್ಟು ಕೋಟಿ ಹಣ ಮಂಜೂರು ಮಾಡಲಾಗಿದೆ ಹಾಗೂ ಈ ಹೆದ್ದಾರಿ ಯಾವೆಲ್ಲ ಜಿಲ್ಲೆಗಳಲ್ಲಿ ಹಾದುಹೋಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಳಗಾವಿ-ಹುನಗುಂದ-ರಾಯಚೂರು ವಿಭಾಗ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಉನ್ನತೀಕರಿಸಲು ಹೆದ್ದಾರಿ ಸಚಿವಾಲಯ 2,675.31 ಕೋಟಿ ರೂಪಾಯಿ ಮಂಜೂರು ಮಾಡಿದೆ. ಈ ಉಪಕ್ರಮವು ಒಟ್ಟು 92.40 ಕಿಲೋ ಮೀಟರ್ ಉದ್ದದ ಹೆದ್ದಾರಿಯನ್ನು ಒಳಗೊಂಡಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ.
ಇನ್ನು ಈ ಯೋಜನೆಯು ಪಣಜಿ-ಹೈದರಾಬಾದ್ EC10 ಕಾರಿಡಾರ್ನ ಅವಿಭಾಜ್ಯ ಅಂಗವಾಗಿದೆ ಎಂದು ಅವರು ಹೇಳಿದ್ದಾರೆ. EC10 ಮೀನುಗಾರಿಕೆ ಮತ್ತು ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿರುವ ಪಣಜಿ, ಆಹಾರ ಧಾನ್ಯಗಳು ಮತ್ತು ಹಾಲಿನ ಉತ್ಪನ್ನಗಳಿಗೆ ಹೆಸರುವಾಸಿಯಾಗಿರುವ ಬೆಳಗಾವಿ, ಅಕ್ಕಿ, ಹತ್ತಿ, ಶೇಂಗಾ, ಮತ್ತು ಬೇಳೆಕಾಳುಗಳಿಗೆ ಹೆಸರುವಾಸಿಯಾಗಿರುವ ರಾಯಚೂರು ಮತ್ತು ಐಟಿ, ಫಾರ್ಮ್ ಮತ್ತು ಹೆಲ್ತ್ಕೇರ್ಗೆ ವಿಶಿಷ್ಟ ಸ್ಥಾನ ಪಡೆದಿರುವ ಹೈದರಾಬಾದ್ ಸೇರಿದಂತೆ ಪ್ರಮುಖ ಕೈಗಾರಿಕಾ ಕೇಂದ್ರಗಳಿಗೆ ಸಂಪರ್ಕ ಕಲ್ಪಿಸುತ್ತದೆ.
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…