ರಾಜ್ಯದ ಎಲ್ಲಾ ಜಿಲ್ಲೆ ಮತ್ತು ನಗರ ಪೊಲೀಸ್ ಘಟಕಗಳ ಸಮಗ್ರ ತಪಾಸಣೆಗೆ 14 ಮಂದಿ ಹಿರಿಯ ಪೊಲೀಸ್‌ ಅಧಿಕಾರಿಗಳ ನೇಮಕ: ಬೆಂ.ಗ್ರಾಮಾಂತರಕ್ಕೆ ಯಾರು ಗೊತ್ತಾ…?

ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಚುರುಕುಗೊಳಿಸಿ, ಆಡಳಿತದಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆ ಮತ್ತು ನಗರ ಪೊಲೀಸ್ ಘಟಕಗಳ ಸಮಗ್ರ ತಪಾಸಣೆಗೆ 14 ಮಂದಿ ಹಿರಿಯ ಪೊಲೀಸ್‌ ಅಧಿಕಾರಿಗಳ ನೇಮಿಸಿ ಕರ್ನಾಟಕ ರಾಜ್ಯ ಪೊಲೀಸ್ ಮುಖ್ಯಸ್ಥರಾದ ಡಿಜಿ ಮತ್ತು ಐಜಿಪಿ ಡಾ.ಸಲೀಂ ಅವರು ಆದೇಶ ಮಾಡಿದ್ದಾರೆ.

 ಡಿಜಿ ಮತ್ತು ಐಜಿಪಿ ಅವರ ಪರವಾಗಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಎಡಿಜಿಪಿ) ಮತ್ತು ಪೊಲೀಸ್ ಮಹಾನಿರೀಕ್ಷಕರ (ಐಜಿಪಿ) ಶ್ರೇಣಿಯ 14 ಹಿರಿಯ ಅಧಿಕಾರಿಗಳನ್ನು ಜಿಲ್ಲಾವಾರು ನೇಮಿಸಲಾಗಿದ್ದು, 2025 ರ ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ತಮಗೆ ವಹಿಸಲಾದ ಜಿಲ್ಲೆಗಳಿಗೆ ಭೇಟಿ ನೀಡಿ ಎರಡು ದಿನಗಳ ಕಾಲ ತಪಾಸಣೆ ನಡೆಸುವಂತೆ ನಿರ್ದೇಶನ ನೀಡಲಾಗಿದೆ.

ಅಧಿಕಾರಿಗಳು – ಪರಿಶೀಲನೆಗೆ ನೀಡಿದ ಜಿಲ್ಲೆಗಳು

ಅಲೋಕ್ ಕುಮಾರ್, ಎಡಿಜಿಪಿ ಬೆಳಗಾವಿ ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ

ಆರ್. ಹಿತೇಂದ್ರ, ಎಡಿಜಿಪಿ ಹುಬ್ಬಳ್ಳಿ-ಧಾರವಾಡ ನಗರ, ಬೆಳಗಾವಿ ಜಿಲ್ಲೆ

ಬಿ.ಕೆ. ಸಿಂಗ್, ಎಡಿಜಿಪಿ ಮಂಗಳೂರು ನಗರ, ಮಂಡ್ಯ ಜಿಲ್ಲೆ

ಪಿ. ಹರಿಶೇಖರನ್, ಎಡಿಜಿಪಿ ಕಲಬುರಗಿ ನಗರ, ದಾವಣಗೆರೆ ಜಿಲ್ಲೆ

ಎಸ್. ಮುರುಗನ್, ಎಡಿಜಿಪಿ ಉಡುಪಿ, ದಕ್ಷಿಣ ಕನ್ನಡ

ಸೌಮೇಂದು ಮುಖರ್ಜಿ ಕೋಲಾರ, ತುಮಕೂರು ಜಿಲ್ಲೆ

ಎಂ. ಚಂದ್ರಶೇಖರ್, ಎಡಿಜಿಪಿ ಮೈಸೂರು ನಗರ, ಹಾಸನ ಜಿಲ್ಲೆ

ಡಾ. ತ್ಯಾಗರಾಜನ್ ಕೆ, ಐಜಿಪಿ ಯಾದಗಿರಿ, ಗದಗ ಜಿಲ್ಲೆ

ಚಂದ್ರ ಗುಪ್ತ, ಐಜಿಪಿ ಹಾವೇರಿ, ಬಳ್ಳಾರಿ ಜಿಲ್ಲೆ

ವಿಕಾಶ್ ಕುಮಾರ್ ವಿಕಾಶ್ ಐಜಿಪಿ ಚಿಕ್ಕಮಗಳೂರು, ಧಾರವಾಡ ಜಿಲ್ಲೆ

ಸಂದೀಪ್ ಪಾಟೀಲ್, ಐಜಿಪಿ ಚಿಕ್ಕಬಳ್ಳಾಪುರ, ವಿಜಯನಗರ ಜಿಲ್ಲೆ

ಎನ್. ಸತೀಶ್ ಕುಮಾರ್ ಐಜಿಪಿ ಮೈಸೂರು ಜಿಲ್ಲೆ, ಕೊಡಗು ಜಿಲ್ಲೆ

ದೇವಜ್ಯೋತಿ ರೇ ಐಜಿಪಿ ಕಲಬುರಗಿ, ಬೀದರ್ ಜಿಲ್ಲೆ

ವೈ.ಎಸ್. ರವಿ ಕುಮಾರ್, ಐಜಿಪಿ ಕೊಪ್ಪಳ, ಕೆ.ಜಿ.ಎಫ್. ಜಿಲ್ಲೆ

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

12 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

13 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

17 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

19 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

22 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

23 hours ago