ರಾಜ್ಯದ ಎಲ್ಲಾ ಜಿಲ್ಲೆ ಮತ್ತು ನಗರ ಪೊಲೀಸ್ ಘಟಕಗಳ ಸಮಗ್ರ ತಪಾಸಣೆಗೆ 14 ಮಂದಿ ಹಿರಿಯ ಪೊಲೀಸ್‌ ಅಧಿಕಾರಿಗಳ ನೇಮಕ: ಬೆಂ.ಗ್ರಾಮಾಂತರಕ್ಕೆ ಯಾರು ಗೊತ್ತಾ…?

ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಚುರುಕುಗೊಳಿಸಿ, ಆಡಳಿತದಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆ ಮತ್ತು ನಗರ ಪೊಲೀಸ್ ಘಟಕಗಳ ಸಮಗ್ರ ತಪಾಸಣೆಗೆ 14 ಮಂದಿ ಹಿರಿಯ ಪೊಲೀಸ್‌ ಅಧಿಕಾರಿಗಳ ನೇಮಿಸಿ ಕರ್ನಾಟಕ ರಾಜ್ಯ ಪೊಲೀಸ್ ಮುಖ್ಯಸ್ಥರಾದ ಡಿಜಿ ಮತ್ತು ಐಜಿಪಿ ಡಾ.ಸಲೀಂ ಅವರು ಆದೇಶ ಮಾಡಿದ್ದಾರೆ.

 ಡಿಜಿ ಮತ್ತು ಐಜಿಪಿ ಅವರ ಪರವಾಗಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಎಡಿಜಿಪಿ) ಮತ್ತು ಪೊಲೀಸ್ ಮಹಾನಿರೀಕ್ಷಕರ (ಐಜಿಪಿ) ಶ್ರೇಣಿಯ 14 ಹಿರಿಯ ಅಧಿಕಾರಿಗಳನ್ನು ಜಿಲ್ಲಾವಾರು ನೇಮಿಸಲಾಗಿದ್ದು, 2025 ರ ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ತಮಗೆ ವಹಿಸಲಾದ ಜಿಲ್ಲೆಗಳಿಗೆ ಭೇಟಿ ನೀಡಿ ಎರಡು ದಿನಗಳ ಕಾಲ ತಪಾಸಣೆ ನಡೆಸುವಂತೆ ನಿರ್ದೇಶನ ನೀಡಲಾಗಿದೆ.

ಅಧಿಕಾರಿಗಳು – ಪರಿಶೀಲನೆಗೆ ನೀಡಿದ ಜಿಲ್ಲೆಗಳು

ಅಲೋಕ್ ಕುಮಾರ್, ಎಡಿಜಿಪಿ ಬೆಳಗಾವಿ ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ

ಆರ್. ಹಿತೇಂದ್ರ, ಎಡಿಜಿಪಿ ಹುಬ್ಬಳ್ಳಿ-ಧಾರವಾಡ ನಗರ, ಬೆಳಗಾವಿ ಜಿಲ್ಲೆ

ಬಿ.ಕೆ. ಸಿಂಗ್, ಎಡಿಜಿಪಿ ಮಂಗಳೂರು ನಗರ, ಮಂಡ್ಯ ಜಿಲ್ಲೆ

ಪಿ. ಹರಿಶೇಖರನ್, ಎಡಿಜಿಪಿ ಕಲಬುರಗಿ ನಗರ, ದಾವಣಗೆರೆ ಜಿಲ್ಲೆ

ಎಸ್. ಮುರುಗನ್, ಎಡಿಜಿಪಿ ಉಡುಪಿ, ದಕ್ಷಿಣ ಕನ್ನಡ

ಸೌಮೇಂದು ಮುಖರ್ಜಿ ಕೋಲಾರ, ತುಮಕೂರು ಜಿಲ್ಲೆ

ಎಂ. ಚಂದ್ರಶೇಖರ್, ಎಡಿಜಿಪಿ ಮೈಸೂರು ನಗರ, ಹಾಸನ ಜಿಲ್ಲೆ

ಡಾ. ತ್ಯಾಗರಾಜನ್ ಕೆ, ಐಜಿಪಿ ಯಾದಗಿರಿ, ಗದಗ ಜಿಲ್ಲೆ

ಚಂದ್ರ ಗುಪ್ತ, ಐಜಿಪಿ ಹಾವೇರಿ, ಬಳ್ಳಾರಿ ಜಿಲ್ಲೆ

ವಿಕಾಶ್ ಕುಮಾರ್ ವಿಕಾಶ್ ಐಜಿಪಿ ಚಿಕ್ಕಮಗಳೂರು, ಧಾರವಾಡ ಜಿಲ್ಲೆ

ಸಂದೀಪ್ ಪಾಟೀಲ್, ಐಜಿಪಿ ಚಿಕ್ಕಬಳ್ಳಾಪುರ, ವಿಜಯನಗರ ಜಿಲ್ಲೆ

ಎನ್. ಸತೀಶ್ ಕುಮಾರ್ ಐಜಿಪಿ ಮೈಸೂರು ಜಿಲ್ಲೆ, ಕೊಡಗು ಜಿಲ್ಲೆ

ದೇವಜ್ಯೋತಿ ರೇ ಐಜಿಪಿ ಕಲಬುರಗಿ, ಬೀದರ್ ಜಿಲ್ಲೆ

ವೈ.ಎಸ್. ರವಿ ಕುಮಾರ್, ಐಜಿಪಿ ಕೊಪ್ಪಳ, ಕೆ.ಜಿ.ಎಫ್. ಜಿಲ್ಲೆ

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

6 minutes ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

10 minutes ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

32 minutes ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

4 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

10 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

11 hours ago