ರಾಜ್ಯದ ಎಲ್ಲಾ ಜಿಲ್ಲೆ ಮತ್ತು ನಗರ ಪೊಲೀಸ್ ಘಟಕಗಳ ಸಮಗ್ರ ತಪಾಸಣೆಗೆ 14 ಮಂದಿ ಹಿರಿಯ ಪೊಲೀಸ್‌ ಅಧಿಕಾರಿಗಳ ನೇಮಕ: ಬೆಂ.ಗ್ರಾಮಾಂತರಕ್ಕೆ ಯಾರು ಗೊತ್ತಾ…?

ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಚುರುಕುಗೊಳಿಸಿ, ಆಡಳಿತದಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆ ಮತ್ತು ನಗರ ಪೊಲೀಸ್ ಘಟಕಗಳ ಸಮಗ್ರ ತಪಾಸಣೆಗೆ 14 ಮಂದಿ ಹಿರಿಯ ಪೊಲೀಸ್‌ ಅಧಿಕಾರಿಗಳ ನೇಮಿಸಿ ಕರ್ನಾಟಕ ರಾಜ್ಯ ಪೊಲೀಸ್ ಮುಖ್ಯಸ್ಥರಾದ ಡಿಜಿ ಮತ್ತು ಐಜಿಪಿ ಡಾ.ಸಲೀಂ ಅವರು ಆದೇಶ ಮಾಡಿದ್ದಾರೆ.

 ಡಿಜಿ ಮತ್ತು ಐಜಿಪಿ ಅವರ ಪರವಾಗಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಎಡಿಜಿಪಿ) ಮತ್ತು ಪೊಲೀಸ್ ಮಹಾನಿರೀಕ್ಷಕರ (ಐಜಿಪಿ) ಶ್ರೇಣಿಯ 14 ಹಿರಿಯ ಅಧಿಕಾರಿಗಳನ್ನು ಜಿಲ್ಲಾವಾರು ನೇಮಿಸಲಾಗಿದ್ದು, 2025 ರ ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ತಮಗೆ ವಹಿಸಲಾದ ಜಿಲ್ಲೆಗಳಿಗೆ ಭೇಟಿ ನೀಡಿ ಎರಡು ದಿನಗಳ ಕಾಲ ತಪಾಸಣೆ ನಡೆಸುವಂತೆ ನಿರ್ದೇಶನ ನೀಡಲಾಗಿದೆ.

ಅಧಿಕಾರಿಗಳು – ಪರಿಶೀಲನೆಗೆ ನೀಡಿದ ಜಿಲ್ಲೆಗಳು

ಅಲೋಕ್ ಕುಮಾರ್, ಎಡಿಜಿಪಿ ಬೆಳಗಾವಿ ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ

ಆರ್. ಹಿತೇಂದ್ರ, ಎಡಿಜಿಪಿ ಹುಬ್ಬಳ್ಳಿ-ಧಾರವಾಡ ನಗರ, ಬೆಳಗಾವಿ ಜಿಲ್ಲೆ

ಬಿ.ಕೆ. ಸಿಂಗ್, ಎಡಿಜಿಪಿ ಮಂಗಳೂರು ನಗರ, ಮಂಡ್ಯ ಜಿಲ್ಲೆ

ಪಿ. ಹರಿಶೇಖರನ್, ಎಡಿಜಿಪಿ ಕಲಬುರಗಿ ನಗರ, ದಾವಣಗೆರೆ ಜಿಲ್ಲೆ

ಎಸ್. ಮುರುಗನ್, ಎಡಿಜಿಪಿ ಉಡುಪಿ, ದಕ್ಷಿಣ ಕನ್ನಡ

ಸೌಮೇಂದು ಮುಖರ್ಜಿ ಕೋಲಾರ, ತುಮಕೂರು ಜಿಲ್ಲೆ

ಎಂ. ಚಂದ್ರಶೇಖರ್, ಎಡಿಜಿಪಿ ಮೈಸೂರು ನಗರ, ಹಾಸನ ಜಿಲ್ಲೆ

ಡಾ. ತ್ಯಾಗರಾಜನ್ ಕೆ, ಐಜಿಪಿ ಯಾದಗಿರಿ, ಗದಗ ಜಿಲ್ಲೆ

ಚಂದ್ರ ಗುಪ್ತ, ಐಜಿಪಿ ಹಾವೇರಿ, ಬಳ್ಳಾರಿ ಜಿಲ್ಲೆ

ವಿಕಾಶ್ ಕುಮಾರ್ ವಿಕಾಶ್ ಐಜಿಪಿ ಚಿಕ್ಕಮಗಳೂರು, ಧಾರವಾಡ ಜಿಲ್ಲೆ

ಸಂದೀಪ್ ಪಾಟೀಲ್, ಐಜಿಪಿ ಚಿಕ್ಕಬಳ್ಳಾಪುರ, ವಿಜಯನಗರ ಜಿಲ್ಲೆ

ಎನ್. ಸತೀಶ್ ಕುಮಾರ್ ಐಜಿಪಿ ಮೈಸೂರು ಜಿಲ್ಲೆ, ಕೊಡಗು ಜಿಲ್ಲೆ

ದೇವಜ್ಯೋತಿ ರೇ ಐಜಿಪಿ ಕಲಬುರಗಿ, ಬೀದರ್ ಜಿಲ್ಲೆ

ವೈ.ಎಸ್. ರವಿ ಕುಮಾರ್, ಐಜಿಪಿ ಕೊಪ್ಪಳ, ಕೆ.ಜಿ.ಎಫ್. ಜಿಲ್ಲೆ

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

2 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

2 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

7 hours ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

3 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago