ರಾಜ್ಯದ ಭೂ ದಾಖಲೆಗಳ ಡಿಜಟಲೀಕರಣ: ಜಿಲ್ಲೆಯಲ್ಲಿ 1236 ಪೋಡಿ ದುರಸ್ತಿ ಪೂರ್ಣ: ಪೋಡಿ ಅಭಿಯಾನದಲ್ಲಿ ರಾಜ್ಯಕ್ಕೆ ಬೆಂ.ಗ್ರಾ ಜಿಲ್ಲೆ ಪ್ರಥಮ- ಕಂದಾಯ ಸಚಿವ ಕೃಷ್ಣ ಬೈರೇಗೌಡ

ಕಳೆದ ಡಿಸೆಂಬರ್ ನಲ್ಲಿ ದರಖಾಸ್ತು ಪೋಡಿ ಅಭಿಯಾನ ಆರಂಭವಾಗಿ ರಾಜ್ಯದ್ಯಾಂತ ಇದುವರೆಗೂ ಅಂದಾಜು 5000 ಪೋಡಿ ದುರಸ್ತಿ ಆಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೂ 1236 ಪೋಡಿ ದುರಸ್ತಿ ಆಗಿದ್ದು ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಹೇಳಿದರು.

ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಸಮೀಪ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಕಂದಾಯ ಇಲಾಖೆ ಮತ್ತು ಭೂ ಮಾಪನ ಇಲಾಖೆಯಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನದ ವಿದ್ಯುಕ್ತ ಚಾಲನೆ ಮತ್ತು ಪೋಡಿ ದುರಸ್ತಿ/ ಹೊಸ ದಾಖಲೆ ವಿತರಣಾ ಸಮಾರಂಭವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಉದ್ಘಾಟಿಸಿ ಮಾತನಾಡಿದರು.

ಪೋಡಿ ದುರಸ್ತಿ ರೈತರ ಬಹುದೊಡ್ಡ ಸಮಸ್ಯೆ ಆಗಿತ್ತು. ಸರಳೀಕರಣ ಪೋಡಿ ಅಭಿಯಾನ ಕೈಗೊಳ್ಳಲು ಒಂದು ವರ್ಷಗಳ ಪೂರ್ವ ಸಿದ್ಧತೆ ನಡೆಸಿ ಕಳೆದ ಡಿಸೆಂಬರ್ ನಲ್ಲಿ ಚಾಲನೆ ನೀಡಲಾಯಿತು. ಕಳೆದ 50-60 ವರ್ಷಗಳ ಹಿಂದೆ ಮಂಜೂರಾದ ಜಮೀನುಗಳಿಗೆ ಈಗ ಪೋಡಿ ಮಾಡಲಾಗುತ್ತಿದೆ.

ಜಿಲ್ಲೆಯಲ್ಲಿ ಅಂದಾಜು 50000 ರೈತರಿಗೆ ಜಮೀನು ಮಂಜೂರು ಆಗಿದ್ದು, 18000 ರೈತರ ಬಳಿ ಪೋಡಿ ದುರಸ್ತಿಗೆ ಪೂರಕ ದಾಖಲೆಗಳಿವೆ. ಜಿಲ್ಲೆಯಲ್ಲಿ ಈಗ ನಡೆಯುತ್ತಿರುವ ಪೋಡಿ ಅಭಿಯಾನದ ವೇಗ ನೋಡಿದರೆ ಕನಿಷ್ಟ 6 ತಿಂಗಳಲ್ಲಿ 18000 ರೈತರಿಗೆ ಪ್ರತ್ಯೇಕ ಪೋಡಿ ದುರಸ್ತಿ ಮಾಡಿಸಬಹುದು. ಪೂರಕ ದಾಖಲೆಗಳು ಇಲ್ಲದಿರುವ ಜಮೀನುಗಳಿಗೆ ಮಿಸ್ಸಿಂಗ್ ಕಮಿಟಿ ಮುಂದೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.

