ರಾಜ್ಯದ ಬರ ಪರಿಸ್ಥಿತಿ, ಮಳೆಗಾಲ, ಕುಡಿಯುವ ನೀರು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಬರ ಪರಿಸ್ಥಿತಿ, ಮಳೆಗಾಲ, ಕುಡಿಯುವ ನೀರು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೂಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದರು.

ಮುಖ್ಯಮಂತ್ರಿಗಳ ಪ್ರಾರಂಭಿಕ ನುಡಿಗಳು ಇಂತಿವೆ:

ನೈಋತ್ಯ ಮುಂಗಾರು ನಮಗೆ ತೀವ್ರವಾಗಿ ಕೈಕೊಟ್ಟಿದೆ. ಪ್ರಸ್ತುತ ಮುಂಗಾರು ಬಿತ್ತನೆ ಗುರಿಯು ಕೇವಲ ಶೇಕಡಾ 34 ರಷ್ಟು ಮಾತ್ರ ತಲುಪಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ವ್ಯಾಪಕ ಬೆಳೆ ಹಾನಿಯಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹವು ಶೇಕಡಾ 34 ರಷ್ಟಕ್ಕೆ ಕುಸಿದಿದ್ದು, ಅಂತರ್ಜಲ ಮಟ್ಟವೂ ಸಹ ತೀವ್ರವಾಗಿ ಆಳಕ್ಕೆ ಕುಸಿಯುತ್ತಿದೆ.

ರಾಜ್ಯದ ಯಾವುದೇ ಒಬ್ಬ ನಾಗರಿಕನಿಗೆ ಅಥವಾ ಮೂಕ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆಯಾಗದಂತೆ ನೋಡಿಕೊಳ್ಳುವುದು ನಮ್ಮ ಪರಮೋಚ್ಚ ಕರ್ತವ್ಯವಾಗಿದೆ. ಇಡೀ ಆಡಳಿತ ಯಂತ್ರವು ಯುದ್ಧೋಪಾದಿಯಲ್ಲಿ ಕೆಲಸ ಮಾಡಬೇಕಿದೆ.

ನಿಮ್ಮ ಜಿಲ್ಲೆಗಳ ವ್ಯಾಪ್ತಿಯಲ್ಲಿ ಯಾವುದೇ ಲೋಪದೋಷಗಳಾದರೆ ಅದಕ್ಕೆ ನೇರವಾಗಿ ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು.
ತುರ್ತು ಬರ ಪರಿಹಾರ ಕಾರ್ಯಗಳಿಗೆ ರಾಜ್ಯ ಸರ್ಕಾರದಲ್ಲಿ ಹಣದ ಕೊರತೆಯೇ ಇಲ್ಲ. ನಿಮ್ಮ ಜಿಲ್ಲೆಗಳಿಗೆ ಅಗತ್ಯವಿರುವ ಹಣವನ್ನೂ ಕೊಟ್ಟಿದ್ದೇವೆ ಮತ್ತು ನಿರ್ಣಯ ಕೈಗೊಳ್ಳುವ ಅಧಿಕಾರವನ್ನೂ ನೀಡಿದ್ದೇವೆ. ಹಾಗಾಗಿ ಯಾವುದೇ ನೆಪವಿಲ್ಲದೇ, ತಳಮಟ್ಟದಲ್ಲಿ ಕೆಲಸದ ಪ್ರತ್ಯಕ್ಷ ರಿಸಲ್ಟ್‌ಗಳು ಮಾತ್ರ ಬೇಕು. ಎಲ್ಲಾ ಪರಿಹಾರ ಕ್ರಮಗಳಲ್ಲಿ ಶೇ. 100 ರಷ್ಟು ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು.

ಬರ ಪರಿಸ್ಥಿತಿಯ ವೈಜ್ಞಾನಿಕ ಅಧ್ಯಯನಕ್ಕಾಗಿ ಕೇಂದ್ರದ ತಂಡವನ್ನು ತಕ್ಷಣವೇ ಕಳುಹಿಸುವಂತೆ ಮತ್ತು ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಈಗಾಗಲೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ.

ಸಣ್ಣ ಮತ್ತು ಅತಿ ಸಣ್ಣ ರೈತರ ಸಂಪೂರ್ಣ ವಿವರಗಳನ್ನು ‘ಫ್ರೂಟ್ಸ್’ (FRUITS) ತಂತ್ರಾಂಶದ ಮೂಲಕ ಸಿದ್ಧವಾಗಿಟ್ಟುಕೊಂಡು, ಪ್ರತಿಯೊಂದು ಪರಿಹಾರವೂ ತಳಮಟ್ಟದ ಅರ್ಹ ಫಲಾನುಭವಿಗೆ ತಲುಪುವಂತೆ ನೋಡಿಕೊಳ್ಳಬೇಕು. ಅಧಿಕಾರಿಗಳ ಬೇಜವಾಬ್ದಾರಿಯಿಂದ ಅಥವಾ ತಾಂತ್ರಿಕ ಲೋಪದಿಂದ ಯಾವುದೇ ಒಬ್ಬ ರೈತನಿಗೆ ಬೆಳೆವಿಮೆ ಸಿಗದೆ ಇರುವುದು ಅಥವಾ ಪರಿಹಾರ ವಂಚಿತವಾಗುವ ಸ್ಥಿತಿ ಉದ್ಭವಿಸಲೇಬಾರದು. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬೆಳೆವಿಮೆ ಮಾಡಿಸುವಂತೆ ಪ್ರೇರೇಪಿಸಿ ಹಾಗೂ ಬೆಳೆಹಾನಿ ಸಮೀಕ್ಷೆಯನ್ನು ನಿಯಮಾನುಸಾರ ತಕ್ಷಣವೇ ಪೂರ್ಣಗೊಳಿಸಿ.

ನಮ್ಮ ಮೊದಲ ಮತ್ತು ಪ್ರಧಾನ ಆದ್ಯತೆ ಕುಡಿಯುವ ನೀರು. ರಾಜ್ಯದ ಯಾವುದೇ ಹಳ್ಳಿ ಅಥವಾ ನಗರದ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ತೊಂದರೆ ಕಾಣಿಸಿಕೊಳ್ಳಬಾರದು. ಸ್ಥಳೀಯ ನೀರಿನ ಮೂಲಗಳಿಲ್ಲದಿದ್ದರೆ, ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ಅಥವಾ ಟ್ಯಾಂಕರ್‌ಗಳ ಮೂಲಕ ತಕ್ಷಣವೇ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಿ. ಆದರೆ, ನೀರು ಸರಬರಾಜು ಮಾಡುವ ಮುನ್ನ ಕಡ್ಡಾಯವಾಗಿ ಅದರ ಗುಣಮಟ್ಟ ತಪಾಸಣೆ ನಡೆಸಬೇಕು. ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆಯಾಗಿ ಸಾಂಕ್ರಾಮಿಕ ರೋಗಗಳು ಹರಡದಂತೆ ತೀವ್ರ ಮುನ್ನೆಚ್ಚರಿಕೆ ವಹಿಸಿ. ಅಸ್ತಿತ್ವದಲ್ಲಿರುವ ಜಲಮೂಲಗಳು ಕಲುಷಿತವಾಗದಂತೆ ರಕ್ಷಿಸಿ ಮತ್ತು ಮಳೆನೀರು ಎಲ್ಲೂ ಪೋಲಾಗದಂತೆ ತಡೆಯಲು ಸಾರ್ವಜನಿಕರಲ್ಲಿ ಮಳೆನೀರು ಕೊಯ್ಲಿನ ಕುರಿತು ಜಾಗೃತಿ ಮೂಡಿಸಿ.

ಮಾನವರಷ್ಟೇ ಅಲ್ಲದೆ, ಜಾನುವಾರುಗಳ ಸಂರಕ್ಷಣೆಯೂ ಅಷ್ಟೇ ಮುಖ್ಯ. ಅಗತ್ಯವಿರುವ ಕಡೆಗಳಲ್ಲೆಲ್ಲ ತಕ್ಷಣವೇ ಮೇವಿನ ಬ್ಯಾಂಕ್‌ಗಳು ಹಾಗೂ ಗೋಶಾಲೆಗಳನ್ನು ತೆರೆಯಿರಿ. ಹಸಿವು ಮತ್ತು ನೀರಡಿಕೆಯಿಂದ ರಾಜ್ಯದಲ್ಲಿ ಒಂದೇ ಒಂದು ಜಾನುವಾರು ಕೂಡ ಸಾಯಬಾರದು.
ಸರ್ಕಾರದ ಎಲ್ಲಾ ಪರಿಹಾರ ಕ್ರಮಗಳು ಜನರನ್ನು ನೇರವಾಗಿ ತಲುಪಬೇಕು. ಬರದ ತೀವ್ರತೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟದ ಹಾಗೆ ಅವರನ್ನು ಆಡಳಿತ ಯಂತ್ರವು ಕೈಹಿಡಿಯಬೇಕು. ತಳಮಟ್ಟದಲ್ಲಿ ಆಡಳಿತ ಕಾರ್ಯವೈಖರಿ ಚುರುಕಾಗಬೇಕು ಎಂದು ಹೇಳಿದರು.

ಈ ವಿಡಿಯೋ ಸಂವಾದ ಸಭೆಯಲ್ಲಿ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಸಚಿವರಾದ ರಾಮಲಿಂಗರೆಡ್ಡಿ, ಕೆ.ಜೆ. ಜಾರ್ಜ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕ್ಷಯ ಮುಕ್ತ ಭಾರತ ಅಭಿಯಾನ: ಬಾಶೆಟ್ಟಿಹಳ್ಳಿಯಲ್ಲಿ ಜಾಗೃತಿ, ತಂಬಾಕು ನಿಯಂತ್ರಣ ಕಾಯ್ದೆಯಡಿ ದಂಡ

ಬಾಶೆಟ್ಟಿಹಳ್ಳಿ: ಪ್ರಾಥಮಿಕ ಆರೋಗ್ಯ ಕೇಂದ್ರ, ದೊಡ್ಡತುಮಕೂರು ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಸಹಭಾಗಿತ್ವದಲ್ಲಿ ಬಾಶೆಟ್ಟಿಹಳ್ಳಿ ಗ್ರಾಮದಲ್ಲಿ ಕ್ಷಯ ಮುಕ್ತ ಭಾರತ…

2 hours ago

ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ- ಪಿಡಿಒ ರಮೇಶ್

ಚಿಕ್ಕನಾಯಕನಹಳ್ಳಿ: ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ,  ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ…

8 hours ago

ಹಣದ ಹರಿವು

ಹೊರಹೋಗುವ ಸುಲಭ ದಾರಿಗಳು, ಒಳಬರುವ ಕಠಿಣ ಹಾದಿಗಳು....... ಖರ್ಚು ಮಾಡುವ ಸುಲಭ ಮಾರ್ಗಗಳು, ಸಂಪಾದನೆ ಮಾಡಲು ಕಠಿಣ ಹಾದಿಗಳು...... ಆಧುನಿಕತೆ…

9 hours ago

ಸೆ.6ರಂದು ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…

1 day ago

ದೌರ್ಬಲ್ಯ – ಶೋಷಣೆ – ಸ್ವಾಭಿಮಾನ……

ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…

1 day ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

3 days ago