ರಾಜ್ಯದ ಭೂ ದಾಖಲೆಗಳ ಡಿಜಟಲೀಕರಣ: ಜಿಲ್ಲೆಯಲ್ಲಿ 1236 ಪೋಡಿ ದುರಸ್ತಿ ಪೂರ್ಣ: ಪೋಡಿ ಅಭಿಯಾನದಲ್ಲಿ ರಾಜ್ಯಕ್ಕೆ ಬೆಂ.ಗ್ರಾ ಜಿಲ್ಲೆ ಪ್ರಥಮ- ಕಂದಾಯ ಸಚಿವ ಕೃಷ್ಣ ಬೈರೇಗೌಡ

ಕಳೆದ ಡಿಸೆಂಬರ್ ನಲ್ಲಿ ದರಖಾಸ್ತು ಪೋಡಿ ಅಭಿಯಾನ ಆರಂಭವಾಗಿ ರಾಜ್ಯದ್ಯಾಂತ ಇದುವರೆಗೂ ಅಂದಾಜು 5000 ಪೋಡಿ ದುರಸ್ತಿ ಆಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೂ 1236 ಪೋಡಿ ದುರಸ್ತಿ ಆಗಿದ್ದು ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಹೇಳಿದರು.

ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಸಮೀಪ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಕಂದಾಯ ಇಲಾಖೆ ಮತ್ತು ಭೂ ಮಾಪನ ಇಲಾಖೆಯಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನದ ವಿದ್ಯುಕ್ತ ಚಾಲನೆ ಮತ್ತು ಪೋಡಿ ದುರಸ್ತಿ/ ಹೊಸ ದಾಖಲೆ ವಿತರಣಾ ಸಮಾರಂಭವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಉದ್ಘಾಟಿಸಿ ಮಾತನಾಡಿದರು.

ಪೋಡಿ ದುರಸ್ತಿ ರೈತರ ಬಹುದೊಡ್ಡ ಸಮಸ್ಯೆ ಆಗಿತ್ತು. ಸರಳೀಕರಣ ಪೋಡಿ ಅಭಿಯಾನ ಕೈಗೊಳ್ಳಲು ಒಂದು ವರ್ಷಗಳ ಪೂರ್ವ ಸಿದ್ಧತೆ ನಡೆಸಿ ಕಳೆದ ಡಿಸೆಂಬರ್ ನಲ್ಲಿ ಚಾಲನೆ ನೀಡಲಾಯಿತು. ಕಳೆದ 50-60 ವರ್ಷಗಳ ಹಿಂದೆ ಮಂಜೂರಾದ ಜಮೀನುಗಳಿಗೆ ಈಗ ಪೋಡಿ ಮಾಡಲಾಗುತ್ತಿದೆ.

ಜಿಲ್ಲೆಯಲ್ಲಿ ಅಂದಾಜು 50000 ರೈತರಿಗೆ ಜಮೀನು ಮಂಜೂರು ಆಗಿದ್ದು, 18000 ರೈತರ ಬಳಿ ಪೋಡಿ ದುರಸ್ತಿಗೆ ಪೂರಕ ದಾಖಲೆಗಳಿವೆ. ಜಿಲ್ಲೆಯಲ್ಲಿ ಈಗ ನಡೆಯುತ್ತಿರುವ ಪೋಡಿ ಅಭಿಯಾನದ ವೇಗ ನೋಡಿದರೆ ಕನಿಷ್ಟ 6 ತಿಂಗಳಲ್ಲಿ 18000 ರೈತರಿಗೆ ಪ್ರತ್ಯೇಕ ಪೋಡಿ ದುರಸ್ತಿ ಮಾಡಿಸಬಹುದು. ಪೂರಕ ದಾಖಲೆಗಳು ಇಲ್ಲದಿರುವ ಜಮೀನುಗಳಿಗೆ ಮಿಸ್ಸಿಂಗ್ ಕಮಿಟಿ ಮುಂದೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.

*ಭೂ ದಾಖಲೆಗಳ ಡಿಜಟಲೀಕರಣ*

ಭೂ ದಾಖಲೆಗಳ ನಾಪತ್ತೆ, ಅಕ್ರಮ ವರ್ಗಾವಣೆ, ಅಕ್ರಮ ತಿದ್ದುಪಡಿ ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ದಾಖಲೆಗಳ ಡಿಜಿಟಲೀಕರಣ ಮಾಡಲಾಗುತ್ತಿದೆ. ಭೂ ಸುರಕ್ಷಾ ಯೋಜನೆಯಡಿ ರಾಜ್ಯದಲ್ಲಿರುವ ಎಲ್ಲಾ ಭೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಆನ್ಲೈನ್ ಲ್ಲಿ ಅಪ್ಲೋಡ್ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರು ಮನೆಯಲ್ಲಿ ಕೂತು ನಿಮ್ಮ ಜಮೀನುಗಳ ದಾಖಲೆಗಳನ್ನು ನೋಡಬಹುದಾಗಿದೆ. ಇದರಿಂದ ಪೋಡಿ ದುರಸ್ತಿಗೂ ಸಹಾಯವಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಪೋಡಿ ದುರಸ್ತಿ ಆಂದೋಲನಕ್ಕೆ ಹೆಚ್ಚು ಒತ್ತು ನೀಡಿ ರಾಜ್ಯದಲ್ಲಿ ಪ್ರಥಮ ಸ್ಥಾನ ಬರಲು ಕಾಣಿಭೂತರಾದ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಕಂದಾಯ ಇಲಾಖೆ ಅಧಿಕಾರಿಗಳ, ಸರ್ವೆ ಅಧಿಕಾರಿಗಳಿಗೆ ಪ್ರಶಂಸೆ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ಇದೇ ವೇಗ ಕಾಪಾಡಿಕೊಂಡು ಆದಷ್ಟು ಬೇಗ 18000 ಪೋಡಿ ಗಳನ್ನು ಶೀಘ್ರ ದುರಸ್ತಿಗೊಳಿಸಿ ಎಂದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ಜಮೀನುಗಳನ್ನು ಮಂಜೂರು ಮಾಡಿ ಸಾಕಷ್ಟು ವರ್ಷಗಳು ಕಳೆದರೂ ಇದುವರೆಗೂ ಪೋಡಿ ಆಗಿರಲಿಲ್ಲ. ಈಗ ನಮ್ಮ ಸರ್ಕಾರ ಕೈಗೆತ್ತಿಕೊಂಡು ವಿಶೇಷ ಅಭಿಯಾನದ ಮೂಲಕ ದರಖಾಸ್ತು ಪೋಡಿ ದುರಸ್ತಿ ಮಾಡಲಾಗುತ್ತಿದೆ ಇದಕ್ಕಾಗಿ ಕಂದಾಯ ಸಚಿವರಿಗೆ ಧನ್ಯವಾದಗಳು.

ಬಯಲು ಸೀಮೆ ಪ್ರದೇಶಗಳಲ್ಲಿ ಸಾಕಷ್ಟು ಜೀವಂತ ಕೆರೆಗಳಿದಾವೆ ಕೆರೆಗಳಲ್ಲಿ ಮಣ್ಣು ಹೂಳೆತ್ತುವ ಕೆಲಸ ಆಗಬೇಕು. ಕೆರೆಗಳಲ್ಲಿ ಹೂಳೆತ್ತುವುದರಿಂದ ಬಾವಿ, ಕೊಳವೆ ಬಾವಿಗಳಲ್ಲಿ ನೀರು ಬಂದು ರೈತರ ಬದುಕು ಹಸನಾಗುತ್ತದೆ ಎಂದರು.