*ಭೂ ದಾಖಲೆಗಳ ಡಿಜಟಲೀಕರಣ*

ಭೂ ದಾಖಲೆಗಳ ನಾಪತ್ತೆ, ಅಕ್ರಮ ವರ್ಗಾವಣೆ, ಅಕ್ರಮ ತಿದ್ದುಪಡಿ ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ದಾಖಲೆಗಳ ಡಿಜಿಟಲೀಕರಣ ಮಾಡಲಾಗುತ್ತಿದೆ. ಭೂ ಸುರಕ್ಷಾ ಯೋಜನೆಯಡಿ ರಾಜ್ಯದಲ್ಲಿರುವ ಎಲ್ಲಾ ಭೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಆನ್ಲೈನ್ ಲ್ಲಿ ಅಪ್ಲೋಡ್ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರು ಮನೆಯಲ್ಲಿ ಕೂತು ನಿಮ್ಮ ಜಮೀನುಗಳ ದಾಖಲೆಗಳನ್ನು ನೋಡಬಹುದಾಗಿದೆ. ಇದರಿಂದ ಪೋಡಿ ದುರಸ್ತಿಗೂ ಸಹಾಯವಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಪೋಡಿ ದುರಸ್ತಿ ಆಂದೋಲನಕ್ಕೆ ಹೆಚ್ಚು ಒತ್ತು ನೀಡಿ ರಾಜ್ಯದಲ್ಲಿ ಪ್ರಥಮ ಸ್ಥಾನ ಬರಲು ಕಾಣಿಭೂತರಾದ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಕಂದಾಯ ಇಲಾಖೆ ಅಧಿಕಾರಿಗಳ, ಸರ್ವೆ ಅಧಿಕಾರಿಗಳಿಗೆ ಪ್ರಶಂಸೆ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ಇದೇ ವೇಗ ಕಾಪಾಡಿಕೊಂಡು ಆದಷ್ಟು ಬೇಗ 18000 ಪೋಡಿ ಗಳನ್ನು ಶೀಘ್ರ ದುರಸ್ತಿಗೊಳಿಸಿ ಎಂದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ಜಮೀನುಗಳನ್ನು ಮಂಜೂರು ಮಾಡಿ ಸಾಕಷ್ಟು ವರ್ಷಗಳು ಕಳೆದರೂ ಇದುವರೆಗೂ ಪೋಡಿ ಆಗಿರಲಿಲ್ಲ. ಈಗ ನಮ್ಮ ಸರ್ಕಾರ ಕೈಗೆತ್ತಿಕೊಂಡು ವಿಶೇಷ ಅಭಿಯಾನದ ಮೂಲಕ ದರಖಾಸ್ತು ಪೋಡಿ ದುರಸ್ತಿ ಮಾಡಲಾಗುತ್ತಿದೆ ಇದಕ್ಕಾಗಿ ಕಂದಾಯ ಸಚಿವರಿಗೆ ಧನ್ಯವಾದಗಳು.

ಬಯಲು ಸೀಮೆ ಪ್ರದೇಶಗಳಲ್ಲಿ ಸಾಕಷ್ಟು ಜೀವಂತ ಕೆರೆಗಳಿದಾವೆ ಕೆರೆಗಳಲ್ಲಿ ಮಣ್ಣು ಹೂಳೆತ್ತುವ ಕೆಲಸ ಆಗಬೇಕು. ಕೆರೆಗಳಲ್ಲಿ ಹೂಳೆತ್ತುವುದರಿಂದ ಬಾವಿ, ಕೊಳವೆ ಬಾವಿಗಳಲ್ಲಿ ನೀರು ಬಂದು ರೈತರ ಬದುಕು ಹಸನಾಗುತ್ತದೆ ಎಂದರು.

*ರೈತರ ಜಮೀನುಗಳಿಗೆ, ಸ್ಮಶಾನಕ್ಕೆ ರಸ್ತೆ ಸಂಪರ್ಕ ಕಲ್ಪಿಸಿ*

ರೈತರು ಕಚೇರಿಗೆ ಬರುವುದನ್ನು ತಪ್ಪಿಸಿ, ಸರ್ಕರ ರೈತರ ಮನೆ ಬಾಗಿಲಿಗೆ ತಲುಪಬೇಕು ಎಂಬುದು ನನ್ನ ಅಭಿಪ್ರಾಯ. ಜಿಲ್ಲಾಡಳಿತ ಬಹಳ ಉತ್ತಮ ಕೆಲಸ ಮಾಡುತ್ತಿದೆ. ಬಡವರಿಗೆ ಮನೆ, ನಿವೇಶನ ಕೊಡುವಂತಹ ಕೆಲಸ ಆಗಬೇಕು. ಸಾಕಷ್ಟು ರೈತರು ಜಮೀನುಗಳಿಗೆ ತೆರಳಲು ರಸ್ತೆ ಇಲ್ಲ, ಕನಿಷ್ಟ 10 ಗುಂಟೆ ಜಮೀನು ಇದ್ದರು ರಸ್ತೆ ಕಲ್ಪಿಸಬೇಕು. ಸ್ಮಶಾನ ಇಲ್ಲದ ಗ್ರಾಮಗಳಿಗೆ ಸ್ಮಶಾನ ಒದಗಿಸಬೇಕು. ಇವೆಲ್ಲವನ್ನೂ ಈಡೇರಿಸಿದಾಗ ಮಾತ್ರ ಪೋಡಿ ಮುಕ್ತ ಗ್ರಾಮಗಳು ಸಾಧ್ಯ. ಈ ಸಮಸ್ಯೆಗಳನ್ನು ಸಹ ಆದ್ಯತೆ ಆಗಿ ತೆಗೆದುಕೊಂಡು ಪೋಡಿ ಅಭಿಯಾನದಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.

*1236 ಪೋಡಿ ದುರಸ್ತಿ ಪೂರ್ಣ: ಜಿಲ್ಲಾಧಿಕಾರಿ*

ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ ಅವರು ಮಾತನಾಡಿ ಪೋಡಿ ಮಾಡಿಸಿಕೊಳ್ಳದೇ ಹಲವು ರೈತರು ವ್ಯಾಪಾರ, ವ್ಯವಹಾರ, ಸೌಲಭ್ಯ ವಂಚಿತರಾಗುತ್ತಿದ್ದರು. ಸರ್ಕಾರವು ದರಖಾಸ್ತು ಪೋಡಿ ವಿಶೇಷ ಆಂದೋಲನ ಕೈಗೆತ್ತಿಕೊಂಡು ಹಲವು ವರ್ಷಗಳ ರೈತರ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿದೆ. ಹಿಂದೆ ಪೋಡಿ ಮಾಡಲಿಕ್ಕೆ ಹಲವಾರು ಸಮಸ್ಯೆ ಬರುತ್ತಿತ್ತು ಈಗ ಅದನ್ನು ಸುಲಭ ರೀತಿಯಲ್ಲಿ ಪೋಡಿ ಮಾಡಿಸಿಕೊಳ್ಳಬಹುದಾಗಿದೆ. ಕಳೆದ ಒಂದುವರೆ ತಿಂಗಳಲ್ಲಿ ನಮ್ಮ ಜಿಲ್ಲೆಯಲ್ಲಿ 1236 ಪೋಡಿಗಳನ್ನು ಮಾಡಲಾಗಿದೆ, ಜಿಲ್ಲೆಯ 70 ಗ್ರಾಮಗಳ 90 ಸರ್ವೆ ನಂಬರ್ ಗಳಲ್ಲಿ ಸರ್ವೆ ನಡೆಸಿ ದೊಡ್ಡಬಳ್ಳಾಪುರ 304,ಹೊಸಕೋಟೆ 301, ನೆಲಮಂಗಲ 302, ದೇವನಹಳ್ಳಿ 329 ಪೋಡಿ ದುರಸ್ತಿ ಮಾಡಲಾಗಿದೆ. ಸಮರೋಪಾದಿಯಲ್ಲಿ ಕೆಲಸ ಕಾರ್ಯ ನಿರ್ವಹಿಸಿದ್ದ ಎಲ್ಲಾ ಅಧಿಕಾರಿಗಳಿಗೂ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಕಿಯೋನಿಕ್ಸ್ ಅಧ್ಯಕ್ಷರು ಹಾಗೂ ಹೊಸಕೋಟೆ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ತಿನ ಶಾಸಕರಾದ ರವಿ, ನೆಲಮಂಗಲ ಶಾಸಕರಾದ ಶ್ರೀನಿವಾಸ, ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಭೂ ಮಾಪನ ಇಲಾಖೆಯ ಆಯುಕ್ತರಾದ ಮಂಜುನಾಥ್, ಕಂದಾಯ ಇಲಾಖೆ ಆಯುಕ್ತರಾದ ಪೆಮ್ಮಲ ಸುನೀಲ್ ಕುಮಾರ್, ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ, ಬಯಪ ಅಧ್ಯಕ್ಷರಾದ ಶಾಂತಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ಜಿಲ್ಲೆಯ ಜನಪ್ರತಿನಿಧಿಗಳು, ಸ್ಥಳಿಯ ಮುಖಂಡರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

9 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

9 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

14 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

23 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago