Categories: ರಾಜ್ಯ

ರಾಜ್ಯದ ಎಂಟು ಜಿಲ್ಲೆಗಳಲ್ಲಿ ಏಕಕಾಲಕ್ಕೆ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗಿನಿಂದಲೇ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.

ಬೆಳಗ್ಗೆ ಸುಮಾರು 6 ಗಂಟೆಯಿಂದಲೇ ಲೋಕಾಯುಕ್ತ ಪೊಲೀಸರು ಹಲವು ತಂಡಗಳಾಗಿ ವಿಭಜನೆಗೊಂಡು ದಾಳಿ ಆರಂಭಿಸಿದ್ದಾರೆ. ಬೆಂಗಳೂರು ನಗರದಲ್ಲಿ ವೆಟರ್ನರಿ ಕಾಲೇಜು ಹೆಬ್ಬಾಳದ ಅಸಿಸ್ಟೆಂಟ್ ಪ್ರೊಫೆಸರ್ ಇಂದರೇಶ್ ಹಾಗೂ ಸಿಂಗನಾಯಕನಹಳ್ಳಿ ಕೋ-ಆಪರೇಟಿವ್ ಸೊಸೈಟಿಯ ಸಿಇಒ ಶಶಿಧರ್ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಯಾದಗಿರಿಯಲ್ಲಿ ಎಲೆಕ್ಟ್ರಿಕಲ್ ಇಲಾಖೆ ಡೆಪ್ಯುಟಿ ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್ ವಿರೇಶ್ ಹಿರೇಮಠ್ ಅವರ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ಮಂಡ್ಯದಲ್ಲಿ ಸಾರ್ವಜನಿಕ ಕಾಮಗಾರಿಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್. ಸತೀಶ್ ಅವರ ಮನೆ ಮತ್ತು ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಧಾರವಾಡದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಎಂ.ಕೆ. ಸುರಕೋಡ ಅವರ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಾಸನ ಮಹಾನಗರ ಪಾಲಿಕೆಯ ಎಇಇ ಎಂ.ಸಿ. ಸತ್ಯನಾರಾಯಣ ಅವರ ಮನೆ ಮೇಲೆ ದಾಳಿ ನಡೆಸಿದ ವೇಳೆ ಅಧಿಕಾರಿಗಳು ಬಾಗಿಲು ತೆರೆಯದೆ ಹೈಡ್ರಾಮ ನಡೆದ ಘಟನೆ ಕೂಡ ಕಂಡುಬಂದಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಅಧಿಕಾರಿಗಳ ತಂಡ ಮನೆ ಮುಂದೆ ಕಾಯಬೇಕಾದ ಪರಿಸ್ಥಿತಿ ಉಂಟಾಯಿತು. ಲೋಕಾಯುಕ್ತ ಡಿವೈಎಸ್‌ಪಿ ನೇತೃತ್ವದಲ್ಲಿ ಕಾರ್ಯಾಚರಣೆ ಮುಂದುವರಿದಿದೆ.

ಮೈಸೂರಿನಲ್ಲಿ ಜಲಮಂಡಳಿಯ ಎಇಇ ಹಾಗೂ ಇಇ (ಇನ್‌ಚಾರ್ಜ್) ಆಶಿಫ್ ಇಕ್ಬಾಲ್ ಅವರ ನಿವಾಸದಲ್ಲಿ ಪರಿಶೀಲನೆ ನಡೆಯುತ್ತಿದೆ. ವಿಜಯಪುರದಲ್ಲಿ ಕೃಷ್ಣಭಾಗ್ಯ ಜಲ ನಿಗಮದ ಜೂನಿಯರ್ ಇಂಜಿನಿಯರ್ ಪ್ರಕಾಶ್ ಪಿ.ಜಿ. ಅವರ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡಸಿದ್ದಾರೆ.

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ್ ವಾಲಪ್ಪ ನಾಯಕ್ ಅವರ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಅವರ ಮನೆಗಳ ಜೊತೆಗೆ ಬಾಗಲಕೋಟೆಯ ಪೋಸ್ಟಲ್ ಕಾಲೋನಿಯಲ್ಲಿರುವ ಅವರ ಸಹೋದರ ಭೀಮಸಿಂಗ್ ನಾಯಕ್ ಅವರ ಮನೆ ಮೇಲೂ ದಾಳಿ ನಡೆದಿದೆ. ಭೀಮಸಿಂಗ್ ನಾಯಕ್ ಅವರು ಬಾಗಲಕೋಟೆ ಡಿಎಆರ್‌ನಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದು, ಬಾಗಲಕೋಟೆ ತಾಲೂಕಿನ ಬಿಲ್ ಕೆರೂರು ಗ್ರಾಮದಲ್ಲಿರುವ ಅವರ ಮೂಲ ನಿವಾಸದಲ್ಲಿಯೂ ಪರಿಶೀಲನೆ ನಡೆಸಲಾಗಿದೆ.

ಒಟ್ಟಾರೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ನಡೆದ ಈ ದಾಳಿಯ ವೇಳೆ ಅಧಿಕಾರಿಗಳು ಮಹತ್ವದ ದಾಖಲೆಗಳು ಹಾಗೂ ಆಸ್ತಿ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

4 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

5 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

5 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

8 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

11 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

11 hours ago