*ರೈತರ ಜಮೀನುಗಳಿಗೆ, ಸ್ಮಶಾನಕ್ಕೆ ರಸ್ತೆ ಸಂಪರ್ಕ ಕಲ್ಪಿಸಿ*

ರೈತರು ಕಚೇರಿಗೆ ಬರುವುದನ್ನು ತಪ್ಪಿಸಿ, ಸರ್ಕರ ರೈತರ ಮನೆ ಬಾಗಿಲಿಗೆ ತಲುಪಬೇಕು ಎಂಬುದು ನನ್ನ ಅಭಿಪ್ರಾಯ. ಜಿಲ್ಲಾಡಳಿತ ಬಹಳ ಉತ್ತಮ ಕೆಲಸ ಮಾಡುತ್ತಿದೆ. ಬಡವರಿಗೆ ಮನೆ, ನಿವೇಶನ ಕೊಡುವಂತಹ ಕೆಲಸ ಆಗಬೇಕು. ಸಾಕಷ್ಟು ರೈತರು ಜಮೀನುಗಳಿಗೆ ತೆರಳಲು ರಸ್ತೆ ಇಲ್ಲ, ಕನಿಷ್ಟ 10 ಗುಂಟೆ ಜಮೀನು ಇದ್ದರು ರಸ್ತೆ ಕಲ್ಪಿಸಬೇಕು. ಸ್ಮಶಾನ ಇಲ್ಲದ ಗ್ರಾಮಗಳಿಗೆ ಸ್ಮಶಾನ ಒದಗಿಸಬೇಕು. ಇವೆಲ್ಲವನ್ನೂ ಈಡೇರಿಸಿದಾಗ ಮಾತ್ರ ಪೋಡಿ ಮುಕ್ತ ಗ್ರಾಮಗಳು ಸಾಧ್ಯ. ಈ ಸಮಸ್ಯೆಗಳನ್ನು ಸಹ ಆದ್ಯತೆ ಆಗಿ ತೆಗೆದುಕೊಂಡು ಪೋಡಿ ಅಭಿಯಾನದಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.

*1236 ಪೋಡಿ ದುರಸ್ತಿ ಪೂರ್ಣ: ಜಿಲ್ಲಾಧಿಕಾರಿ*

ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ ಅವರು ಮಾತನಾಡಿ ಪೋಡಿ ಮಾಡಿಸಿಕೊಳ್ಳದೇ ಹಲವು ರೈತರು ವ್ಯಾಪಾರ, ವ್ಯವಹಾರ, ಸೌಲಭ್ಯ ವಂಚಿತರಾಗುತ್ತಿದ್ದರು. ಸರ್ಕಾರವು ದರಖಾಸ್ತು ಪೋಡಿ ವಿಶೇಷ ಆಂದೋಲನ ಕೈಗೆತ್ತಿಕೊಂಡು ಹಲವು ವರ್ಷಗಳ ರೈತರ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿದೆ. ಹಿಂದೆ ಪೋಡಿ ಮಾಡಲಿಕ್ಕೆ ಹಲವಾರು ಸಮಸ್ಯೆ ಬರುತ್ತಿತ್ತು ಈಗ ಅದನ್ನು ಸುಲಭ ರೀತಿಯಲ್ಲಿ ಪೋಡಿ ಮಾಡಿಸಿಕೊಳ್ಳಬಹುದಾಗಿದೆ. ಕಳೆದ ಒಂದುವರೆ ತಿಂಗಳಲ್ಲಿ ನಮ್ಮ ಜಿಲ್ಲೆಯಲ್ಲಿ 1236 ಪೋಡಿಗಳನ್ನು ಮಾಡಲಾಗಿದೆ, ಜಿಲ್ಲೆಯ 70 ಗ್ರಾಮಗಳ 90 ಸರ್ವೆ ನಂಬರ್ ಗಳಲ್ಲಿ ಸರ್ವೆ ನಡೆಸಿ ದೊಡ್ಡಬಳ್ಳಾಪುರ 304,ಹೊಸಕೋಟೆ 301, ನೆಲಮಂಗಲ 302, ದೇವನಹಳ್ಳಿ 329 ಪೋಡಿ ದುರಸ್ತಿ ಮಾಡಲಾಗಿದೆ. ಸಮರೋಪಾದಿಯಲ್ಲಿ ಕೆಲಸ ಕಾರ್ಯ ನಿರ್ವಹಿಸಿದ್ದ ಎಲ್ಲಾ ಅಧಿಕಾರಿಗಳಿಗೂ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಕಿಯೋನಿಕ್ಸ್ ಅಧ್ಯಕ್ಷರು ಹಾಗೂ ಹೊಸಕೋಟೆ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ತಿನ ಶಾಸಕರಾದ ರವಿ, ನೆಲಮಂಗಲ ಶಾಸಕರಾದ ಶ್ರೀನಿವಾಸ, ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಭೂ ಮಾಪನ ಇಲಾಖೆಯ ಆಯುಕ್ತರಾದ ಮಂಜುನಾಥ್, ಕಂದಾಯ ಇಲಾಖೆ ಆಯುಕ್ತರಾದ ಪೆಮ್ಮಲ ಸುನೀಲ್ ಕುಮಾರ್, ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ, ಬಯಪ ಅಧ್ಯಕ್ಷರಾದ ಶಾಂತಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ಜಿಲ್ಲೆಯ ಜನಪ್ರತಿನಿಧಿಗಳು, ಸ್ಥಳಿಯ ಮುಖಂಡರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

9 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

14 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

14 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

19 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago