ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಚುರುಕುಗೊಳಿಸಿ, ಆಡಳಿತದಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆ ಮತ್ತು ನಗರ ಪೊಲೀಸ್ ಘಟಕಗಳ ಸಮಗ್ರ ತಪಾಸಣೆಗೆ 14 ಮಂದಿ ಹಿರಿಯ ಪೊಲೀಸ್ ಅಧಿಕಾರಿಗಳ ನೇಮಿಸಿ ಕರ್ನಾಟಕ ರಾಜ್ಯ ಪೊಲೀಸ್ ಮುಖ್ಯಸ್ಥರಾದ ಡಿಜಿ ಮತ್ತು ಐಜಿಪಿ ಡಾ.ಸಲೀಂ ಅವರು ಆದೇಶ ಮಾಡಿದ್ದಾರೆ.
ಡಿಜಿ ಮತ್ತು ಐಜಿಪಿ ಅವರ ಪರವಾಗಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಎಡಿಜಿಪಿ) ಮತ್ತು ಪೊಲೀಸ್ ಮಹಾನಿರೀಕ್ಷಕರ (ಐಜಿಪಿ) ಶ್ರೇಣಿಯ 14 ಹಿರಿಯ ಅಧಿಕಾರಿಗಳನ್ನು ಜಿಲ್ಲಾವಾರು ನೇಮಿಸಲಾಗಿದ್ದು, 2025 ರ ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ತಮಗೆ ವಹಿಸಲಾದ ಜಿಲ್ಲೆಗಳಿಗೆ ಭೇಟಿ ನೀಡಿ ಎರಡು ದಿನಗಳ ಕಾಲ ತಪಾಸಣೆ ನಡೆಸುವಂತೆ ನಿರ್ದೇಶನ ನೀಡಲಾಗಿದೆ.
ಅಧಿಕಾರಿಗಳು – ಪರಿಶೀಲನೆಗೆ ನೀಡಿದ ಜಿಲ್ಲೆಗಳು
ಅಲೋಕ್ ಕುಮಾರ್, ಎಡಿಜಿಪಿ ಬೆಳಗಾವಿ ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ
ಆರ್. ಹಿತೇಂದ್ರ, ಎಡಿಜಿಪಿ ಹುಬ್ಬಳ್ಳಿ-ಧಾರವಾಡ ನಗರ, ಬೆಳಗಾವಿ ಜಿಲ್ಲೆ
ಬಿ.ಕೆ. ಸಿಂಗ್, ಎಡಿಜಿಪಿ ಮಂಗಳೂರು ನಗರ, ಮಂಡ್ಯ ಜಿಲ್ಲೆ
ಪಿ. ಹರಿಶೇಖರನ್, ಎಡಿಜಿಪಿ ಕಲಬುರಗಿ ನಗರ, ದಾವಣಗೆರೆ ಜಿಲ್ಲೆ
ಎಸ್. ಮುರುಗನ್, ಎಡಿಜಿಪಿ ಉಡುಪಿ, ದಕ್ಷಿಣ ಕನ್ನಡ
ಸೌಮೇಂದು ಮುಖರ್ಜಿ ಕೋಲಾರ, ತುಮಕೂರು ಜಿಲ್ಲೆ
ಎಂ. ಚಂದ್ರಶೇಖರ್, ಎಡಿಜಿಪಿ ಮೈಸೂರು ನಗರ, ಹಾಸನ ಜಿಲ್ಲೆ
ಡಾ. ತ್ಯಾಗರಾಜನ್ ಕೆ, ಐಜಿಪಿ ಯಾದಗಿರಿ, ಗದಗ ಜಿಲ್ಲೆ
ಚಂದ್ರ ಗುಪ್ತ, ಐಜಿಪಿ ಹಾವೇರಿ, ಬಳ್ಳಾರಿ ಜಿಲ್ಲೆ
ವಿಕಾಶ್ ಕುಮಾರ್ ವಿಕಾಶ್ ಐಜಿಪಿ ಚಿಕ್ಕಮಗಳೂರು, ಧಾರವಾಡ ಜಿಲ್ಲೆ
ಸಂದೀಪ್ ಪಾಟೀಲ್, ಐಜಿಪಿ ಚಿಕ್ಕಬಳ್ಳಾಪುರ, ವಿಜಯನಗರ ಜಿಲ್ಲೆ
ಎನ್. ಸತೀಶ್ ಕುಮಾರ್ ಐಜಿಪಿ ಮೈಸೂರು ಜಿಲ್ಲೆ, ಕೊಡಗು ಜಿಲ್ಲೆ
ದೇವಜ್ಯೋತಿ ರೇ ಐಜಿಪಿ ಕಲಬುರಗಿ, ಬೀದರ್ ಜಿಲ್ಲೆ
ವೈ.ಎಸ್. ರವಿ ಕುಮಾರ್, ಐಜಿಪಿ ಕೊಪ್ಪಳ, ಕೆ.ಜಿ.ಎಫ್. ಜಿಲ್ಲೆ
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…