ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಚುರುಕುಗೊಳಿಸಿ, ಆಡಳಿತದಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆ ಮತ್ತು ನಗರ ಪೊಲೀಸ್ ಘಟಕಗಳ ಸಮಗ್ರ ತಪಾಸಣೆಗೆ 14 ಮಂದಿ ಹಿರಿಯ ಪೊಲೀಸ್ ಅಧಿಕಾರಿಗಳ ನೇಮಿಸಿ ಕರ್ನಾಟಕ ರಾಜ್ಯ ಪೊಲೀಸ್ ಮುಖ್ಯಸ್ಥರಾದ ಡಿಜಿ ಮತ್ತು ಐಜಿಪಿ ಡಾ.ಸಲೀಂ ಅವರು ಆದೇಶ ಮಾಡಿದ್ದಾರೆ.
ಡಿಜಿ ಮತ್ತು ಐಜಿಪಿ ಅವರ ಪರವಾಗಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಎಡಿಜಿಪಿ) ಮತ್ತು ಪೊಲೀಸ್ ಮಹಾನಿರೀಕ್ಷಕರ (ಐಜಿಪಿ) ಶ್ರೇಣಿಯ 14 ಹಿರಿಯ ಅಧಿಕಾರಿಗಳನ್ನು ಜಿಲ್ಲಾವಾರು ನೇಮಿಸಲಾಗಿದ್ದು, 2025 ರ ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ತಮಗೆ ವಹಿಸಲಾದ ಜಿಲ್ಲೆಗಳಿಗೆ ಭೇಟಿ ನೀಡಿ ಎರಡು ದಿನಗಳ ಕಾಲ ತಪಾಸಣೆ ನಡೆಸುವಂತೆ ನಿರ್ದೇಶನ ನೀಡಲಾಗಿದೆ.
ಅಧಿಕಾರಿಗಳು – ಪರಿಶೀಲನೆಗೆ ನೀಡಿದ ಜಿಲ್ಲೆಗಳು
ಅಲೋಕ್ ಕುಮಾರ್, ಎಡಿಜಿಪಿ ಬೆಳಗಾವಿ ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ
ಆರ್. ಹಿತೇಂದ್ರ, ಎಡಿಜಿಪಿ ಹುಬ್ಬಳ್ಳಿ-ಧಾರವಾಡ ನಗರ, ಬೆಳಗಾವಿ ಜಿಲ್ಲೆ
ಬಿ.ಕೆ. ಸಿಂಗ್, ಎಡಿಜಿಪಿ ಮಂಗಳೂರು ನಗರ, ಮಂಡ್ಯ ಜಿಲ್ಲೆ
ಪಿ. ಹರಿಶೇಖರನ್, ಎಡಿಜಿಪಿ ಕಲಬುರಗಿ ನಗರ, ದಾವಣಗೆರೆ ಜಿಲ್ಲೆ
ಎಸ್. ಮುರುಗನ್, ಎಡಿಜಿಪಿ ಉಡುಪಿ, ದಕ್ಷಿಣ ಕನ್ನಡ
ಸೌಮೇಂದು ಮುಖರ್ಜಿ ಕೋಲಾರ, ತುಮಕೂರು ಜಿಲ್ಲೆ
ಎಂ. ಚಂದ್ರಶೇಖರ್, ಎಡಿಜಿಪಿ ಮೈಸೂರು ನಗರ, ಹಾಸನ ಜಿಲ್ಲೆ
ಡಾ. ತ್ಯಾಗರಾಜನ್ ಕೆ, ಐಜಿಪಿ ಯಾದಗಿರಿ, ಗದಗ ಜಿಲ್ಲೆ
ಚಂದ್ರ ಗುಪ್ತ, ಐಜಿಪಿ ಹಾವೇರಿ, ಬಳ್ಳಾರಿ ಜಿಲ್ಲೆ
ವಿಕಾಶ್ ಕುಮಾರ್ ವಿಕಾಶ್ ಐಜಿಪಿ ಚಿಕ್ಕಮಗಳೂರು, ಧಾರವಾಡ ಜಿಲ್ಲೆ
ಸಂದೀಪ್ ಪಾಟೀಲ್, ಐಜಿಪಿ ಚಿಕ್ಕಬಳ್ಳಾಪುರ, ವಿಜಯನಗರ ಜಿಲ್ಲೆ
ಎನ್. ಸತೀಶ್ ಕುಮಾರ್ ಐಜಿಪಿ ಮೈಸೂರು ಜಿಲ್ಲೆ, ಕೊಡಗು ಜಿಲ್ಲೆ
ದೇವಜ್ಯೋತಿ ರೇ ಐಜಿಪಿ ಕಲಬುರಗಿ, ಬೀದರ್ ಜಿಲ್ಲೆ
ವೈ.ಎಸ್. ರವಿ ಕುಮಾರ್, ಐಜಿಪಿ ಕೊಪ್ಪಳ, ಕೆ.ಜಿ.ಎಫ್. ಜಿಲ್ಲೆ
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…