ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗಿನಿಂದಲೇ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.
ಬೆಳಗ್ಗೆ ಸುಮಾರು 6 ಗಂಟೆಯಿಂದಲೇ ಲೋಕಾಯುಕ್ತ ಪೊಲೀಸರು ಹಲವು ತಂಡಗಳಾಗಿ ವಿಭಜನೆಗೊಂಡು ದಾಳಿ ಆರಂಭಿಸಿದ್ದಾರೆ. ಬೆಂಗಳೂರು ನಗರದಲ್ಲಿ ವೆಟರ್ನರಿ ಕಾಲೇಜು ಹೆಬ್ಬಾಳದ ಅಸಿಸ್ಟೆಂಟ್ ಪ್ರೊಫೆಸರ್ ಇಂದರೇಶ್ ಹಾಗೂ ಸಿಂಗನಾಯಕನಹಳ್ಳಿ ಕೋ-ಆಪರೇಟಿವ್ ಸೊಸೈಟಿಯ ಸಿಇಒ ಶಶಿಧರ್ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಯಾದಗಿರಿಯಲ್ಲಿ ಎಲೆಕ್ಟ್ರಿಕಲ್ ಇಲಾಖೆ ಡೆಪ್ಯುಟಿ ಎಲೆಕ್ಟ್ರಿಕಲ್ ಇನ್ಸ್ಪೆಕ್ಟರ್ ವಿರೇಶ್ ಹಿರೇಮಠ್ ಅವರ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ಮಂಡ್ಯದಲ್ಲಿ ಸಾರ್ವಜನಿಕ ಕಾಮಗಾರಿಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್. ಸತೀಶ್ ಅವರ ಮನೆ ಮತ್ತು ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಧಾರವಾಡದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಎಂ.ಕೆ. ಸುರಕೋಡ ಅವರ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಾಸನ ಮಹಾನಗರ ಪಾಲಿಕೆಯ ಎಇಇ ಎಂ.ಸಿ. ಸತ್ಯನಾರಾಯಣ ಅವರ ಮನೆ ಮೇಲೆ ದಾಳಿ ನಡೆಸಿದ ವೇಳೆ ಅಧಿಕಾರಿಗಳು ಬಾಗಿಲು ತೆರೆಯದೆ ಹೈಡ್ರಾಮ ನಡೆದ ಘಟನೆ ಕೂಡ ಕಂಡುಬಂದಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಅಧಿಕಾರಿಗಳ ತಂಡ ಮನೆ ಮುಂದೆ ಕಾಯಬೇಕಾದ ಪರಿಸ್ಥಿತಿ ಉಂಟಾಯಿತು. ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ ಮುಂದುವರಿದಿದೆ.
ಮೈಸೂರಿನಲ್ಲಿ ಜಲಮಂಡಳಿಯ ಎಇಇ ಹಾಗೂ ಇಇ (ಇನ್ಚಾರ್ಜ್) ಆಶಿಫ್ ಇಕ್ಬಾಲ್ ಅವರ ನಿವಾಸದಲ್ಲಿ ಪರಿಶೀಲನೆ ನಡೆಯುತ್ತಿದೆ. ವಿಜಯಪುರದಲ್ಲಿ ಕೃಷ್ಣಭಾಗ್ಯ ಜಲ ನಿಗಮದ ಜೂನಿಯರ್ ಇಂಜಿನಿಯರ್ ಪ್ರಕಾಶ್ ಪಿ.ಜಿ. ಅವರ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡಸಿದ್ದಾರೆ.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ್ ವಾಲಪ್ಪ ನಾಯಕ್ ಅವರ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಅವರ ಮನೆಗಳ ಜೊತೆಗೆ ಬಾಗಲಕೋಟೆಯ ಪೋಸ್ಟಲ್ ಕಾಲೋನಿಯಲ್ಲಿರುವ ಅವರ ಸಹೋದರ ಭೀಮಸಿಂಗ್ ನಾಯಕ್ ಅವರ ಮನೆ ಮೇಲೂ ದಾಳಿ ನಡೆದಿದೆ. ಭೀಮಸಿಂಗ್ ನಾಯಕ್ ಅವರು ಬಾಗಲಕೋಟೆ ಡಿಎಆರ್ನಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದು, ಬಾಗಲಕೋಟೆ ತಾಲೂಕಿನ ಬಿಲ್ ಕೆರೂರು ಗ್ರಾಮದಲ್ಲಿರುವ ಅವರ ಮೂಲ ನಿವಾಸದಲ್ಲಿಯೂ ಪರಿಶೀಲನೆ ನಡೆಸಲಾಗಿದೆ.
ಒಟ್ಟಾರೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ನಡೆದ ಈ ದಾಳಿಯ ವೇಳೆ ಅಧಿಕಾರಿಗಳು ಮಹತ್ವದ ದಾಖಲೆಗಳು ಹಾಗೂ ಆಸ್ತಿ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…